Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ವಯಂ ಘೋಷಿತ 'ಕಾಮನ್‍ಮ್ಯಾನ್'...

ಸ್ವಯಂ ಘೋಷಿತ 'ಕಾಮನ್‍ಮ್ಯಾನ್' ಬೊಮ್ಮಾಯಿಯಿಂದ ಹೆಲಿಕಾಪ್ಟರ್ ದುರ್ಬಳಕೆ: ರಮೇಶ್ ಬಾಬು ಆರೋಪ

15 March 2023 8:22 PM IST
share
ಸ್ವಯಂ ಘೋಷಿತ ಕಾಮನ್‍ಮ್ಯಾನ್ ಬೊಮ್ಮಾಯಿಯಿಂದ ಹೆಲಿಕಾಪ್ಟರ್ ದುರ್ಬಳಕೆ: ರಮೇಶ್ ಬಾಬು ಆರೋಪ

ಬೆಂಗಳೂರು, ಮಾ.15: ಸ್ವಯಂ ಘೋಷಿತ ಕಾಮನ್‍ಮ್ಯಾನ್ ಎಂದು ಬಿಂಬಿಸಿಕೊಳ್ಳುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೈತಿಕತೆಗೆ ಬದ್ಧವಾಗಿದ್ದರೆ, ಸರಕಾರಿ ಹಣದಲ್ಲಿ ತಮ್ಮ ಖಾಸಗಿ ಮತ್ತು ರಾಜಕೀಯ ಕಾರಣಗಳಿಗೆ ವಿಶೇಷ ವಿಮಾನ ಹಾಗೂ ಹೆಲಿಕಾಪ್ಟರ್ ದುರ್ಬಳಕೆಯ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲಿ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಯಾದ ದಿನದಿಂದ ಇಲ್ಲಿಯವರೆಗೆ ಬೊಮ್ಮಾಯಿ ಅವರು ಹಲವಾರು ಬಾರಿ ವಿಶೇಷ ವಿಮಾನ ಸೇವೆ ಮತ್ತು ಹೆಲಿಕಾಪ್ಟರ್ ಬಳಕೆ ಮಾಡಿದ್ದು, ಸುಮಾರು 26 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿರುತ್ತಾರೆ. ಅವರ ಖಾಸಗಿ ಕಾರ್ಯಕ್ರಮಗಳಿಗೆ ಮತ್ತು ಪಕ್ಷದ ಕಾರ್ಯಕ್ರಮಗಳಿಗೆ ಬಳಕೆ ಆಗಿರುತ್ತದೆ. ಹಾಗಾಗಿ 26 ಕೋಟಿ ಹಣವನ್ನು ಸರಕಾರಕ್ಕೆ ಖಜಾನೆಗೆ ವಾಪಸ್ಸು ತುಂಬಲಿ ಎಂದು ಅವರು ಒತ್ತಾಯಿಸಿದ್ದಾರೆ. 

ರಾಜ್ಯದ ಮುಖ್ಯಮಂತ್ರಿಗಳು ಅತಿವೃಷ್ಠಿ, ಅನಾವೃಷ್ಠಿಯ ಸಂದರ್ಭ ಸೇರಿರಾಜ್ಯದ ಹಿತಾಸಕ್ತಿಯ ವಿಷಯದಲ್ಲಿ ಮಾತ್ರ ಸರಕಾರದ ವೆಚ್ಚದಲ್ಲಿ ವಿಮಾನಯಾನ, ವಿಶೇಷ ವಿಮಾನಯಾನ ಮತ್ತು ಹೆಲಿಕಾಪ್ಟರ್ ಬಳಕೆ ಮಾಡಬಹುದು. ಆದರೆ ಸ್ವಯಂ ಘೋಷಿತ ಕಾಮನ್‍ಮ್ಯಾನ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈಯಕ್ತಿಕ ಕಾರಣಗಳಿಗೆ ಈ ಸೌಲಭ್ಯವನ್ನು ಬಳಕೆ ಮಾಡಿದ್ದಾರೆ. 

ನಗರದಿಂದ ಒಂದು ತಾಸಿನಲ್ಲಿ ರಸ್ತೆ ಪ್ರಯಾಣ ಮಾಡಬಹುದಾದ ತುಮಕೂರಿನಂತಹ ಪ್ರದೇಶಗಳಿಗೂ ಸರಕಾರಿ ಹಣದಲ್ಲಿ ಹೆಲಿಕಾಪ್ಟರ್ ಬಳಕೆ ಮಾಡಲಾಗಿದೆ. ಅಲ್ಲದೆ, ಬಿಜೆಪಿ ಸರಕಾರದ ಮುಖ್ಯಮಂತ್ರಿಗಳು ಮೂರು ವರ್ಷದಲ್ಲಿ ಸಾಮಾನ್ಯ ವೆಚ್ಚಗಳ ಅಡಿಯಲ್ಲಿ ಅತಿಥಿ ಸತ್ಕಾರಕ್ಕೆ ಸುಮಾರು 167.92 ಕೋಟಿ ರೂಪಾಯಿ ಖರ್ಚು ಮಾಡಿರುತ್ತಾರೆ ಎಂದು ಅವರು ದೂರಿದ್ದಾರೆ.

share
Next Story
X