Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ರೈಲ್ವೇ ನಿಲ್ದಾಣದಲ್ಲಿ...

ಬೆಂಗಳೂರು: ರೈಲ್ವೇ ನಿಲ್ದಾಣದಲ್ಲಿ ಯವತಿಯೊಂದಿಗೆ ಅನುಚಿತ ವರ್ತನೆ; ಟಿಟಿಇ ಅಮಾನತ್ತು

15 March 2023 3:53 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರು: ರೈಲ್ವೇ ನಿಲ್ದಾಣದಲ್ಲಿ ಯವತಿಯೊಂದಿಗೆ ಅನುಚಿತ ವರ್ತನೆ; ಟಿಟಿಇ ಅಮಾನತ್ತು

ಬೆಂಗಳೂರು: ಕೋಲ್ಕತ್ತಾದಿಂದ ಅಮೃತಸರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ರೈಲ್ವೇ ಪ್ರಯಾಣ ಟಿಕೆಟ್ ಪರೀಕ್ಷಕರನ್ನು (ಟಿಟಿಇ) ಬಂಧಿಸಿದ ಘಟನೆ ಬೆನ್ನಲ್ಲೇ, ಮತ್ತೊಬ್ಬ ಟಿಟಿಇ ಬೆಂಗಳೂರಿನ ಕೃಷ್ಣರಾಜಪುರ ನಿಲ್ದಾಣದಿಂದ ಹೊರಡುವಾಗ ರೈಲಿನ ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಟಿಟಿಇಯನ್ನು ರೈಲ್ವೇ ಇಲಾಖೆ ಅಮಾನತುಗೊಳಿಸಿದ್ದು, ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

ರೈಲ್ವೇ ಇಲಾಖೆ ಪ್ರಕಾರ, ರೈಲು ಕ್ರಾಸಿಂಗ್‌ ಮಾಡಲು ಕೃಷ್ಣರಾಜಪುರಂನಲ್ಲಿ ರೈಲು ನಿಂತಿದ್ದು, ಈ ಸಮಯದಲ್ಲಿ ಟಿಟಿಇ ಯವತಿ ಬಳಿ ಬಂದು ಟಿಕೆಟ್ ತೋರಿಸಲು ಒತ್ತಾಯಿಸಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಯುವತಿಯನ್ನು ಟಿಟಿಇ ತರಾಟೆಗೆ ತೆಗೆದುಕೊಳ್ಳುತ್ತಿರುವ ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಂತ್ರಸ್ತ ಯುವತಿ ಟಿಟಿಇಯನ್ನು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ. ತನ್ನ ಟಿಕೆಟ್‌ಗಳನ್ನು ತೋರಿಸಿದ ನಂತರ ತನ್ನನ್ನು ಏಕೆ ಎಳೆದಾಡಿದ್ದೀರಿ ಎಂದು ಆಕೆ ಪ್ರಶ್ನಿಸುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಟಿಟಿಇ ಯುವತಿಯ ಮೇಲೆ ಕಿರುಚಾಡುತ್ತಿದ್ದಂತೆ, ಅಲ್ಲೇ ನಿಂತು ಘಟನೆ ನಡೆಯುವುದನ್ನು ನೋಡುತ್ತಿದ್ದ ಜನರ ಗುಂಪು ಆಕೆಯ ಸಹಾಯಕ್ಕೆ ಬಂದಿದೆ. ಅಲ್ಲದೆ, ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಟಿಟಿಇಯನ್ನು ಹಿಡಿದು ನಿಲ್ಲಿಸಿದ್ದಾರೆ. “ಆತ ಕುಡಿದಿದ್ದಾನೆ, ಪೊಲೀಸರಿಗೆ ಕರೆ ಮಾಡಿ'' ಎಂದು ಜನರ ಗುಂಪಿನಲ್ಲಿ ಯಾರೋ ಹೇಳುವುದನ್ನು ವಿಡಿಯೋದಲ್ಲಿ ಕೇಳಬಹುದು.

ಘಟನೆ ಕುರಿತು ಹೇಳಿಕೆ ನೀಡಿರುವ ರೈಲ್ವೇ ಕಚೇರಿ, ಬೆಂಗಳೂರು, ''ರೈಲು ಸಂಖ್ಯೆ 22863, ಹೆಚ್‌ಡಬ್ಲ್ಯೂಹೆಚ್ (ಹೌರಾ)-ಎಸ್‌ಎಂವಿಬಿ (ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು) ಎಕ್ಸ್‌ಪ್ರೆಸ್ ಸಾಪ್ತಾಹಿಕ ಹಮ್ಸಫರ್ ಎಕ್ಸ್‌ಪ್ರೆಸ್ ಆಗಿದ್ದು, ಕೃಷ್ಣರಾಜಪುರದಲ್ಲಿ ಯಾವುದೇ ನಿಲುಗಡೆ ಇರುವುದಿಲ್ಲ. ವೀಡಿಯೋದಲ್ಲಿ ಕಂಡುಬರುವ ಟಿಟಿಇ ಕೆಜೆಎಂ ನಿಲ್ದಾಣದ ಟಿಟಿಇಯಾಗಿದ್ದು, ಆನ್‌ಬೋರ್ಡ್ ಟಿಟಿಇ ಅಲ್ಲ ಎಂದು ತಿಳಿಸಿದ್ದಾರೆ, 'ಅವರು ಮಹಿಳೆ ಪ್ರಯಾಣಿಕರನ್ನು ರೈಲಿನಿಂದ ಹೊರಕ್ಕೆ ಎಳೆದಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಕರ್ತವ್ಯದ ವೇಳೆ ಪಾನಮತ್ತನಾಗಿದ್ದ ಎಂದು ಆರೋಪಿಸಲಾಗಿದೆ. ತನಿಖೆ ಬಾಕಿ ಉಳಿದಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಟಿಟಿಇಯನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Drunk TT pulled her at KJM . While the girl was telling she had her ticket, showed ticket to TT but TT didn't listen anything,pulled her and still misbehave with her.We need explanation for on duty drunk TT.@RailMinIndia@Central_Railway please take strict action against the TT. pic.twitter.com/UUjRcm8X1w

— Karishma behera (@karishma_behera) March 14, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X