Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನರೇಗಾ ಬಜೆಟ್‌ನಲ್ಲಿ ತೀವ್ರ ಕಡಿತಕ್ಕೆ...

ನರೇಗಾ ಬಜೆಟ್‌ನಲ್ಲಿ ತೀವ್ರ ಕಡಿತಕ್ಕೆ ಸಂಸದೀಯ ಸಮಿತಿಯ ಕಳವಳ

15 March 2023 11:12 PM IST
share
ನರೇಗಾ ಬಜೆಟ್‌ನಲ್ಲಿ ತೀವ್ರ ಕಡಿತಕ್ಕೆ ಸಂಸದೀಯ ಸಮಿತಿಯ ಕಳವಳ

ಹೊಸದಿಲ್ಲಿ,ಮಾ.15: ಕೇಂದ್ರ ಮುಂಗಡಪತ್ರದಲ್ಲಿ ನರೇಗಾ ಯೋಜನೆಗೆ ಹಣ ಹಂಚಿಕೆಯನ್ನು ತೀವ್ರವಾಗಿ ಕಡಿತಗೊಳಿಸಿರುವುದನ್ನು ತನ್ನ ವರದಿಯಲ್ಲಿ ಗಮನಕ್ಕೆ ತೆಗೆದುಕೊಂಡಿರುವ ಗ್ರಾಮೀಣಾಭಿವೃದ್ಧಿ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ದೇಶದ ಜನತೆಯು ಸಂಕಷ್ಟದಲ್ಲಿರುವಾಗ ಯೋಜನೆಯ ಪ್ರಮುಖ ಪಾತ್ರವನ್ನು ಪರಿಗಣಿಸಿ,ಹಣ ಕಡಿತದ ಹಿಂದಿನ ತಾರ್ಕಿಕತೆಯೇನು ಎಂದು ಸರಕಾರವನ್ನು ಪ್ರಶ್ನಿಸಿದೆ.

2022-23ರ ಪರಿಷ್ಕೃತ ಅಂದಾಜಿಗೆ ಹೋಲಿಸಿದರೆ 2023-24ನೇ ವಿತ್ತವರ್ಷಕ್ಕೆ ನರೇಗಾ ಯೋಜನೆಗಾಗಿ ಬಜೆಟ್ ಅಂದಾಜನ್ನು 29,400 ಕೋ.ರೂ.ಗಳಷ್ಟು ತಗ್ಗಿಸಲಾಗಿದೆ.

ತಮ್ಮ ಮತ್ತು ತಮ್ಮ ಕುಟುಂಬ ಸದಸ್ಯರ ಹೊಟ್ಟೆಯನ್ನು ಹೊರೆಯಲು ಬೇರೆ ಯಾವುದೇ ಮಾರ್ಗವಿಲ್ಲದ ನಿರುದ್ಯೋಗಿ ಜನರಿಗೆ ನರೇಗಾ ಕೊನೆಯ ಆಧಾರವಾಗಿದೆ. ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ನರೇಗಾದ ಪಾತ್ರ ಮತ್ತು ಮಹತ್ವ ಸ್ಪಷ್ಟವಾಗಿ ಗೋಚರಿಸಿತ್ತು,ಆಗ ಅದು ಸಂಕಷ್ಟದಲ್ಲಿರುವ ಜನರ ಪಾಲಿಗೆ ಆಶಾಕಿರಣವಾಗಿತ್ತು ಎಂದು ಡಿಎಂಕೆ ಸಂಸದೆ ಕೆ.ಕನಿಮೋಳಿ ನೇತೃತ್ವದ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ.

ಸಾಂಕ್ರಾಮಿಕದ ಸಮಯದಲ್ಲಿ ಸರಕಾರವು 2020-21ನೇ ಸಾಲಿಗೆ ಆರಂಭದಲ್ಲಿ ಹಂಚಿಕೆ ಮಾಡಲಾಗಿದ್ದ 61,500 ಕೋ.ರೂ.ಗಳಿಂದ 1,11,500 ಕೋ.ರೂ.ಗಳಿಗೆ ಪರಿಷ್ಕೃತಗೊಳಿಸುವಂತಾಗಿತ್ತು. ಇದೇ ರೀತಿ 2021-22ರಲ್ಲಿ ನರೇಗಾ ಹಂಚಿಕೆಯನ್ನು 73,000 ಕೋ.ರೂ.ಗಳಿಂದ 99,117.53 ಕೋ.ರೂ.ಗಳಿಗೆ ಹೆಚ್ಚಿಸಲಾಗಿತ್ತು. ಇದು ನರೇಗಾ ಯೋಜನೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ.

ಹಾಲಿ ಹಣಕಾಸು ವರ್ಷದಲ್ಲಿಯೂ ಯೋಜನೆಗೆ ಆರಂಭದಲ್ಲಿ 73,000 ಕೋ.ರೂ.ಗಳನ್ನು ಹಂಚಿಕೆ ಮಾಡಲಾಗಿತ್ತಾದರೂ ನಂತರ ಅದನ್ನು 89,400 ಕೋ.ರೂ.ಗಳಿಗೆ ಹೆಚ್ಚಿಸಲಾಗಿದೆ.

ನರೇಗಾ ಯೋಜನೆಯಡಿ ಹಣದ ಕಡಿಮೆ ಹಂಚಿಕೆಯ ತಾರ್ಕಿಕತೆಯನ್ನು ಅರ್ಥ ಮಾಡಿಕೊಳ್ಳಲು ಸಮಿತಿಗೆ ಸಾಧ್ಯವಾಗಿಲ್ಲ ಎಂದು ಹೇಳಿರುವ ವರದಿಯು,ರಾಜ್ಯ ಸರಕಾರಗಳಿಗೆ ವೇತನ ಪಾವತಿ ಮತ್ತು ಸಾಮಗ್ರಿ ನಿಧಿ ಬಿಡುಗಡೆಯಲ್ಲಿ ವಿಳಂಬದ ಕುರಿತೂ ಕಳವಳಗಳನ್ನು ವ್ಯಕ್ತಪಡಿಸಿದೆ. 

share
Next Story
X