Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಂಜನಗೂಡು ಚುನಾವಣಾ ಕಣದಿಂದ ಹಿಂದೆ ಸರಿದ...

ನಂಜನಗೂಡು ಚುನಾವಣಾ ಕಣದಿಂದ ಹಿಂದೆ ಸರಿದ ಎಚ್​​ಸಿ ಮಹದೇವಪ್ಪ: ಧ್ರುವನಾರಾಯಣ ಪುತ್ರನಿಗೆ ಬೆಂಬಲ ಘೋಷಣೆ

15 March 2023 8:53 PM IST
share
ನಂಜನಗೂಡು ಚುನಾವಣಾ ಕಣದಿಂದ ಹಿಂದೆ ಸರಿದ ಎಚ್​​ಸಿ ಮಹದೇವಪ್ಪ: ಧ್ರುವನಾರಾಯಣ ಪುತ್ರನಿಗೆ ಬೆಂಬಲ ಘೋಷಣೆ

ಮೈಸೂರು,ಮಾ.15: ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನಂಜನಗೂಡು ಕ್ಷೇತ್ರವನ್ನು ಇತ್ತೀಚೆಗೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವ ಅವರಿಗೆ ಬಿಟ್ಟುಕೊಡುವುದಾಗಿ ಘೋಷಣೆ ಮಾಡಿ ದರ್ಶನ್ ಧ್ರುವ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮೈಸೂರು ವಿಜಯನಗರ ಮೂರನೇ ಹಂತದಲ್ಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ನಿವಾಸಕ್ಕೆ ಬುಧವಾರ ತಮ್ಮ ಪುತ್ರ ಸುನೀಲ್ ಬೋಸ್ ಜೊತೆಗೆ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಡಾ.ಎಚ್.ಸಿ.ಮಹದೇವಪ್ಪ, ದರ್ಶನ್ ಧ್ರುವ ಅವರ ಜೊತೆಗೆ ಮಾತುಕತೆ ನಡೆಸಿ ನಂಜನಗೂಡು ಕ್ಷೇತ್ರವನ್ನು ಬಿಟ್ಟುಕೊಡುವುದಾಗಿ ಹೇಳಿದ್ದಾರೆ.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಎಚ್.ಸಿ.ಮಹದೇವಪ್ಪ, ಸಾವಿನಲ್ಲೂ ರಾಜಕೀಯ ಮಾಡುವ ಉದ್ದೇಶ ನನಗಿಲ್ಲ, ಧ್ರುವನಾರಾಯಣ ಕ್ರಿಯಾಶೀಲ ರಾಜಕಾರಣಿ, ಅವರ ನಿಧನ ದಿಗ್ಬ್ರಮೆ ಉಂಟುಮಾಡಿದೆ. ಅವರ ನಿಧನದ ದಿನವೇ ನಾನು ಮಾನಸಿಕವಾಗಿ ದರ್ಶನ್ ಧ್ರುವ ಅವರಿಗೆ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದ್ದೆ. ಧ್ರುವನಾರಾಯಣ ಅವರ ಅಂತ್ಯ ಸಂಸ್ಕಾರ ಮುಗಿದ ನಂತರ ನಾನೇ ಅವರ ಮನೆಗೆ ಹೋಗಿ ದರ್ಶನ್‍ಗೆ ಬೆಂಬಲ ವ್ಯಕ್ತಪಡಿಸೋಣ ಎಂದು ಸುಮ್ಮನಿದ್ದೆ. ಹಾಗಾಗಿ ಇಂದು ನಾನು ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಬೆಂಬಲ ವ್ಯಕ್ತಪಡಿಸಿದ್ದೇನೆ. ಧ್ರುವನಾರಾಯಣ ಅವರ ಆಸೆಯಂತೆ ಅವರ ಪುತ್ರ ದರ್ಶನ್ ಧ್ರುವ ನೆರವೇರಿಸಲಿ ಎಂದು  ಹೇಳಿದರು.

ನನಗೆ ನನ್ನ ಮಗ ಸುನೀಲ್ ಬೋಸ್ ಬೇರೆ ಅಲ್ಲ, ದರ್ಶನ್ ಧ್ರುವ ಬೇರೆ ಅಲ್ಲ, ಇಬ್ಬರು ಒಂದೇ, ಹಾಗಾಗಿ ನಂಜನಗೂಡು ಕ್ಷೇತ್ರದಿಂದ ದರ್ಶನ್ ಧ್ರುವ ಅವರನ್ನೇ ಕಣಕ್ಕಿಳಿಸಬೇಕು. ನಾನು ಚುನಾವಣೆಯಿಂದ ಹಿಂದೆ ಸರಿದು ಕಾಂಗ್ರೆಸ್ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದರು.

ನಾನು ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್‍ನ ಪ್ರಬಲ ಆಕಾಂಕ್ಷಿಯಾಗಿದ್ದು ನಿಜ, ಕ್ಷೇತ್ರದ ಜನ ನನ್ನ ಮೇಲೂ ವಿಶ್ವಾಸವಿಟ್ಟಿದ್ದರು. ಧ್ರುವನಾರಾಯಣ ಅವರ ಮೇಲೂ ವಿಶ್ವಾಸ ಇಟ್ಟಿದ್ದರು. ಆದರೆ ಹೈಕಮಾಂಡ್ ಇದರ ಬಗ್ಗೆ  ಇನ್ನೂ ತೀರ್ಮಾನ ಕೈಗೊಂಡಿರಲಿಲ್ಲ. ಆದರೆ ಧ್ರುವನಾರಯಣ ಅವರ ಅಕಾಲಿಕ ನಿಧನ ನಮಗೆಲ್ಲಾ ಆಘಾತ ಉಂಟು ಮಾಡಿತು ಎಂದು ಹೇಳಿದರು.

ಧ್ರುವನಾರಾಯಣ ನಿಧನದ ನಂತರ ಕೆಲವು ಕೆಟ್ಟ ಮನಸ್ಸಿನ ವ್ಯಕ್ತಿಗಳು ಇಲ್ಲದ ಸಲ್ಲದ ಆರೋಪಗಳನ್ನು ಮಾಡಿ ಕೆಟ್ಟ ರಾಜಕೀಯ ಮಾಡಿದರು. ಇದು ಎಲ್ಲರ ಮನಸ್ಸಿಗೂ ನೋವುಂಟು ಮಾಡಿತು. ನಾನು ಅಂದೇ ನಂಜನಗೂಡು ಕ್ಷೇತ್ರವನ್ನು ಧ್ರುವನಾರಯಣ ಅವರ ಪುತ್ರ ದರ್ಶನ್ ಧ್ರುವ ಅವರಿಗೆ ಬಿಟ್ಟುಕೊಡಬೇಕು ಎಂದು ನಿರ್ಧಾರ ಮಾಡಿದೆ. ಅದರಂತೆ ಇಂದು ಅವರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದ್ದೇನೆ. ಚುನಾವಣೆಯಲ್ಲಿ ಅವರ ಪರ ಪ್ರಚಾರ ಮಾಡಿ ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಹೇಳಿದರು.

share
Next Story
X