Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ನೇತೃತ್ವದ ಭಾರತದ ಕುರಿತು ಮಾತನಾಡಲು...

ಮೋದಿ ನೇತೃತ್ವದ ಭಾರತದ ಕುರಿತು ಮಾತನಾಡಲು ಆಕ್ಸ್‌ಫರ್ಡ್ ನೀಡಿದ್ದ ಆಹ್ವಾನ ತಿರಸ್ಕರಿಸಿದ ವರುಣ್‌ ಗಾಂಧಿ

16 March 2023 11:12 PM IST
share
ಮೋದಿ ನೇತೃತ್ವದ ಭಾರತದ ಕುರಿತು ಮಾತನಾಡಲು ಆಕ್ಸ್‌ಫರ್ಡ್ ನೀಡಿದ್ದ ಆಹ್ವಾನ ತಿರಸ್ಕರಿಸಿದ ವರುಣ್‌ ಗಾಂಧಿ

ಹೊಸದಿಲ್ಲಿ,ಮಾ.14: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಸರಿಯಾದ ದಾರಿಯಲ್ಲಿ ಸಾಗುತ್ತಿದೆಯೇ ಎನ್ನುವುದರ ಕುರಿತು ಚರ್ಚೆಯಲ್ಲಿ ಮಾತನಾಡಲು ಬ್ರಿಟನ್ ನ ಆಕ್ಸ್ಫರ್ಡ್ ಯೂನಿಯನ್ ನ ಆಹ್ವಾನವನ್ನು ಬಿಜೆಪಿ ಸಂಸದ ವರುಣ ಗಾಂಧಿ ತಿರಸ್ಕರಿಸಿದ್ದಾರೆ.

ಅಂತರರಾಷ್ಟ್ರೀಯ ವೇದಿಕೆಯಲ್ಲಿ ದೇಶದ ಸವಾಲುಗಳ ಕುರಿತು ಮಾತನಾಡುವಲ್ಲಿ ಯಾವುದೇ ಹುರುಳು ಅಥವಾ ಋಜುತ್ವ ತನಗೆ ಕಂಡು ಬರುತ್ತಿಲ್ಲ ಮತ್ತು ಅಂತಹ ಹೆಜ್ಜೆಯು ಅಗೌರವದ ಕೃತ್ಯವಾಗುತ್ತದೆ ಎಂದು ಅವರು ಹೇಳಿದ್ದಾರೆ.

‘ಮೋದಿಯವರ ಭಾರತವು ಸರಿಯಾದ ದಾರಿಯಲ್ಲಿದೆ ಎನ್ನುವುದನ್ನು ಈ ಸದನವು ನಂಬುತ್ತದೆ ’ ಎಂಬ ನಿರ್ಣಯದ ವಿರುದ್ಧ ವರುಣ್ ಗಾಂಧಿ ಮಾತನಾಡಬೇಕೆಂದು ಆಕ್ಸ್ಫರ್ಡ್ ಯೂನಿಯನ್ ಬಯಸಿದ್ದರಿಂದ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ವರುಣ ಗಾಂಧಿ ಆಗಾಗ್ಗೆ ಬಿಜೆಪಿ ನೇತೃತ್ವದ ಕೇಂದ್ರದ ನೀತಿಗಳನ್ನು ಟೀಕಿಸುತ್ತಿರುತ್ತಾರೆ ಎನ್ನುವುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.

ವರುಣ್ ಗಾಂಧಿಯವರ ಸೋದರ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಲಂಡನ್ನಲ್ಲಿ ನೀಡಿದ್ದ ಹೇಳಿಕೆಗಳ ಕುರಿತು ವಿವಾದ ಸೃಷ್ಟಿಯಾಗಿರುವ ಸಮಯದಲ್ಲಿಯೇ ಈ ಬೆಳವಣಿಗೆ ನಡೆದಿದೆ. ಎಪ್ರಿಲ್ ಮತ್ತು ಜೂನ್ ನಡುವೆ ನಡೆಯಲಿರುವ ಚರ್ಚೆಗೆ ವರುಣ ಗಾಂಧಿಗೆ ಆಹ್ವಾನವನ್ನು ಯುನಿಯನ್ ಅಧ್ಯಕ್ಷ ಮ್ಯಾಥ್ಯೂ ಡಿಕ್ ಪರವಾಗಿ ನೀಡಲಾಗಿತ್ತು.

