Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ|ಕಾನೂನು ಬದ್ಧವಾಗಿ ಚುನಾವಣೆ...

ಉಳ್ಳಾಲ|ಕಾನೂನು ಬದ್ಧವಾಗಿ ಚುನಾವಣೆ ನಡೆಸಿ ವಕ್ಫ್ ಬೋರ್ಡ್ ದರ್ಗಾ ಸಮಿತಿ ರಚಿಸಿದೆ: ಬಿ.ಜಿ ಹನೀಫ್ ಹಾಜಿ

13 March 2023 2:51 PM IST
share
ಉಳ್ಳಾಲ|ಕಾನೂನು ಬದ್ಧವಾಗಿ ಚುನಾವಣೆ ನಡೆಸಿ ವಕ್ಫ್ ಬೋರ್ಡ್ ದರ್ಗಾ ಸಮಿತಿ ರಚಿಸಿದೆ: ಬಿ.ಜಿ ಹನೀಫ್ ಹಾಜಿ

ಉಳ್ಳಾಲ,ಮಾ.13: ವಕ್ಫ್ ಆಕ್ಟ್ ಉಲ್ಲಂಘಿಸಿ ದರ್ಗಾಕ್ಕೆ ಹೊಸ ಆಡಳಿತ ಸಮಿತಿ ರಚನೆ ಆಗಿದೆ ಎಂಬ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಶೀದ್ ಹೇಳಿದ ಮಾತು ಸತ್ಯಕ್ಕೆ ದೂರವಾಗಿದ್ದು,  ಉಳ್ಳಾಲ ಜುಮ್ಮಾ ಮಸೀದಿ ಮತ್ತು ಅಧೀನ ಸಂಸ್ಥೆಗಳ ಆಡಳಿತ ಸಮಿತಿ ಗೆ  ವಕ್ಫ್ ಬೋರ್ಡ್ ಕಾನೂನು ಬದ್ಧವಾಗಿ ಚುನಾವಣೆ ನಡೆಸಿ ನೂತನ ಆಡಳಿತ ಸಮಿತಿ ರಚನೆ ಮಾಡಿ ಅಧಿಕಾರ ಹಸ್ತಾಂತರ ಮಾಡಿದೆ ಎಂದು ​ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ  ಬಿ.ಜಿ.ಹನೀಫ್ ಹಾಜಿ ಹೇಳಿದ್ದಾರೆ.

ಅವರು ಸೋಮವಾರ ದರ್ಗಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಧಿಕಾರ ಹಸ್ತಾಂತರ ಸಮಯದಲ್ಲಿ ಸಂಪ್ರದಾಯ ಪ್ರಕಾರ ಹಳೆ ಸಮಿತಿ ಸದಸ್ಯರೆಲ್ಲಾ ಹಾಜರಿದ್ದು ಅಧಿಕಾರ ಹಸ್ತಾಂತರ ನಡೆಯಬೇಕಿತ್ತು. ಆದರೆ ಮಾ8 ರಂದು ವಕ್ಫ್ ಬೋರ್ಡ್ ಅಧಿಕಾರಿಗಳು ಆಯ್ಕೆ ಆದ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಹಿಂದೆ ಆಡಳಿತದಲ್ಲಿದ್ದ ಸಮಿತಿಯ ಮೂವರು ಪದಾಧಿಕಾರಿಗಳು ಮಾತ್ರ ಹಾಜರಿದ್ದು, ಅಧ್ಯಕ್ಷ ಸಹಿತ ಉಳಿದವರೆಲ್ಲರೂ ಗೈರು ಆಗಿದ್ದರು. ಅಲ್ಲದೇ ಯಾವುದೇ ದಾಖಲೆ ಪತ್ರ ನೀಡಿ ಅಧಿಕಾರ ಹಸ್ತಾಂತರ ಮಾಡದ ಕಾರಣ ವಕ್ಫ್ ಬೋರ್ಡ್ ಅಧಿಕಾರ ಹಸ್ತಾಂತರ ಮಾಡಿದೆ. ಈ ವೇಳೆ  ವಾಹನ, ಹಾಗೂ ದರ್ಗಾಕ್ಕೆ ಸಂಬಂಧಪಟ್ಟ ಕೀಲಿ ಕೈ ನೀಡದೇ ಅನ್ಯಾಯ ಮಾಡಿದ್ದಾರೆ. ಚುನಾವಣೆ ದಿನ ದರ್ಗಾಕ್ಕೆ ಸಂಬಂಧಪಟ್ಟ ಪುಸ್ತಕ ಗಳನ್ನು ಅಪಹರಿಸಲೂ ಯತ್ನಿಸಿದಾಗ ಸ್ಥಳೀಯರೇ ಅದನ್ನು ಪತ್ತೆ ಹಚ್ಚಿ ವಕ್ಫ್ ಬೋರ್ಡ್ ಗೆ ಮಾಹಿತಿ ನೀಡಿದ್ದಾರೆ ಎಂದರು.

