ರಾಷ್ಟ್ರೀಯ ಯೂಥ್ ಅಥ್ಲೆಟಿಕ್ ಚಾಂಪಿಯನ್ಶಿಪ್: ಹರಿಯಾಣ ರಾಜ್ಯಕ್ಕೆ ಸಮಗ್ರ ಪ್ರಶಸ್ತಿ

ಉಡುಪಿ, ಮಾ.12: ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ಮತ್ತು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ 18ನೇ ರಾಷ್ಟ್ರೀಯ ಯೂಥ್ ಅಥ್ಲೆಟಿಕ್ ಚಾಂಪಿಯನ್ ಶಿಪ್ನಲ್ಲಿ ಹರಿಯಾಣ ರಾಜ್ಯ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.
ಪುರುಷರ ವಿಭಾಗದಲ್ಲಿ ಉತ್ತರ ಪ್ರದೇಶ ರಾಜ್ಯ ಹಾಗೂ ಮಹಿಳೆಯರ ವಿಭಾಗದಲ್ಲಿ ಹರಿಯಾಣ ರಾಜ್ಯವು ಚಾಂಪಿಯನ್ಶಿಪ್ ಪಡೆದುಕೊಂಡಿದೆ. ಉತ್ತಮ ಅಥ್ಲೆಟ್ಸ್ ಪ್ರಶಸ್ತಿಯನ್ನು ಪುರುಷರ ವಿಭಾಗದಲ್ಲಿ ಮಹಾರಾಷ್ಟ್ರದ ಸಂದೀಪ್ ವಿನೋದ್ ಗೊಂಡಾ ಹಾಗೂ ಮಹಿಳೆಯರ ವಿಭಾಗದಲ್ಲಿ ಪಶ್ಚಿಮ ಬಂಗಾಳದ ರಿರೆನಾ ಮಲಿಕ್ ಹೀನಾ ತನ್ನದಾಗಿಸಿಕೊಂಡರು.
ರವಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ಶಾಸಕ ಕೆ.ರಘುಪತಿ ಭಟ್ ವಿಜೇತರಿಗೆ ಬಹುಮಾನ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚೀಂದ್ರ, ಎ.ಎಫ್.ಐ ಓರ್ಗನೈಸಿಂಗ್ ಡೆಲಿಗೇಟ್ ಸತೀಶ್ ಉಚ್ಚಿಲ, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಗೌರವ ಸಲಹೆಗಾರ ಅಶೋಕ್ ಅಡ್ಯಂತಾಯ, ಬ್ರಹ್ಮಾವರ ಮದರ್ ಪ್ಯಾಲೇಸ್ ನಿರ್ದೇಶಕ ಭರತ್ ಕುಮಾರ್ ಶೆಟ್ಟಿ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಎಚ್.ಟಿ. ಮಹಾದೇವ ಮಾತನಾಡಿದರು.
ಅಧ್ಯಕ್ಷತೆಯನ್ನು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ನಿರಂಜನ್ ಚಿಪ್ಳೂಂಕರ್ ವಹಿಸಿದ್ದರು. ಮಣಿಪಾಲ ಎಚ್ಆರ್ಪಿ ಗ್ರೂಪ್ ಅಧ್ಯಕ್ಷ ಹರಿಪ್ರಸಾದ್ ರೈ, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕೆಂಪರಾಜ್ ಎಚ್.ಬಿ., ರಾಜ್ಯ ಕಾರ್ಯದರ್ಶಿ ರಾಜವೇಲು, ಜಿಲ್ಲಾ ಕೋಶಾಧಿಕಾರಿ ದೀಪಕ್ ರಾಮ್ ಬಾಯಾರಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಶೆಟ್ಟಿ ಉಪಸ್ಥಿತರಿದ್ದರು.
ಮಹಿಳಾ ಪದವಿ ಕಾಲೇಜಿನ ದೈಹಿಕ ನಿರ್ದೇಶಕ ರಾಮಚಂದ್ರ ಪಟ್ಕರ್ ಸ್ವಾಗತಿಸಿದರು. ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಕಾರ್ಯದರ್ಶಿ ದಿನೇಶ್ ಕುಮಾರ್ ವಂದಿಸಿದರು. ಚಿತ್ರಪಾಡಿ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.