Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಹಿತ್ಯ ಸೇರಿ ಎಲ್ಲಾ ಕ್ಷೇತ್ರಗಳಲ್ಲಿ...

ಸಾಹಿತ್ಯ ಸೇರಿ ಎಲ್ಲಾ ಕ್ಷೇತ್ರಗಳಲ್ಲಿ ಶ್ರೇಷ್ಠತೆ ಸೊಕ್ಕಾಗಬಾರದು, ಶೋಧವಾಗಬೇಕು: ಡಾ. ಬರಗೂರು ರಾಮಚಂದ್ರಪ್ಪ

ಕಾ.ತ. ಚಿಕ್ಕಣ್ಣಗೆ ‘ಅತ್ಯುತ್ತಮ ಕಾದಂಬರಿ ಪ್ರಶಸ್ತಿ' ಪ್ರದಾನ

15 March 2023 8:27 PM IST
share
ಸಾಹಿತ್ಯ ಸೇರಿ ಎಲ್ಲಾ ಕ್ಷೇತ್ರಗಳಲ್ಲಿ ಶ್ರೇಷ್ಠತೆ ಸೊಕ್ಕಾಗಬಾರದು, ಶೋಧವಾಗಬೇಕು: ಡಾ. ಬರಗೂರು ರಾಮಚಂದ್ರಪ್ಪ
ಕಾ.ತ. ಚಿಕ್ಕಣ್ಣಗೆ ‘ಅತ್ಯುತ್ತಮ ಕಾದಂಬರಿ ಪ್ರಶಸ್ತಿ' ಪ್ರದಾನ

ಬೆಂಗಳೂರು, ಮಾ.14: ಸಾಹಿತ್ಯವೂ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಶ್ರೇಷ್ಠತೆ ಸೊಕ್ಕಾಗಬಾರದು, ಶೋಧವಾಗಬೇಕು, ಸೊಕ್ಕು ಅಪಾಯಕರ, ಶೋಧ ಆರೋಗ್ಯಕರ ಎಂದು ಹಿರಿಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ ವತಿಯಿಂದ ನಡೆದ 2022ರ ಅತ್ಯುತ್ತಮ ಕಾದಂಬರಿ ಸ್ಪರ್ಧೆಯಲ್ಲಿ ವಿಜೇತರಾದ ``ಪುರಾಣಕನ್ಯೆ’’ ಕಾದಂಬರಿಯ ಕರ್ತೃ ಕಾ.ತ.ಚಿಕ್ಕಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಹೆಚ್ಚಿನ ಅಕ್ಷರ ಜ್ಞಾನವಿಲ್ಲದವರ ಸಾಹಿತ್ಯ ಕೃತಿಗಳಿಗೆ ಮುನ್ನುಡಿ ಬರೆದಿದ್ದೇನೆಂಬುದು ನನಗೆ ಹೆಮ್ಮೆ. ಬರೆದದ್ದು ಪ್ರಕಟವಾಗದೆ ಹೋದರೆ ಅದು ಶ್ರೇಷ್ಠವೋ ಕನಿಷ್ಠವೋ ಹೇಗೆ ತಿಳಿಯುತ್ತದೆ. ಕಟು ವಿಮರ್ಶೆಗಳಿಂದ ಪ್ರತಿಭಾ ಭ್ರೂಣಹತ್ಯೆ ಸಲ್ಲದು ಸಾಹಿತ್ಯಕ್ಕೆ ಓದುಗ, ಸಂಗೀತಕ್ಕೆ ಕೇಳುಗ ಮತ್ತು ಸಿನಿಮಾಕ್ಕೆ ನೋಡುಗ ಮುಖ್ಯ ಎಂದರು.

