ಕೋಮು ಸಾಮರಸ್ಯ ಕಾಪಾಡಲು ಮುಸ್ಲಿಂ ಸೆಂಟ್ರಲ್ ಕಮಿಟಿ ಕರೆ

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಥಮ ಕಾರ್ಯಕಾರಿ ಸಮಿತಿಯ ಸಭೆಯು ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ರ ಅಧ್ಯಕ್ಷತೆಯಲ್ಲಿ ಮಂಗಳವಾರ ಕಮಿಟಿಯ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಪ್ರಸ್ತುತ ವಿದ್ಯಮಾನದ ಬಗ್ಗೆ ಚರ್ಚೆ ನಡೆಸಲಾಯಿತು. ಉಭಯ ಜಿಲ್ಲೆಗಳಲ್ಲಿ ಶಾಂತಿ ಸೌಹಾರ್ದಕ್ಕಾಗಿ, ಕೋಮು ಸಾಮರಸ್ಯ ಕಾಪಾಡಲು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್ ಕರೆ ನೀಡಿದರು.
ಹಾಜಿ ಇಬ್ರಾಹಿಂ ಕೋಡಿಜಾಲ್, ಕೆ. ಅಶ್ರಫ್, ಇಕ್ಬಾಲ್ ಅಹ್ಮದ್ ಮುಲ್ಕಿ, ಹಾಜಿ ಟಿ.ಎಸ್. ಅಬ್ದುಲ್ಲಾ, ಸೈಯದ್ ಇಸ್ಮಾಯಿಲ್, ಸಿರಾಜ್ ಅಹ್ಮದ್ ಇನ್ಲ್ಯಾಂಡ್, ಎಂ. ಶಬ್ಬೀರ್, ಅಶ್ರಫ್ ಸೌದಿ ಮಾತನಾಡಿದರು.
ಈ ಸಂದರ್ಭ ಕೋಲಾರ ಜಿಲ್ಲೆಯ ಪೊಲೀಸ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆಗೂದ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಮತ್ತು ಪುಟ್ಬಾಲ್ ಆಟದಲ್ಲಿ ಗಿನ್ನೆಸ್ ದಾಖಲೆ ಬರೆದ ಮುಹಮ್ಮದ್ ಸಲೀಲ್ ದೇರಳಕಟ್ಟೆ ಅವರನ್ನು ಸನ್ಮಾನಿಸಲಾಯಿತು.
ಸಭೆಯಲ್ಲಿ ಉಪಾಧ್ಯಕ್ಷರಾದ ಹಾಜಿ ಸಿ. ಮಹಮೂದ್, ಹಾಜಿ ಬಾಷಾ ಸಾಹೇಬ್ ಕುಂದಾಪುರ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯದರ್ಶಿ ಹಾಜಿ ಬಿ. ಅಬೂಬಕ್ಕರ್ ಸ್ವಾಗತಿಸಿ, ವಂದಿಸಿದರು.