ಯೂನಿಯನ್ಗೆ ನೀಡಿರುವ ಉತ್ತರದಲ್ಲಿ ವರುಣ ಗಾಂಧಿ, ತನ್ನಂತಹ ಪ್ರಜೆಗಳಿಗೆ ಭಾರತದಲ್ಲಿ ಇಂತಹ ವಿಷಯಗಳನ್ನು ಸುಲಭವಾಗಿ ಚರ್ಚಿಸಲು ಅವಕಾಶವಿದೆ,ಸಾರ್ವಜನಿಕವಾಗಿ ಮತ್ತು ಸಂಸತ್ತಿನಲ್ಲಿಯೂ ಸರಕಾರದ ನೀತಿಗಳನ್ನು ಟೀಕಿಸಬಹುದಾಗಿದೆ. ಆದರೆ ನೀತಿ ನಿರೂಪಕರ ವಿರುದ್ಧ ಭಾರತದೊಳಗೆ ಮಾತ್ರ ಟೀಕೆಗಳನ್ನು ಮಾಡಬೇಕು ಮತ್ತು ಅವುಗಳನ್ನು ವಿದೇಶಗಳ ನೆಲದಲ್ಲಿ ಮಾಡುವುದು ದೇಶದ ಹಿತಾಸಕ್ತಿಗೆ ಹಾನಿಕಾರಕವಾಗುತ್ತದೆ ಮತ್ತು ಅಗೌರವದ ಕೃತ್ಯವಾಗುತ್ತದೆ ಎಂದು ಹೇಳಿದ್ದಾರೆ.

ತನ್ನಂತಹ ರಾಜಕಾರಣಿಗಳು ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರತ್ಯೇಕ ನೀತಿಗಳ ಬಗ್ಗೆ ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು,ಆದರೆ ಭಾರತದ ಏಳಿಗೆಯ ವಿಷಯದಲ್ಲಿ ಅವರೆಲ್ಲ ಒಂದೇ ದಾರಿಯಲ್ಲಿ ಜೊತೆಯಾಗಿರುತ್ತಾರೆ ಎಂದೂ ಅವರು ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಆಡಳಿತವು ಭಾರತವನ್ನು ಜಾಗತಿಕ ರಂಗದಲ್ಲಿ ಮುನ್ನೆಲೆಗೆ ತಂದಿದೆ ಮತ್ತು ಅನೇಕರು ಅವರ ನೀತಿ ಕಾರ್ಯಸೂಚಿಗಳನ್ನು ಸದೃಢ ಆರ್ಥಿಕ ಬೆಳವಣಿಗೆ,ಭ್ರಷ್ಟಾಚಾರ ನಿಗ್ರಹ ಮತ್ತು ಭಾರತವು ಮೊದಲು ಎನ್ನುವುದರೊಂದಿಗೆ ಸಮೀಕರಿಸಿದ್ದಾರೆ. ಇನ್ನೊಂದೆಡೆ,ಕೃಷಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಅತೃಪ್ತಿಯ ತಪ್ಪು ನಿರ್ವಹಣೆ,ಧಾರ್ಮಿಕ ಗುಂಪುಗಳ ನಡುವೆ ಸಂಘರ್ಷಕ್ಕೆ ಪ್ರಚೋದನೆ ಹಾಗೂ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಪುನರುಜ್ಜೀವನದಲ್ಲಿ ವೈಫಲ್ಯಕ್ಕಾಗಿ ಮೋದಿ ಆಡಳಿತವನ್ನು ಟೀಕಿಸಲಾಗುತ್ತಿದೆ ಎಂದು ಹೇಳಿರುವ ಆಹ್ವಾನ ಪತ್ರವು, ಮತದಾರರಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಜನಪ್ರಿಯತೆಯ ಹಿನ್ನೆಲೆಯಲ್ಲಿ ಮೋದಿಯವರ ನೇತೃತ್ವದಡಿ ಬಿಜೆಪಿಯ ಮಾರ್ಗವು ಏಕೀಕರಣಕ್ಕಿಂತ ಹೆಚ್ಚು ಧ್ರುವೀಕರಣದತ್ತ ಸಾಗುತ್ತಿದೆಯೇ ಎನ್ನುವುದನ್ನು ಚರ್ಚಿಸುವುದು ಅನಿವಾರ್ಯವಾಗಿದೆ. ಆಗ ‘ಭಾರತವು ಭವಿಷ್ಯದಲ್ಲಿ ಮುನ್ನುಗ್ಗುತ್ತಿರುವಾಗ ಅದಕ್ಕೆ ಸರಿಯಾದ ಮಾರ್ಗ ಯಾವುದು (ಅಥವಾ ಯಾರು)’ ಎನ್ನುವುದು ಪ್ರಶ್ನೆಯಾಗುತ್ತದೆ ಎಂದು ಹೇಳಿದೆ.

share
Next Story
X