Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿವಿಧ ಇಲಾಖೆಗಳಲ್ಲಿ ವೆಚ್ಚವಾಗದೇ ಉಳಿದ...

ವಿವಿಧ ಇಲಾಖೆಗಳಲ್ಲಿ ವೆಚ್ಚವಾಗದೇ ಉಳಿದ 79,255 ಕೋಟಿ ರೂ.!

►ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ವೆಚ್ಚವಾಗದ 7,345.80 ಕೋ.ರೂ. ► ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ 5,957.76 ಕೋ.ರೂ.

ಜಿ.ಮಹಾಂತೇಶ್ಜಿ.ಮಹಾಂತೇಶ್17 March 2023 8:55 AM IST
share
ವಿವಿಧ ಇಲಾಖೆಗಳಲ್ಲಿ ವೆಚ್ಚವಾಗದೇ ಉಳಿದ 79,255 ಕೋಟಿ ರೂ.!
►ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ವೆಚ್ಚವಾಗದ 7,345.80 ಕೋ.ರೂ. ► ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ 5,957.76 ಕೋ.ರೂ.

ಬೆಂಗಳೂರು: ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಶಾಲಾ ಕಟ್ಟಡಗಳ ದುರಸ್ತಿ, ಶೌಚಾಲಯ ನಿರ್ಮಾಣ, ಬೈಸಿಕಲ್ ಒದಗಿಸಲು ಹಣವಿಲ್ಲವೆಂದು ಕೈಚೆಲ್ಲುತ್ತಿರುವ ಹೊತ್ತಿನಲ್ಲೇ ರಾಜ್ಯ ಸರಕಾರದ ವಿವಿಧ ಇಲಾಖೆಗಳು ಫೆಬ್ರವರಿ ಅಂತ್ಯಗೊಂಡರೂ 79,255 ಕೋಟಿ ರೂ.ಗಳನ್ನು ಇನ್ನೂ ಖರ್ಚು ಮಾಡಿಲ್ಲ ಎಂಬುದು ಬಹಿರಂಗವಾಗಿದೆ.

2023ರ ಮಾರ್ಚ್ 21ರಂದು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕರ್ನಾಟಕ ಪ್ರಗತಿ  ಪರಿಶೀಲನೆ(ಕೆಡಿಪಿ) ಸಭೆಗೆ ಇಲಾಖೆಗಳು ಸಲ್ಲಿಸಿರುವ ಅಂಕಿ ಅಂಶಗಳ ಪ್ರಕಾರ ನಗರಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳು ನಿಗದಿತ ಅವಧಿ ಮೀರಿದ್ದರೂ ಬಿಡುಗಡೆಯಾಗಿರುವ ಅನುದಾನವನ್ನೂ ಖರ್ಚು ಮಾಡದೆಯೇ ಹಲವು ಜನಕಲ್ಯಾಣ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇಲಾಖೆಗಳು ಮಂಡಿಸಿರುವ ಅಂಕಿ ಅಂಶಗಳ ಪಟ್ಟಿಯು ‘ಣhe-ಜಿiಟe.iಟಿ’ಗೆ ಲಭ್ಯವಾಗಿದೆ.

 ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ರಾಜ್ಯ ಬಿಜೆಪಿ ಸರಕಾರವು ಮತ ಬ್ಯಾಂಕ್‌ನ್ನು ಬಲಪಡಿಸಿಕೊಳ್ಳಲು ಕೋಟ್ಯಂತರ ರೂ. ಖರ್ಚು ಮಾಡಿ ಫಲಾನುಭವಿಗಳ ಸಮಾವೇಶಗಳನ್ನು ಸಂಘಟಿಸುತ್ತಿದೆ. ಬಿಡುಗಡೆಯಾಗಿರುವ ಅನುದಾನವನ್ನು ಖರ್ಚು ಮಾಡಲಾಗಿದೆ ಎಂದು ಈ ಸಮಾವೇಶಗಳಲ್ಲಿ ಲೆಕ್ಕಕೊಡುತ್ತಿದೆಯಾದರೂ 2023ರ ಫೆಬ್ರವರಿ ಅಂತ್ಯಕ್ಕೆ   79,255 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿರುವುದು ಮುನ್ನೆಲೆಗೆ ಬಂದಿದೆ.

