Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಔದ್ಯೋಗಿಕ ಮೀಸಲಾತಿಗೆ ಬಲಿಜ ಸಮುದಾಯದ...

ಔದ್ಯೋಗಿಕ ಮೀಸಲಾತಿಗೆ ಬಲಿಜ ಸಮುದಾಯದ ಉಪಪಂಗಡಗಳನ್ನು 2ಎ ವರ್ಗಕ್ಕೆ ಸೇರಿಸಿ: ರಮೇಶ್‍ ಬಾಬು ಆಗ್ರಹ

14 March 2023 8:36 PM IST
share
ಔದ್ಯೋಗಿಕ ಮೀಸಲಾತಿಗೆ ಬಲಿಜ ಸಮುದಾಯದ ಉಪಪಂಗಡಗಳನ್ನು 2ಎ ವರ್ಗಕ್ಕೆ ಸೇರಿಸಿ: ರಮೇಶ್‍ ಬಾಬು ಆಗ್ರಹ

ಬೆಂಗಳೂರು, ಮಾ.14: ಬಲಿಜ ಮತ್ತು ಅದರ ಉಪಪಂಗಡಗಳನ್ನು ಔದ್ಯೋಗಿಕ ಮೀಸಲಾತಿಗಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ 2ಎ ವರ್ಗಕ್ಕೆ ಸೇರಿಸಿ ಮೀಸಲಾತಿಗೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದು ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಮನವಿ ನೀಡಿದ್ದಾರೆ.

2018ರಲ್ಲಿ ಬಿಜೆಪಿ ಪಕ್ಷವು ಬಲಿಜ ಮತ್ತು ಉಪಪಂಗಡಗಳನ್ನು ಔದ್ಯೋಗಿಕ ಮತ್ತು ರಾಜಕೀಯ ಮೀಸಲಾತಿಗಾಗಿ ಹಾಲಿ ಇರುವ 3ಎ ಪ್ರವರ್ಗದಿಂದ 2ಎ ಪ್ರವರ್ಗಕ್ಕೆ ವರ್ಗಾಯಿಸುವ ಆಶ್ವಾಸನೆಯನ್ನು ನೀಡಿತ್ತು. ಆದರೆ ಇಲ್ಲಿಯವರೆಗೆ 3ಎ ಪ್ರವರ್ಗದಿಂದ 2ಎ ಪ್ರವರ್ಗಕ್ಕೆ ವರ್ಗಾಯಿಸುವ ಯಾವುದೇ ಪ್ರಕ್ರಿಯೆ ನಡೆದಿಲ್ಲ ಎಂದು ಅವರು ಹೇಳಿದ್ದಾರೆ. 

ಆದುದರಿಂದ, ತಾವು ದಯಮಾಡಿ ಹಿಂದುಳಿದ ವರ್ಗಗಳ ಇಲಾಖೆಯ ಮುಖಾಂತರ ಅಗತ್ಯವಾದ ವರದಿಯನ್ನು ತಯಾರಿಸಿ 3ಎ ಇಂದ 2ಎ ಪ್ರವರ್ಗದ ಮೀಸಲಾತಿ ಕಲ್ಪಿಸಬೇಕು ಎಂದು ರಮೇಶ್ ಬಾಬು ಮನವಿ ಮಾಡಿದ್ದಾರೆ.

ನಿಗಮ ಸ್ಥಾಪನೆ ಸ್ವಾಗತಾರ್ಹ: ರಾಜ್ಯ ಸರಕಾರ ಬಲಿಜ ಸಮುದಾಯ ಹಾಗೂ ಇದರ ಇನ್ನಿತರೆ ಉಪಜಾತಿಗಳ ಅಭಿವೃದ್ಧಿಗಾಗಿ ‘ಕರ್ನಾಟಕ ಬಲಿಜ ಸಮುದಾಯ ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಿ ಆದೇಶಿಸಿರುವುದು ಸ್ವಾಗತಾರ್ಹ. ಅಂತೆಯೇ ವಿಧಾನಸಭಾ ಚುನಾವಣೆಗೆ ಇನ್ನೆರಡು ವಾರಗಳಲ್ಲಿ ಕೇಂದ್ರ ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಲಿದೆ ಎಂದು ಅವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಸರಕಾರವು ತ್ವರಿತಗತಿಯಲ್ಲಿ ನಿಗಮವನ್ನು ಆಡಳಿತಾತ್ಮಕವಾಗಿ ಅನುದಾನದ ಬಿಡುಗಡೆಯೊಂದಿಗೆ ಜಾರಿಗೊಳಿಸಬೇಕು. ಅಭಿವೃದ್ಧಿ ನಿಗಮಕ್ಕೆ ಅವಶ್ಯಕವಾದ ಸಿಬ್ಬಂದಿ ಮತ್ತು ಸ್ಥಳಾವಕಾಶದ ವ್ಯವಸ್ಥೆ ಮಾಡಬೇಕು. ಬಲಿಜ ಮತ್ತು ಅದರ ಸುಮಾರು 27 ಉಪಜಾತಿ, ಉಪಪಂಗಡಗಳ ಅಭಿವೃದ್ಧಿಗಾಗಿ ಸ್ಥಾಪನೆಯಾಗಿರುವ ನಿಗಮಕ್ಕೆ ಕೂಡಲೇ 500 ಕೋಟಿ ರೂಪಾಯಿಗಳ ಅನುದಾನವನ್ನು ಆರ್ಥಿಕ ಇಲಾಖೆಯ ಏಕ ಅನುದಾನದ ಆದೇಶದ ಮೂಲಕ ಬಿಡುಗಡೆ ಮಾಡಬೇಕು ಎಂದು ರಮೇಶ್‍ಬಾಬು ಒತ್ತಾಯಿಸಿದ್ದಾರೆ.

share
Next Story
X