ಕಾ.ತ.ಚಿಕ್ಕಣ್ಣ ಲೇಖಕರಾಗಿ ಹಾಗೂ ಆಡಳಿತಗಾರರಾಗಿ ಪ್ರಬುದ್ಧರು, ನನ್ನ ಗೆಳೆಯರೂ ಆದ ಈಪ್ರತಿಭಾವಂತರಿಗೆ ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನ ಏರ್ಪಡಿಸಿದ್ದ ಕಾದಂಬರಿ ಸ್ಪರ್ಧೆಯಲ್ಲಿ ಮೊಟ್ಟ ಮೊದಲ ಸಾಲಿನ ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಸಂತಸ ತಂದಿದೆ. ಸಾಹಿತ್ಯ ಕ್ಷೇತ್ರದಲ್ಲಿ ಕಾದಂಬರಿ ವೈವಿಧ್ಯಮಯ ಪ್ರಕಾರ, ಓದುಗರ ಜೊತೆಗಾರ ಎಂದು ಗುರ್ತಿಸಿಕೊಂಡಿದೆ. ಸಾರ್ವಕಾಲಿಕ ಶ್ರೇಷ್ಠವಾದ ಎರಡು ಕಾದಂಬರಿಗಳು ಹಾಗೂ ಇತರ ಪ್ರಾಕಾರಗಳಲ್ಲಿ ಅತ್ಯುತ್ತಮ ಕೃತಿಗಳನ್ನು ರಚಿಸಿದ ಕುವೆಂಪು ಅವರನ್ನು ಪೂರ್ವಾಗ್ರಹ ಪೀಡಿತ ವಿಮರ್ಶಕರು ಅವರು ಕವಿಯೇ ಅಲ್ಲ ಎಂದು ಗೇಲಿ ಮಾಡುತ್ತಿದ್ದರು. ಅವರಿಗೆ ಪ್ರಶಸ್ತಿಯ ಮೇಲೆ ಪ್ರಶಸ್ತಿಗಳು ಬಂದಾಗ, ಇದೇ ವಿಮರ್ಶಕರು ತಾರಾ ಮಾರಾ ಹೊಗಳಿದರು ಎಂದು ಅವರು ತಿಳಿಸಿದರು.

ಶಿಕ್ಷಣ ತಜ್ಞ ನಾಡೋಜ ಡಾ. ವೂಡೇ ಪಿ. ಕೃಷ್ಣ ಮಾತನಾಡಿ, ಮಹಾತ್ಮಗಾಂಧಿ ಅವರ ಕಲ್ಪನೆಯ ಸಮುದಾಯ ಸಮಾಜ ನಿರ್ಮಾಣ ಆಗಬೇಕಾಗಿದೆ. ಅದಕ್ಕಾಗಿ ಸಾಹಿತಿಗಳೆಲ್ಲರೂ ತಮ್ಮ ಬರವಣಿಗೆಯ ಮೂಲಕ ಶ್ರಮಿಸಬೇಕಾಗಿದೆ ಎಂದು ಕರೆ ನೀಡಿದರು.

ಪ್ರತಿಷ್ಠಾನದ  ಅಧ್ಯಕ್ಷ ಬಿ.ಎಂ.ಹನೀಫ್ ಮಾತನಾಡಿ, ಮಹಿಳೆಯರ ಗೌರವಾರ್ಥವಾಗಿ ಪ್ರತಿಷ್ಠಾನ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರಲ್ಲದೆ ಇತ್ತೀಚೆಗೆ ಮಹಿಳೆಯರ ಬಗೆಗೆ ಕೆಟ್ಟದಾಗಿ ನಡೆದುಕೊಂಡಿರುವ ಕ.ಸಾ.ಪ. ಅಧ್ಯಕ್ಷ ಹಾಗೂ ಕೋಲಾರದ ಲೋಕಸಭಾ ಸದಸ್ಯರ ವರ್ತನೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿದರು. 

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಚ.ಹ.ರಘುನಾಥ್, ಪ್ರತಿಷ್ಠಾನದ ಕಾರ್ಯದರ್ಶಿ ಇ. ಬಸವರಾಜು, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪ, ಪ್ರತಿಷ್ಠಾನದ ಸದಸ್ಯರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ಡಿ.ಬಿ.ರಾಮಯ್ಯ, ಕೆ.ಅಶೋಕ್, ಎಂ.ತಿಮ್ಮಯ್ಯ ಮತ್ತು ಬಿ.ಸಿ. ರಾಘವೇಂದ್ರ, ಶೇಷಾದ್ರಿಪುರಂ ಸಂಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ನೋಟಕಾರ್ ಸತೀಶ್, ಸಾಹಿತಿಗಳಾದ ಜಾಣಗೆರೆ ವೆಂಕಟರಾಮಯ್ಯ, ಸಿದ್ದಲಿಂಗಯ್ಯ ಬನ್ನಂಗಾಡಿ, ಡಾ. ಸತ್ಯಮಂಗಲ ಮಹದೇವ್, ಡಾ. ರಾಜಶೇಖರ ಹತಗುಂದಿ, ಕುವರ ಯಲ್ಲಪ್ಪ, ಡಾ. ಸಂತೋಷ ಹಾನಗಲ್, ವೀರಸಂಗಯ್ಯ, ವ.ಚ.ಚನ್ನೇಗೌಡ, ರಾಣಿ ಗೋವಿಂದರಾಜು, ಡಿ.ಎನ್. ಹರಿದಾಸ್, ಎನ್.ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

share
Next Story
X