Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2030ರಿಂದ ಇಸ್ರೋ ಬಾಹ್ಯಾಕಾಶ ಪ್ರವಾಸ...

2030ರಿಂದ ಇಸ್ರೋ ಬಾಹ್ಯಾಕಾಶ ಪ್ರವಾಸ ಯೋಜನೆ: ಟಿಕೆಟ್ ದರ ಆರು ಕೋಟಿ ರೂಪಾಯಿ !

16 March 2023 7:44 AM IST
share
2030ರಿಂದ ಇಸ್ರೋ ಬಾಹ್ಯಾಕಾಶ ಪ್ರವಾಸ ಯೋಜನೆ: ಟಿಕೆಟ್ ದರ ಆರು ಕೋಟಿ ರೂಪಾಯಿ !

ಬೆಂಗಳೂರು: ಎಲ್ಲವೂ ಸುಸೂತ್ರವಾಗಿ ಸಾಗಿದರೆ ಕೈತುಂಬಾ ಹಣ ಇರುವವರು ಬಾಹ್ಯಾಕಾಶ ಸೂಟ್‌ಗಳನ್ನು ಧರಿಸಿ ರಾಕೆಟ್ ಮಾಡ್ಯುಲ್ ತುದಿಯಲ್ಲಿ ಕುಳಿತು ಬಾಹ್ಯಾಕಾಶಕ್ಕೆ ಪ್ರವಾಸ ಕೈಗೊಳ್ಳಬಹುದಾಗಿದೆ. ದರ ಕೇವಲ ಆರು ಕೋಟಿ ರೂಪಾಯಿ!

ಸರ್ಕಾರದ ಬಾಹ್ಯಾಕಶ ಪ್ರವಾಸ ಯೋಜನೆ ವೇಗ ಪಡೆದಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ "ಸ್ಪರ್ಧಾತ್ಮಕ ಬೆಲೆ"ಗೆ ಭಾರತ ಟಿಕೆಟ್ ದರ ನಿಗದಿಪಡಿಸಿದೆ ಎಂದು ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಹಿರಿಯ ಅಧಿಕಾರಿಯೊಬ್ಬರು ಪ್ರಕಟಿಸಿದ್ದಾರೆ.

ಪ್ರತಿ ಬಾಹ್ಯಾಕಾಶ ಪ್ರವಾಸದ ಟಿಕೆಟ್ ಬೆಲೆ ಸುಮಾರು ಆರು ಕೋಟಿ ರೂಪಾಯಿಗಳೆಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ. ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಬಾಹ್ಯಾಕಾಶ ಪ್ರವಾಸಕ್ಕೆ ವಿಧಿಸಲಾಗುತ್ತಿರುವ ದರಕ್ಕೆ ಸಮಾನ ದರ ನಿಗದಿಪಡಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸುರಕ್ಷಿತ ಮತ್ತು ಮರು ಬಳಕೆ ಮಾಡಬಹುದಾದ ಬಾಹ್ಯಾಕಾಶ ಪ್ರವಾಸೋದ್ಯಮ ಮಾಡ್ಯೂಲ್‌ನ ಸುತ್ತ ಕಾರ್ಯ ಪ್ರಗತಿಯಲ್ಲಿದೆ. ಟಿಕೆಟ್ ದರ ಸುಮಾರು ಆರು ಕೋಟಿ ರೂಪಾಯಿ ಇರಲಿದೆ. ಈ ಪ್ರವಾಸ ಕೈಗೊಂಡವರು ಕೂಡಾ ಬಾಹ್ಯಾಕಾಶ ಯಾನಿಗಳು ಎಂದು ಹೇಳಿಕೊಳ್ಳಬಹುದು" ಎಂದು ಸೋಮನಾಥ್ ವಿವರ ನೀಡಿದರು.

ಈ ಪ್ರವಾಸದಲ್ಲಿ ಉಪ ಕಕ್ಷೆಗೆ (ಸುಮಾರು 100 ಕಿಲೋಮೀಟರ್ ಎತ್ತರದ ಬಾಹ್ಯಾಕಾಶದ ಅಂಚು) ಅಥವಾ ಕಕ್ಷೆಗೆ (400 ಕಿಲೋಮೀಟರ್) ಕರೆದೊಯ್ಯಲಾಗುತ್ತದೆಯೇ ಎನ್ನುವುದು ಸ್ಪಷ್ಟವಾಗಿಲ್ಲ. ಆದರೆ ನಿಗದಿಪಡಿಸಿರುವ ಬೆಲೆಯನ್ನು ನೋಡಿದರೆ ಉಪಕಕ್ಷೆಗೆ ಕರೆದೊಯ್ಯಲಾಗುತ್ತದೆ ಎನಿಸುತ್ತದೆ. ಇಂಥ ಪ್ರವಾಸದಲ್ಲಿ ಪ್ರವಾಸಿಗಳು ಬಾಹ್ಯಾಕಾಶದ ಅಂಚಿನಲ್ಲಿ 15 ನಿಮಿಷ ಕಳೆಯಲಿದ್ದಾರೆ ಹಾಗೂ ಕಡಿಮೆ ಗುರುತ್ವಾಕರ್ಷಣೆ ವಾತಾವರಣದ ಅನುಭವ ಪಡೆಯಲಿದ್ದಾರೆ. ಮರುಬಳಕೆ ರಾಕೆಟ್‌ನಲ್ಲಿ ಯಾನ ಕೈಗೊಳ್ಳಲಾಗುತ್ತದೆ. ಇದು ಮಿತ ವೆಚ್ಚಕ್ಕೆ ಕಾರಣವಾಗಲಿದೆ.

share
Next Story
X