Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನ್ಯಾಯಾಂಗ ಸುಧಾರಣೆ ವಿರೋಧಿಸಿ ಇಸ್ರೇಲ್...

ನ್ಯಾಯಾಂಗ ಸುಧಾರಣೆ ವಿರೋಧಿಸಿ ಇಸ್ರೇಲ್ ನಲ್ಲಿ ಬೃಹತ್ ಪ್ರತಿಭಟನೆ

12 March 2023 11:00 PM IST
share
ನ್ಯಾಯಾಂಗ ಸುಧಾರಣೆ ವಿರೋಧಿಸಿ ಇಸ್ರೇಲ್ ನಲ್ಲಿ ಬೃಹತ್ ಪ್ರತಿಭಟನೆ

ಟೆಲ್ಅವೀವ್, ಮಾ.12: ನ್ಯಾಯಾಂಗದಲ್ಲಿ ಸುಧಾರಣೆ ಮಾಡುವ ಸರಕಾರದ ಯೋಜನೆಯನ್ನು ವಿರೋಧಿಸಿ ದೇಶದಾದ್ಯಂತ ಸತತ 10ನೇ ವಾರವೂ ಭಾರೀ ಪ್ರತಿಭಟನೆ ಮುಂದುವರಿದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಶನಿವಾರ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ 5 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡಿದ್ದು ಇದು ಇಸ್ರೇಲ್ ನ ಇತಿಹಾಸದಲ್ಲೇ ಅತ್ಯಂತ ಬೃಹತ್ ಪ್ರತಿಭಟನೆಯಾಗಿ ದಾಖಲಾಗಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಕರಾವಳಿ ನಗರ ಟೆಲ್ಅವೀವ್ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸುಮಾರು 2 ಲಕ್ಷ ಪ್ರತಿಭಟನಾಕಾರರು ಪಾಲ್ಗೊಂಡಿದ್ದರು. ಹೊಸ ಸರಕಾರವು ತೆಗೆದುಕೊಳ್ಳಲು ಬಯಸುವ ಕ್ರಮಗಳು  ಇಸ್ರೇಲಿ ಪ್ರಜಾಪ್ರಭುತ್ವಕ್ಕೆ ನಿಜವಾದ ಮತ್ತು ತಕ್ಷಣದ ಬೆದರಿಕೆಯನ್ನು ಪ್ರತಿನಿಧಿಸುತ್ತದೆ ಎಂದವರು ಘೋಷಣೆ ಕೂಗುತ್ತಿದ್ದರು. ಉತ್ತರದ ಹೈಫಾ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಸುಮಾರು 50,000, ಬೀರ್ಶೆಬಾ ನಗರದಲ್ಲಿ ಸುಮಾರು 10,000 ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಟೆಲ್ಅವೀವ್ನ ರಿಂಗ್ರೋಡ್ನಲ್ಲಿ ವಾಹನ ಸಂಚಾರಕ್ಕೆ ತಡೆಯೊಡ್ಡಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಧ್ಯೆ, ಸರಕಾರ ಸಂಸತ್ತಿನಲ್ಲಿ ಮಂಡಿಸಿರುವ ನ್ಯಾಯಾಂಗ ಸುಧಾರಣೆ ಮಸೂದೆಯನ್ನು ಮತಕ್ಕೆ ಹಾಕುವ ಮುನ್ನ, ಇದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು  ರವಿವಾರದಿಂದ ಬುಧವಾರದವರೆಗೆ ಪ್ರತೀ ದಿನ ನಡೆಸುವುದಾಗಿ ಸಂಸತ್ತಿನ ಕಾನೂನು ಸ್ಥಾಯಿ ಸಮಿತಿ ಅಧ್ಯಕ್ಷ ಸಿಮ್ಚ ರೊಟ್ಮನ್ ಹೇಳಿದ್ದಾರೆ. ನ್ಯಾಯಾಂಗ ಸುಧಾರಣೆ ಕಾನೂನಿಗೆ ಪೂರಕವಾದ ಕೆಲವು ಮಸೂದೆಗಳಿಗೆ ಸಂಸತ್ತಿನ ಮಂಜೂರಾತಿ ಪಡೆಯಲು ಮೈತ್ರಿ ಸರಕಾರ ಸಿದ್ಧತೆ ನಡೆಸುತ್ತಿದೆ ಎಂದು ನ್ಯಾಯ ಸಚಿವ ಯಾರಿವ್ ಲೆವಿನ್ ಹೇಳಿದ್ದಾರೆ.

