Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಿಕ್ಷಣವು ಮಾರಾಟದ ಸರಕಾಗಿದೆ: ಜೀವನ್‌...

ಶಿಕ್ಷಣವು ಮಾರಾಟದ ಸರಕಾಗಿದೆ: ಜೀವನ್‌ ರಾಜ್ ಕುತ್ತಾರ್

ಡಿವೈಎಫ್‌ಐ ವತಿಯಿಂದ ಮಂಗಳೂರು ನಗರ ಸಮ್ಮೇಳನ

12 March 2023 9:59 PM IST
share
ಶಿಕ್ಷಣವು ಮಾರಾಟದ ಸರಕಾಗಿದೆ: ಜೀವನ್‌ ರಾಜ್ ಕುತ್ತಾರ್
ಡಿವೈಎಫ್‌ಐ ವತಿಯಿಂದ ಮಂಗಳೂರು ನಗರ ಸಮ್ಮೇಳನ

ಮಂಗಳೂರು: ಪ್ರಸ್ತುತ ಶಿಕ್ಷಣವು ಮಾರಾಟದ ಸರಕಾಗಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ಮಾಡಿದವರು ಉದ್ಯೋಗವಿಲ್ಲದೆ ಅಲೆಯುವಂತಾಗಿದೆ. ಮಂಗಳೂರಿನಲ್ಲಿ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಯಾವುದೇ ಉದ್ಯೋಗವಿಲ್ಲ. ಅದಕ್ಕಾಗಿ ಬೆಂಗಳೂರಿಗೆ ತೆರಳಿ 10 ಸಾವಿರ ರೂಪಾಯಿಗೆ ದುಡಿಯಬೇಕಾದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಯೆನೆಪೊಯ ಕಾಲೇಜು ಉಪ ಪ್ರಾಂಶುಪಾಲ ಜೀವನ್‌ ರಾಜ್ ಕುತ್ತಾರ್ ತಿಳಿಸಿದ್ದಾರೆ.

ತುಳುನಾಡಿನ ಅಭಿವೃದ್ಧಿಯಲ್ಲಿ ತುಳುನಾಡಿನ ಯುವಜನರಿಗೆ ದೊಡ್ಡಪಾಲು, ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ನೀಡಿ ಎಂಬ ಘೋಷಣೆಯಡಿಯಲ್ಲಿ ಭಾರತ ಪ್ರಜಾಸತಾತ್ಮಕ ಯುವಜನ ಫೆಡರೇಷನ್‌ನ (ಡಿವೈಎಫ್‌ಐ) 13ನೇ ಮಂಗಳೂರು ನಗರ ಸಮ್ಮೇಳನವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ಎಲ್‌ಕೆಜಿ, ಯುಕೆಜಿಯ ಶುಲ್ಕ ಪಾವತಿಸಲು ಕೂಡಾ ಸಾಲ ಮಾಡಬೇಕಾದ ಸ್ಥಿತಿಯಿದೆ. ಇದಕ್ಕೆಲ್ಲ ಪ್ರಮುಖ ಕಾರಣ ಈ ಸರಕಾರದ ವ್ಯವಸ್ಥೆ. ನಮ್ಮ ತುಳುನಾಡಿನ ಅಭಿವೃದ್ಧಿಗೆ ನಮ್ಮ ಜನರ ಪಾಲು ದೊಡ್ಡದು. ಆದರೆ ಇಲ್ಲಿ ದೊಡ್ಡ ದೊಡ್ಡ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಉದ್ಯೋಗವನ್ನು ನೀಡಲಾಗುತ್ತಿಲ್ಲ, ಎಂದು ಹೇಳಿದರು.