ಉಪಾಧ್ಯಕ್ಷ ಅಶ್ರಫ್ ರೈಟ್ ವೇ ಮಾತನಾಡಿ, ಏಳು ವರ್ಷಗಳ ಕಾಲ ಅಧಿಕಾರದಲ್ಲಿದ್ದು ಸುಸಜ್ಜಿತ ಆಡಳಿತ ನೀಡದೇ ಕಾನೂನು ಬಾಹಿರವಾಗಿ ಕುರ್ಚಿಯಲ್ಲೇ ಕುಳಿತ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಶೀದ್ ಅವರು ಸುದ್ದಿ ಗೋಷ್ಠಿ ನಡೆಸಿ ದರ್ಗಾ ಹಾಗೂ ವಕ್ಫ್ ಬೋರ್ಡ್ ಗೆ ಅವಹೇಳನ ಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ. ಅವರ ಆಡಳಿತ ಅವಧಿಯಲ್ಲಿ ಒಂದೇ ಒಂದು ಸಾಮಾನ್ಯ ಸಭೆ ಕರೆಯಲಿಲ್ಲ, ಬಜೆಟ್ ಮಂಡನೆ ಮಾಡಲಿಲ್ಲ. ಏಳು ವರ್ಷ ಕಳೆದರೂ ಹೊಸ ಆಡಳಿತ ರಚನೆಗೆ ಯಾವುದೇ ಪ್ರಯತ್ನ ಮಾಡದೇ ಚುನಾವಣೆಯನ್ನು ಕಾನೂನಿಗೆ ವಿರುದ್ಧ ಎಂದು ಅಪ ಪ್ರಚಾರ ಮಾಡಿ ಜನರ ನಡುವೆ ಗೊಂದಲ ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. 

ಆರಂಭದಲ್ಲಿ ಚುನಾವಣೆಗೆ ಬೆಂಬಲ ನೀಡಿದ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಶೀದ್ ಹಾಗೂ ಪದಾಧಿಕಾರಿಗಳು ಗುರುತಿನ ಚೀಟಿ ಮಾಡಿಸಿದ್ದಾರೆ. ದರ್ಗಾ ಕಟ್ಟಡದಲ್ಲೇ  ಇದಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದರು. ಅಲ್ಲದೆ  ವಕ್ಫ್ ಬೋರ್ಡ್ ಚುನಾವಣೆ ಘೋಷಣೆ ಮಾಡಿ ಸದಸ್ಯತ್ವಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಿತು. ಇದಕ್ಕೆ ವಿರುದ್ಧವಾಗಿ  ಹೆಚ್ಚಿನ ಕಾಲಾವಕಾಶ ಕೋರಿ ನಿಕಟ ಪೂರ್ವ ಅಧ್ಯಕ್ಷ  ಅಬ್ದುಲ್ ರಶೀದ್ ಬಳಗ ಕೋರ್ಟ್ ಮೊರೆ ಹೋಗಿತ್ತು. ಹೈಕೋರ್ಟ್ ವಕ್ಫ್ ಬೋರ್ಡ್ ನಿಯಮಾವಳಿ ಪರಿಶೀಲಿಸಿ ಅರ್ಜಿಯನ್ನು ತಿರಸ್ಕರಿಸಿತ್ತು ಎಂದರು.

ದರ್ಗಾ ಚುನಾವಣೆ ಸಂಬಂಧಿಸಿ ಸದಸ್ಯತ್ವ ನೋಂದಣಿ ಪ್ರಕ್ರಿಯೆ ಮುಗಿದು ಅಂತಿಮ ಮತದಾರರ ಪಟ್ಟಿ ಬಿಡುಗಡೆ ಆದ ಬಳಿಕ  ಅಬ್ದುಲ್ ಮಾಲೀಕ್ ತಕರಾರು ಎತ್ತಿ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದರು. ಹೈಕೋರ್ಟ್ ಇದು ಚುನಾವಣೆ ನಡೆಯುವುದನ್ನು ತಡೆಯಲು ಮಾಡುವ ಪ್ರಯತ್ನ ಎಂದು ಮನಗಂಡು ತಕರಾರು ಅರ್ಜಿ ಯನ್ನು ತಳ್ಳಿ ಹಾಕಿದೆ. ಇದರ ಬಳಿಕ ಯು.ಬಿ.ಸಿದ್ದೀಕ್ ಎಂಬವರು ಚುನಾವಣೆ ನಡೆಸಲು ವಕ್ಫ್ ಬೋರ್ಡ್ ಗೆ ಅಧಿಕಾರ ಇಲ್ಲ. ಮೊದಲು ಸೆಲೆಕ್ಷನ್ ಗೆ ಅವಕಾಶ ನೀಡಬೇಕು. ಅಲ್ಲಿ ವಿವಾದ ಆದರೆ ಮಾತ್ರ ಚುನಾವಣೆ ನಡೆಸಬಹುದು ಎಂದು ಹೈಕೋರ್ಟ್ ನಲ್ಲಿ ಹಿರಿಯ ನ್ಯಾಯವಾದಿಯೊಬ್ಬರ ಮೂಲಕ ಅರ್ಜಿ ಸಲ್ಲಿಸಿ ಚುನಾವಣೆ ಯನ್ನು ತಡೆಯಲು ಕೋರಿದ್ದರು. ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿ  ವಕ್ಫ್ ಬೋರ್ಡ್ ನಿಯಮದಂತೆ ಚುನಾವಣೆ ಮಾತ್ರ ಪರಿಹಾರ ಎಂದು ತಿಳಿಸಿತ್ತು ಎಂದರು.

