Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚೆಕ್ ಬೌನ್ಸ್ ಪ್ರಕರಣ | ಆರೋಪಿ ಗೈರು...

ಚೆಕ್ ಬೌನ್ಸ್ ಪ್ರಕರಣ | ಆರೋಪಿ ಗೈರು ಹಾಜರಿಯಲ್ಲಿ ವಿಚಾರಣೆ ಮುಂದುವರಿಸಲು ಸಾಧ್ಯವಿಲ್ಲ: ಹೈಕೋರ್ಟ್

12 March 2023 5:21 PM IST
share
ಚೆಕ್ ಬೌನ್ಸ್ ಪ್ರಕರಣ | ಆರೋಪಿ ಗೈರು ಹಾಜರಿಯಲ್ಲಿ ವಿಚಾರಣೆ ಮುಂದುವರಿಸಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು, ಮಾ. 12: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿ ಗೈರು ಹಾಜರಿದ್ದಾಗ ಎಕ್ಸ್ ಪಾರ್ಟಿ (ಒಂದು ಕಡೆ ಮಾತ್ರ) ಮಾಡಿ ವಿಚಾರಣೆ ಮುಂದುವರೆಸಲು, ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಹಾಗೆಯೇ, ಆರೋಪಿಗೆ ಸಮನ್ಸ್ ಜಾರಿ ಮಾಡಿದ ನಂತರವೂ ಗೈರು ಹಾಜರಾದರೆ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಾಧ್ಯವಿರುವ ಇನ್ನಿತರೆ ಕ್ರಮಗಳನ್ನು ಕೈಗೊಳ್ಳಬೇಕು. ಬದಲಿಗೆ ಎಕ್ಸ್ ಪಾರ್ಟಿ ಮಾಡಿ ಕಾನೂನು ಪ್ರಕ್ರಿಯೆಗಳನ್ನು ಮುಂದುವರೆಸಬಾರದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಚೆಕ್ ಬೌನ್ಸ್ ಕೇಸ್‍ನಲ್ಲಿ ಉಡುಪಿಯ ಜೆಎಂಎಫ್‍ಸಿ ನ್ಯಾಯಾಲಯ ತಮಗೆ ವಿಧಿಸಿರುವ ಶಿಕ್ಷೆ ಹಾಗೂ ಅದನ್ನು ಎತ್ತಿ ಹಿಡಿದಿರುವ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅದೇಶ ರದ್ದು ಕೋರಿ ಶಿವಮೊಗ್ಗದ ಅಬ್ದುಲ್ ಎಂಬುವರು ಸಲ್ಲಿಸಿದ್ದ ಕ್ರಿಮಿನಲ್ ರಿವಿಷನ್ ಪಿಟಿಷನ್ ಅರ್ಜಿಗಳನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ತೀರ್ಪು ನೀಡಿದೆ.

ಪೀಠ ತನ್ನ ತೀರ್ಪಿನಲ್ಲಿ, ಜೆಎಂಎಫ್‍ಸಿ ಕೋರ್ಟ್ ಕಾನೂನು ಪ್ರಕ್ರಿಯೆಗಳನ್ನು ಪಾಲಿಸದೇ ಅರ್ಜಿದಾರರಿಗೆ ಶಿಕ್ಷೆ ವಿಧಿಸಿದೆ, ಈ ಅದೇಶವನ್ನು ಸೆಷನ್ಸ್ ಕೋರ್ಟ್ ಕೂಡ ಸರಿಯಾಗಿ ಪರಿಶೀಲಿಸದೇ ಪುರಸ್ಕರಿಸಿದೆ. ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಗಳನ್ನು ಕೈಬಿಡಲಾಗಿದೆ. ಸುಪ್ರೀಂಕೋರ್ಟ್ ತೀರ್ಪುಗಳನ್ನು ಕೂಡ ಅರ್ಥೈಸಿಕೊಳ್ಳುವಲ್ಲಿ ವಿಚಾರಣಾ ನ್ಯಾಯಾಲಯಗಳು ವಿಫಲವಾಗಿವೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಅಲ್ಲದೇ, ಸಿಆರ್‍ಪಿಸಿ ಸೆಕ್ಷನ್ 299ರ ಸಂದರ್ಭಗಳ ಹೊರತಾಗಿ ಸೆಕ್ಷನ್ 273ರ ಪ್ರಕಾರ ಅರೋಪಿ ಎದುರಲ್ಲೇ ವಿಚಾರಣಾ ಪ್ರಕ್ರಿಯೆ ನಡೆಯಬೇಕೆಂದು ಸ್ಪಷ್ಟವಾಗಿ ಹೇಳಲಾಗಿದೆ. ಆರೋಪಿಯ ಅಥವಾ ಆರೋಪಿ ಪರ ವಕೀಲರ ಗೈರು ಹಾಜರಿಯಲ್ಲಿ ಸಾಕ್ಷ್ಯಗಳನ್ನು ದಾಖಲಿಸಲು ಅವಕಾಶವಿಲ್ಲ. ಈ ಪ್ರಕರಣದಲ್ಲಿ ಆರೋಪಿ ಗೈರು ಹಾಜರಾಗಿದ್ದಾರೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತಹ ಯಾವುದೇ ಕ್ರಮಗಳನ್ನು ವಿಚಾರಣಾ ನ್ಯಾಯಾಲಯ ಕೈಗೊಂಡಂತೆ ಕಾಣುವುದಿಲ್ಲ.

ಸುಪ್ರೀಂಕೋರ್ಟ್ ತೀರ್ಪುಗಳನ್ನು ಕೂಡ ಸರಿಯಾಗಿ ಅರ್ಥೈಸಿಕೊಂಡಿಲ್ಲ. ಕಾನೂನು ಪ್ರಕ್ರಿಯೆಗಳನ್ನು ಕೈಬಿಟ್ಟು ಅರ್ಜಿದಾರರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿರುವ ವಿಚಾರಣಾ ನ್ಯಾಯಾಯಗಳ ಕ್ರಮ ನಿಯಮ ಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಪ್ರಕರಣವೇನು?: ಉಡುಪಿಯ ಮೊಹಮ್ಮದ್ ಇಕ್ವಾಲ್ ಎಂಬುವರು ಶಿವಮೊಗ್ಗದ ಆಗುಂಬೆಯ ಅಬ್ದುಲ್ ಎಂಬುವರ ವಿರುದ್ಧ 6 ಚೆಕ್ ಬೌನ್ಸ್ ಕೇಸ್‍ಗಳನ್ನು ದಾಖಲಿಸಿದ್ದರು, ಈ ಪ್ರಕರಣಗಳ ವಿಚಾರಣೆ ನಡೆಸಿದ್ದ 3ನೆ ಹೆಚ್ಚುವರಿ ಸಿವಿಲ್ ಅಂಡ್ ಜೆಎಂಎಫ್‍ಸಿ ಕೋರ್ಟ್ ಆರೋಪಿ ಗೈರು ಹಾಜರಿಯಲ್ಲಿ ವಿಚಾರಣೆ ಮುಗಿಸಿ ಶಿಕ್ಷೆ ವಿಧಿಸಿತ್ತು, ಈ ಆದೇಶವನ್ನು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪುರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು, ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ.ಹೆಗ್ಡೆ ವಾದ ಮಂಡಿಸಿದ್ದರು. 

share
Next Story
X