ಪುತ್ತೂರು ನಗರಸಭೆ ಸದಸ್ಯ ಆತ್ಮಹತ್ಯೆ

ಪುತ್ತೂರು: ನಗರಸಭಾ ಸದಸ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಸಾಲ್ಮರ ಸಮೀಪದ ಊರಮಾಲು ಎಂಬಲ್ಲಿ ಗುರುವಾರ ವರದಿಯಾಗಿದೆ.
ಇಲ್ಲಿನ ನಿವಾಸಿ ಶಿವರಾಮ ಸಫಲ್ಯ(46) ಮೃತಪಟ್ಟ ವ್ಯಕ್ತಿ. ಅವರು ಪುತ್ತೂರು ನಗರಸಭೆಯ ಸದಸ್ಯರಾಗಿದ್ದಾರೆ.
ಗುರುವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಅವರು ಮನೆಯ ಒಳಗಡೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಅವರ ಪತ್ನಿಯು ಪತಿಯ ಮೊಬೈಲ್ ಗೆ ಕರೆ ಮಾಡಿದ್ದ ಸಂದರ್ಭದಲ್ಲಿ ಅವರು ಕರೆಯನ್ನು ಸ್ವೀಕರಿಸಿಲ್ಲ ಎನ್ನಲಾಗಿದ್ದು, ಪಕ್ಕದ ಮನೆಗೆ ಕರೆ ಮಾಡಿ ನೋಡುವಂತೆ ತಿಳಿಸಿದ್ದರು. ಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ತಿಳಿದುಬಂದಿತ್ತು.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ಮು ಅಗಲಿದ್ದಾರೆ.
Next Story