ಅವರ ಆಡಳಿತದ ಅವಧಿವು ಭ್ರಷ್ಟಾಚಾರದಿಂದ ಕೂಡಿತ್ತು. ನಮಗೆ ಅಧಿಕಾರ ಹಸ್ತಾಂತರ ನಡೆದ ದಿನದಂದು ಅಧ್ಯಕ್ಷ ಅಬ್ದುಲ್ ರಶೀದ್ ಅವರು ದರ್ಗಾ ದಿಂದ 100,500 ರೂ. ಹಣ ಹಿಡಿದು ಕೊಂಡು ಹೋದ ರಶೀದಿ ನಮ್ಮಲ್ಲಿ ಇದೆ. ಇಷ್ಟೆಲ್ಲಾ ಅವ್ಯವಹಾರ ಮಾಡಿದ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಶೀದ್ ಸಮಿತಿ ಸುದ್ದಿ ಗೋಷ್ಠಿ ಮೂಲಕ ಜನರ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಇವರು ನೀಡಿದ ಹೇಳೀಕೆಗಳು ನ್ಯಾಯಾಂಗ ನಿಂದನೆಯ ಅಪರಾಧವಾಗಿದೆ. ಇದರ ವಿರುದ್ಧ ಕಾನೂನು ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಅವರ ಅವ್ಯವಹಾರದ ಬಗ್ಗೆ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುತ್ತೇವೆ ಎಂದರು.
 
2016 ರಲ್ಲಿ ವಕ್ಫ್ ಬೋರ್ಡ್ ಉಳ್ಳಾಲ ದರ್ಗಾಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲು  ಆದೇಶ ಮಾಡಿತ್ತು. ಇದರ ವಿರುದ್ಧ ಯುಬಿ ಸಿದ್ದೀಕ್ ಎಂಬವರು ಹೈಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದರು. ಈ ಮೂಲಕ ಅಬ್ದುಲ್ ರಶೀದ್ ಸಮಿತಿ ಅನಧಿಕೃತವಾಗಿ ಆಡಳಿತವನ್ನು ಕೈಗೆತ್ತಿಕೊಂಡು ತಮ್ಮ ಸಮಿತಿಯನ್ನು ಅನುಮೋದನೆ ಗೆ ವಕ್ಫ್ ಬೋರ್ಡ್ ಗೆ ಕಳುಹಿಸಿದ್ದರು. ಈ ಸಮಿತಿ ನಿರ್ಗಮಿಸುವವರೆಗೂ ಅನುಮೋದನೆ ಸಿಕ್ಕಿಲ್ಲ ಎಂದು ಹೇಳಿದರು.

2017 ರಲ್ಲಿ ಜಾರಿಗೆ ಬಂದ ವಕ್ಫ್ ನಿಯಮಾವಳಿ ಯು ನಿಯಮ 48 ರ ಪ್ರಕಾರ ಈ ನಿಯಮಾವಳಿ ಜಾರಿಗೆ ಬಂದು ಆರು ತಿಂಗಳ ಒಳಗೆ ಫಾರಂ 42 ರನ್ನು ಭರ್ತಿ ಮಾಡಿ ರಾಜ್ಯ ವಕ್ಫ್ ಬೋರ್ಡ್ ಗೆ ಸಲ್ಲಿಸಬೇಕಾಗಿತ್ತು. ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಶೀದ್ ಸಮಿತಿ ಫಾರಂ 42 ಭರ್ತಿ ಮಾಡಿ ಸಲ್ಲಿಸುವ ಗೋಜಿಗೆ ಹೋಗದೆ  ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸುದ್ದಿ ಗೋಷ್ಠಿ ಯಲ್ಲಿ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಲ್ ಮುಕಚೇರಿ , ಉಪಾಧ್ಯಕ್ಷ ಯು.ಎಚ್.ಹಸೈನಾರ್, ಜೊತೆ ಕಾರ್ಯದರ್ಶಿ ಇಸಾಕ್, ಮುಸ್ತಫಾ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

share
Next Story
X