ಜನರಿಗೆ ಯಾವುದೇ ಸುಳಿವು ಇಲ್ಲದೆಯೇ ನಗರದಲ್ಲಿ ಡ್ರಗ್ಸ್ ಜಾಲ ಅತೀ ವಿಸ್ತಾರವಾಗಿ ಬೆಳೆದಿದೆ. ಪ್ರಮುಖವಾಗಿ ಹೈಸ್ಕೂಲ್ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಡ್ರಗ್ಸ್ ಪೆಡ್ಲರ್‌ಗಳಾಗುತ್ತಿದ್ದಾರೆ. ಕ್ಲಬ್, ಪಬ್‌ಗಳಲ್ಲಿ ಮಾಸಿಕ ಒಂದು ಬಾರಿ ನಡೆಸಲಾಗುವ ಉಚಿತ ಪಾರ್ಟಿಗೆ ಹೋದ ವಿದ್ಯಾರ್ಥಿಗಳು ಡ್ರಗ್ಸ್ ಚಟಕ್ಕೆ ಒಳಗಾಗುತ್ತಿದ್ದಾರೆ. ಯುವಜನರು ಉದ್ಯೋಗ, ಮೊದಲಾದ ಸಮಸ್ಯೆಯ ಬಗ್ಗೆ ಮಾತನಾಡಬಾರದು ಎಂದೇ ವ್ಯವಸ್ಥಿತವಾಗಿ ಅವರು ಡ್ರಗ್ ವ್ಯಸನಿಗಳಾಗುವಂತೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲರಿಗೂ ತಿಳಿದಿದ್ದರೂ ಏನೂ ಕ್ರಮಕೈಗೊಳ್ಳ ದಂತಹ ಸ್ಥಿತಿಯಲ್ಲಿ ಈ ಜಾಲ ವಿಸ್ತರಿಸಬಹುದು, ಎಂದು ಜೀವನ್‌ರಾಜ್ ಕುತ್ತಾರ್ ಆತಂಕ ವ್ಯಕ್ತಪಡಿಸಿದರು.

ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಝ್, ನಾವು ದೇಶವನ್ನು ಮೋದಿ ಆಳುತ್ತಿದ್ದಾರೆ ಎಂದುಕೊಂಡಿದ್ದೇವೆ, ಆದರೆ ನೈಜವಾಗಿ ಆಳುವುದು ಆರ್‌ಎಸ್‌ಎಸ್ ಸಂಘಟನೆಯಾಗಿದೆ. ಆರ್‌ಎಸ್‌ಎಸ್ ಶತ್ರುಗಳನ್ನು ಗುರುತಿಸಿ‌ ಕೊಂಡೇ ಯೋಜನೆ ರೂಪಿಸುತ್ತಿದೆ. ಮುಸ್ಲಿಮರು, ಕ್ರೈಸ್ತರು, ಎಡಪಕ್ಷದವರನ್ನು ಗುರಿಯಾಗಿಸಿಕೊಂಡಿದೆ. ತಮ್ಮ ವಿರುದ್ಧ ಮಾತನಾಡುವವರ ಮೇಲೆ ನೇರ ದಾಳಿಯನ್ನು ನಡೆಸುತ್ತಿದೆ. ನ್ಯಾಯಾಂಗ ವ್ಯವಸ್ಥೆಯನ್ನೇ ತನ್ನ ಹತೋಟಿಯಲ್ಲಿ ಇಟ್ಟುಕೊಂಡಿದೆ ಎಂದು ಆರೋಪಿಸಿದರು.

ಅಧ್ಯಕ್ಷತೆಯನ್ನು ಡಿವೈಎಫ್‌ಐ ಅಧ್ಯಕ್ಷ ನವೀನ್ ಕೊಂಚಾಡಿ ವಹಿಸಿದರು. ಸಮಾರಂಭದಲ್ಲಿ ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್,  ಡಿವೈಎಫ್‌ಐ ನಗರ ಉಪಾಧ್ಯಕ್ಷೆ ಮಾಧುರಿ ಬೋಳಾರ್ ಹಾಜರಿದ್ದರು. ಡಿವೈಎಫ್‌ಐ ನಗರ ಕಾರ್ಯದರ್ಶಿ ಸಾದಿಕ್ ಕಣ್ಣೂರು ಕಾರ್ಯಕ್ರಮ ನಿರ್ವಹಣೆ ಮಾಡಿದರು. 

share
Next Story
X