ಕಟ್ಟಾ ಬಲಪಂಥೀಯ ಹಾಗೂ ಕಟ್ಟಾ ಸಂಪ್ರದಾಯವಾದಿ ಯೆಹೂದಿ ಪಕ್ಷಗಳ ಬೆಂಬಲದಿಂದ ಮೈತ್ರಿ ಸರಕಾರ ರಚಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಡಳಿತ ನ್ಯಾಯಾಂಗ ಸುಧಾರಣೆ ಮಸೂದೆಗೆ ಸಂಸತ್ತಿನ ಅನುಮೋದನೆ ಪಡೆಯುವ ವಿಶ್ವಾಸದಲ್ಲಿದೆ. ನ್ಯಾಯಾಂಗ ಸುಧಾರಣೆ ಕಾನೂನು ಜಾರಿಯಾದರೆ ನ್ಯಾಯಾಧೀಶರನ್ನು ನೇಮಕಗೊಳಿಸುವ ಸಮಿತಿಯಲ್ಲಿ ಸರಕಾರದ ಹಿಡಿತ ಹೆಚ್ಚಲಿದೆ ಮತ್ತು ಇಸ್ರೇಲ್ನ ಅರೆ-ಸಂವಿಧಾನ ಎಂದು ಕರೆಯಲಾಗುವ ಮೂಲಭೂತ ಕಾನೂನುಗಳಿಗೆ ಯಾವುದೇ ತಿದ್ದುಪಡಿಯನ್ನು ರದ್ದುಗೊಳಿಸುವ ಸುಪ್ರೀಂಕೋರ್ಟ್ ನ ಹಕ್ಕನ್ನು ನಿರಾಕರಿಸುತ್ತದೆ. ಅಲ್ಲದೆ ಸುಪ್ರೀಂಕೋರ್ಟ್ ತೀರ್ಪನ್ನು ಸಂಸತ್ತಿನಲ್ಲಿ 61 ಸದಸ್ಯರ ಸರಳ ಬಹುಮತದೊಂದಿಗೆ ರದ್ದುಗೊಳಿಸುವ ಅಧಿಕಾರವನ್ನೂ ಸರಕಾರಕ್ಕೆ ನೀಡುತ್ತದೆ.

ಈ ಮಧ್ಯೆ, ಮಸೂದೆಯು ಪ್ರಜಾಪ್ರಭುತ್ವದ ಮೂಲಾಧಾರಕ್ಕೆ ಒಂದು ಬೆದರಿಕೆಯಾಗಿರುವುದರಿಂದ ಅದನ್ನು ತಡೆಹಿಡಿಯಬೇಕು ಮತ್ತು ಇತರ ಪಕ್ಷಗಳೊಂದಿಗೆ ಚರ್ಚೆಗೆ ಮುಂದಾಗುವಂತೆ  ಔಪಚಾರಿಕ ಅಧಿಕಾರ ಹೊಂದಿರುವ ಇಸ್ರೇಲ್ ಅಧ್ಯಕ್ಷ ಇಸಾಕ್ ಹೆರ್ಝಾಗ್ ಮೈತ್ರಿ ಸರಕಾರಕ್ಕೆ ಕರೆ ನೀಡಿದ್ದಾರೆ.

ಮೀಸಲು ಪಡೆಯಿಂದಲೂ ವಿರೋಧ

ಇಸ್ರೇಲ್ ರಕ್ಷಣಾ ಪಡೆಯ ಬೆನ್ನೆಲುಬು ಎನಿಸಿರುವ ಬಲಿಷ್ಟ ಮೀಸಲು ಪಡೆಯ ಸಿಬಂದಿಗಳೂ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು  ಕರ್ತವ್ಯಕ್ಕೆ ಹಾಜರಾಗಲು ನಿರಾಕರಿಸಿರುವುದರಿಂದ ಸರಕಾರ ಮುಜುಗುರಕ್ಕೆ ಒಳಗಾಗಿದೆ. ಸರಕಾರದ ನಿರ್ಧಾರವನ್ನು ವಿರೋಧಿಸಿ ಕಳೆದ ವಾರ ಇಸ್ರೇಲ್ ವಾಯುಪಡೆಯ ಮೀಸಲು ಪೈಲಟ್ಗಳು ತರಬೇತಿಗೆ ಹಾಜರಾಗಲು ನಿರಾಕರಿಸಿದ್ದರು. ಆದರೆ ಆ ಬಳಿಕ ಅವರ ಮನ ಒಲಿಸುವಲ್ಲಿ ರಕ್ಷಣಾ ಪಡೆಯ ಮುಖ್ಯಸ್ಥರು ಸಫಲವಾದರು ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿದ ವರದಿ ತಿಳಿಸಿದೆ.

ಗುರುವಾರ ನಡೆದ ಪ್ರತಿಭಟನೆ ಸಂದರ್ಭ, ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿದೇಶಕ್ಕೆ ತೆರಳುವುದಕ್ಕೆ ಪ್ರತಿಭಟನಾಕಾರರು ಅಡ್ಡಿಮಾಡಿದ್ದರು. ಬಳಿಕ ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಚದುರಿಸಿ, ನೆತನ್ಯಾಹು ರೋಮ್ಗೆ ತೆರಳಲು ಅನುವು ಮಾಡಿಕೊಟ್ಟರು ಎಂದು ವರದಿಯಾಗಿದೆ.

share
Next Story
X