ಅನಾವರಣ ಪ್ರತಿಷ್ಠಾನ ಉದ್ಘಾಟನೆ

ಮಂಗಳೂರು, ಮಾ.13; ನ್ಯಾಯವಾದಿ, ಕವಯತ್ರಿ, ಮಕ್ಕಳ ಸಾಹಿತಿ ಪರಿಮಳ ರಾವ್ ಕೆ. ರವರ ನೇತೃತ್ವದಲ್ಲಿ "ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ"ದ ಉದ್ಘಾಟನೆ, ಕಥಾಲಾಪ ಮತ್ತು ಚಿಣ್ಣರ ಚಿಲಿಪಿಲಿ ಕಾರ್ಯಾ ಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಎನ್ ಎಸ್ ಸಿಡಿಎಫ್ ಅಧ್ಯಕ್ಷ ಗಂಗಾಧರ್ ಉದ್ಘಾಟಿಸಿದರು.
ದೇಶದಲ್ಲಿ ಲಕ್ಷಾಂತರ ಸ್ವಯಂ ಸೇವಾ ಸಂಸ್ಥೆಗಳು ಕರ್ತವ್ಯ ನಿರ್ವಹಿಸುತ್ತಿದೆ, ಸರಕಾರ ತಲುಪಲು ಸಾಧ್ಯವಾಗದ ಪ್ರದೇಶದಲ್ಲಿಯೂ ತನ್ನ ಕಾರ್ಯಚಟುವಟಿಕೆ ನಡೆಸುತ್ತಿದೆ. ಈ ಕಾರಣದಿಂದಾಗಿ ಭಾರತದ ಅನೇಕ ಹಳ್ಳಿ ಪ್ರದೇಶಗಳು ಅಭಿವೃದ್ಧಿ ಗೊಂಡಿವೆ. ಇದು ಸ್ವಯಂ ಸೇವಾ ಸಂಸ್ಥೆಯ ಕಾರ್ಯವೈಖರಿ ಎಂದ ಅವರು ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಪಾರದರ್ಶಕತ್ವವನ್ನು ಅನಾವರಣ ಗೊಳಿಸುತ್ತಾ ಸಮಾಜದ ಎಲ್ಲಾ ಸಮುದಾಯದ ಆಶಯಗಳಿಗೆ ಸ್ಪಂದಿಸುವಂತಾಗಬೇಕು ಎಂದು ಶುಭ ಹಾರೈಸಿದರು.
ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಸ್ಥಾನ ಅಧ್ಯೆಕ್ಷೆ, ನ್ಯಾಯವಾದಿ ಪರಿಮಳ ರಾವ್ ಕೆ. ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.ಕೆಎಸ್ಎಸ್ಎಪಿ ಅಧ್ಯೆಕ್ಷೆ ರಾಣಿಪುಷ್ಪಲತಾದೇವಿ , ಕಥಾಲಾಪ ಅಧ್ಯಕ್ಷ ಡಾ. ಸುರೇಶ್ ನೆಗಳಗುಳಿ, ಕಥಾಲಾಪ ಸಂಚಾಲಕಿ ಗೀತಾ ಲಕ್ಷ್ಮೀಶ ಉಪಸ್ಥಿತರಿದ್ದರು.ರಶ್ಮಿ ಸನಿಲ್ ಕಾರ್ಯಕ್ರಮ ನಿರೂಪಿಸಿದರು.
ಕಥಾಲಾಪದಲ್ಲಿ ವ. ಉಮೇಶ್ ಕಾರಂತ್, ಅಶ್ವಿಜ ಶ್ರೀಧರ್, ಜಯರಾಮ ಪಡ್ರೆ, ರಾಮಾಂಜಿ ನಮ್ಮ ಭೂಮಿ, ಗೋಪಾಲಕೃಷ್ಣ ಶಾಸ್ತ್ರಿ, ರೇಖಾ ಸುದೇಶ್ ರಾವ್, ಶ್ಯಾಮಪ್ರಸಾದ್ ಭಟ್, ದೀಪಾ ಸದಾನಂದ್, ನವೀನ್ ಕುಮಾರ್ ಪೆರಾರ, ಮಾನ್ವಿ ಮಂಗಳೂರು, ಹಿತೇಶ್ ಕುಮಾರ್ ಎ, ಸುಗಂಧಿ ಶ್ಯಾಮ್, ಪದ್ಮನಾಭ ಮಿಜಾರು, ದೇವರಾಜ್ ಕುಂಬ್ಳೆ, ಚಿತ್ರಕಲಾ ದೇವರಾಜ್, ರೇಮಂಡ್ ಡಿಕೂನ ತಾಕೊಡೆ, ಅನುರಾಧಾ ರಾಜೀವ್, ಹರೀಶ್ ಮೆಲ್ಕಾರ್, ದಯಮಣಿ ಎಕ್ಕಾರ್, ವಾಣಿ ಲೋಕಯ್ಯ, ಸೌಮ್ಯ ಆರ್ ಶೆಟ್ಟಿ, ಎ. ಕೆ. ಕುಕ್ಕಿಲಾ ಕತೆಗಾರರು ತಮ್ಮ ಸ್ವರಚಿತ ಕತೆಗಳನ್ನು ವಾಚಿಸಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು