Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದೆರಡು ವರ್ಷಗಳಲ್ಲಿ ಹುಲಿ, ಆನೆ...

ಕಳೆದೆರಡು ವರ್ಷಗಳಲ್ಲಿ ಹುಲಿ, ಆನೆ ದಾಳಿಗಳಿಗೆ ಬಲಿಯಾದವರೆಷ್ಟು ಮಂದಿ ಗೊತ್ತೇ?

14 March 2023 10:11 PM IST
share
ಕಳೆದೆರಡು ವರ್ಷಗಳಲ್ಲಿ ಹುಲಿ, ಆನೆ ದಾಳಿಗಳಿಗೆ ಬಲಿಯಾದವರೆಷ್ಟು ಮಂದಿ ಗೊತ್ತೇ?

ಹೊಸದಿಲ್ಲಿ, ಮಾ.14: ಕಳೆದ ಎರಡು ವರ್ಷಗಳಲ್ಲಿ ಹಲವಾರು ರಾಜ್ಯಗಳಲ್ಲಿ ಹುಲಿಗಳು ಮತ್ತು ಆನೆಗಳ ದಾಳಿಗಳಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದೆ. ಹುಲಿಗಳ ದಾಳಿಗಳಿಂದ 163 ಮತ್ತು ಆನೆಗಳ ದಾಳಿಗಳಿಂದ 995 ಸೇರಿದಂತೆ ಈ ಎರಡು ವರ್ಷಗಳ ಅವಧಿಯಲ್ಲಿ ಒಟ್ಟು 1,158 ಜನರು ಜೀವಗಳನ್ನು ಕಳೆದುಕೊಂಡಿದ್ದಾರೆ.

ಸಂಸತ್ತಿನಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಉತ್ತರದಲ್ಲಿ ಸಹಾಯಕ ಪರಿಸರ,ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರು ಜನರ ಸಾವುಗಳಿಗೆ ಕಾರಣವಾಗಿರುವ ಮಾನವ-ವನ್ಯಜೀವಿ ಸಂಘರ್ಷದ ಕುರಿತು ವಿವರವಾದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಕಳೆದೆರಡು ವರ್ಷಗಳಲ್ಲಿ,ಅಂದರೆ 2021 ಮತ್ತು 2022ರಲ್ಲಿ ಹುಲಿಗಳ ದಾಳಿಗಳಿಂದ ಅತ್ಯಂತ ಹೆಚ್ಚಿನ ಸಾವುಗಳು (116) ಮಹಾರಾಷ್ಟ್ರದಲ್ಲಿ ಸಂಭವಿಸಿದ್ದರೆ,ಉತ್ತರ ಪ್ರದೇಶ (25),ಪಶ್ಚಿಮ ಬಂಗಾಳ (6),ಬಿಹಾರ (6),ಉತ್ತರಾಖಂಡ (5) ಮತ್ತು ತಮಿಳುನಾಡು (3) ನಂತದ ಸ್ಥಾನಗಳಲ್ಲಿವೆ. ಇದೇ ಅವಧಿಯಲ್ಲಿ ಕರ್ನಾಟಕದಲ್ಲಿ ಇಬ್ಬರು ಮತ್ತು ಮಧ್ಯಪ್ರದೇಶದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

2021ರಲ್ಲಿ ಹುಲಿಗಳ ದಾಳಿಗಳಿಂದ ಮಹಾರಾಷ್ಟ್ರದಲ್ಲಿ 32 ಜನರು ಸಾವನ್ನಪ್ಪಿದ್ದರೆ 2022ರಲ್ಲಿ ಈ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. 2021ರಲ್ಲಿ ಉ.ಪ್ರದೇಶದಲ್ಲಿ 11 ಸಾವುಗಳು ಸಂಭವಿಸಿದ್ದರೆ 2022ರಲ್ಲಿ ಇದು 14ಕ್ಕೆ ಹೆಚ್ಚಿದೆ. ಉತ್ತರಾಖಂಡದಲ್ಲಿ ಇದೇ ಅವಧಿಯಲ್ಲಿ ಸಾವುಗಳ ಸಂಖ್ಯೆ ಒಂದರಿಂದ ಮೂರಕ್ಕೆ ಏರಿಕೆಯಾಗಿದೆ.
ಆದರೆ ಇತರ ರಾಜ್ಯಗಳಲ್ಲಿ ಹುಲಿ ದಾಳಿಗಳಿಂದ ಸಾವುಗಳಲ್ಲಿ ಇಳಿಕೆಯ ಪ್ರವೃತ್ತಿ ಕಂಡುಬಂದಿದೆ. ತಮಿಳುನಾಡಿನಲ್ಲಿ 2021ರಲ್ಲಿ ಮೂರು ಸಾವುಗಳು ಸಂಭವಿಸಿದ್ದರೆ 2022ರಲ್ಲಿ ಇದು ಶೂನ್ಯಕ್ಕೆ ಇಳಿಕೆಯಾಗಿದೆ. ಇದೇ ಅವಧಿಯಲ್ಲಿ ಬಿಹಾರದಲ್ಲಿ ಸಾವುಗಳ ಸಂಖ್ಯೆ ನಾಲ್ಕರಿಂದ ಎರಡಕ್ಕೆ ತಗ್ಗಿದೆ.

ಹುಲಿಗಳಲ್ಲದೆ,ಆನೆಗಳೂ ಹಲವರ ಸಾವುಗಳಿಗೆ ಕಾರಣವಾಗಿವೆ. ಕಳೆದೆರಡು ವರ್ಷಗಳಲ್ಲಿ ಜಾರ್ಖಂಡ್ನಲ್ಲಿ ಅತ್ಯಂತ ಹೆಚ್ಚಿನ ಸಾವುಗಳು (217) ಸಂಭವಿಸಿದ್ದರೆ,ಒಡಿಶಾ (205),ಅಸ್ಸಾಂ (154),ಪ.ಬಂಗಾಳ (124),ಛತ್ತೀಸ್ಗಡ (106),ತಮಿಳುನಾಡು (94),ಕೇರಳ (45),ಕರ್ನಾಟಕ (40),ಮೇಘಾಲಯ (8),ತ್ರಿಪುರಾ (3),ಅರುಣಾಚಲ ಪ್ರದೇಶ (2) ಮತ್ತು ಉ.ಪ್ರದೇಶ (1) ನಂತರದ ಸ್ಥಾನಗಳಲ್ಲಿವೆ.

ಛತ್ತೀಸ್ಗಡ,ಜಾರ್ಖಂಡ್,ಕೇರಳ,ಒಡಿಶಾ ಮತ್ತು ಪ.ಬಂಗಾಳಗಳಲ್ಲಿ ಆನೆಗಳ ದಾಳಿಗಳಿಂದ ಜನರ ಸಾವುಗಳ ಪ್ರಕರಣಗಳು ಇಳಿಕೆ ಪ್ರವೃತ್ತಿಯನ್ನು ದಾಖಲಿಸಿವೆ.
ಸಚಿವಾಲಯವು ಕೇಂದ್ರ ಪ್ರಾಯೋಜಿತ ಯೋಜನೆಗಳಡಿ ವನ್ಯಜೀವಿ ನಿರ್ವಹಣೆ ಮತ್ತು ಮಾನವ-ವನ್ಯಜೀವಿ ಸಂಘರ್ಷವನ್ನು ತಗ್ಗಿಸುವುದಕ್ಕೆ ಸಂಬಂಧಿತ ಚಟುವಟಿಕೆಗಳಿಗಾಗಿ ಹಣಕಾಸನ್ನು ಒದಗಿಸಿದೆ.

ಆದರೆ ಸಚಿವಾಲಯವು ಸೋಲಾರ್ ವಿದ್ಯುತ್ ಬೇಲಿಗಳ ಸ್ಥಾಪನೆ ಮತ್ತು ನಿರ್ವಹಣೆ ಸೇರಿದಂತೆ ಮಾನವ-ವನ್ಯಜೀವಿ ಸಂಘರ್ಷವನ್ನು ತಗ್ಗಿಸುವ ಚಟುವಟಿಕೆಗಳಿಗಾಗಿ ಮತ್ತು ವನ್ಯಜೀವಿ ಆವಾಸಸ್ಥಾನಗಳ ಅಭಿವೃದ್ಧಿಗಾಗಿ ಕೇರಳ ಸರಕಾರಕ್ಕೆ ಕೇವಲ 6.06 ಕೋ.ರೂ.ಗಳನ್ನು ಮಂಜೂರು ಮಾಡಿದೆ.

share
Next Story
X