2022-23ರ ಆಯವ್ಯಯದಲ್ಲಿ ಒಟ್ಟು 2,42,751.39 ಕೋಟಿ ರೂ. ಹಂಚಿಕೆಯಾಗಿತ್ತು. ಈ ಮೊತ್ತದಲ್ಲಿ ಪ್ರಾರಂಭಿಕ ಶಿಲ್ಕು 20,248.66 ಕೋಟಿ ರೂ. ಇತ್ತು. ಈ ಪೈಕಿ 1,93,281.91 ಕೋಟಿ ರೂ. ಬಿಡುಗಡೆ ಆಗಿದೆ. ಇದು ಒಟ್ಟು ಅನುದಾನಕ್ಕೆ ಶೇ.79.62ರಷ್ಟಿತ್ತು. ಇದರಲ್ಲಿ ಒಟ್ಟು 1,83,744.97 ಕೋಟಿ ರೂ. ವೆಚ್ಚವಾಗಿದೆ. 2021-22ರಲ್ಲಿ ಇದೇ ಅವಧಿಗೆ ಒಟ್ಟು ಅನುದಾನಕ್ಕೆ ಶೇ.86.3ರಷ್ಟು ಅಂದರೆ 1,61,297.40 ಕೋಟಿ ರೂ. ವೆಚ್ಚವಾಗಿತ್ತು. 2021-22ರ ಫೆಬ್ರವರಿಯಲ್ಲಿ   90,369 ಕೋಟಿ ರೂ. ವೆಚ್ಚಕ್ಕೆ ಬಾಕಿ ಉಳಿಸಿಕೊಂಡಿತ್ತು ಎಂಬುದು ಅಂಕಿ ಅಂಶದಿಂದ ತಿಳಿದು ಬಂದಿದೆ.

ಅನುದಾನವನ್ನು ಖರ್ಚು ಮಾಡದೆಯೇ ಬಾಕಿ ಉಳಿಸಿಕೊಂಡಿರುವ ಇಲಾಖೆಗಳ ಪೈಕಿ ನಗರಾಭಿವೃದ್ಧಿ ಇಲಾಖೆಯು  ಪ್ರಥಮ ಸ್ಥಾನದಲ್ಲಿದೆ. ಫೆ.2023ರ ಅಂತ್ಯಕ್ಕೆ  ನಗರಾಭಿವೃದ್ಧಿ ಇಲಾಖೆಯು ಒಟ್ಟು 8,204.96 ಕೋಟಿ ರೂ.ಗಳನ್ನು ವೆಚ್ಚ ಮಾಡದೆಯೇ ಬಾಕಿ ಉಳಿಸಿಕೊಂಡಿದೆ.

ಅದೇ ರೀತಿ ಗ್ರಾಮೀಣಾಬಿವೃದ್ಧಿ ಇಲಾಖೆಯಲ್ಲಿ 7,345.80 ಕೋಟಿ ರೂ., ಜಲಸಂಪನ್ಮೂಲ ಇಲಾಖೆ 7,174.86 ಕೋಟಿ ರೂ., ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ  ಇಲಾಖೆಯು 5,957.76 ಕೋಟಿ ರೂ., ಇಂಧನ ಇಲಾಖೆ 4,907 ಕೋಟಿ ರೂ., ಲೋಕೋಪಯೋಗಿ  ಇಲಾಖೆಯು 4,355.02 ಕೋಟಿ ರೂ.ಗಳನ್ನು ಖರ್ಚು ಮಾಡಿಲ್ಲ.

ಯೋಜನೆ ಇಲಾಖೆಯು 3,633.02 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 3,283.67 ಕೋಟಿ ರೂ., ಕೃಷಿ ಇಲಾಖೆಯು 3,262.49 ಕೋಟಿ ರೂ., ಆರೋಗ್ಯ ಇಲಾಖೆಯು 2,331.53 ಕೋಟಿ ರೂ., ಕಂದಾಯ 1,990.96 ಕೋಟಿ ರೂ., ವಸತಿ 1,972.64 ಕೋಟಿ ರೂ., ಸಹಕಾರ 1,569.82 ಕೋಟಿ ರೂ., ಉನ್ನತ ಶಿಕ್ಷಣ 1,386.72 ಕೋಟಿ ರೂ., ಒಳಾಡಳಿತ 1,300.94 ಕೋಟಿ ರೂ., ಸಮಾಜ ಕಲ್ಯಾಣ ಇಲಾಖೆಯು 1,109.94 ಕೋಟಿ ರೂ.ಗಳನ್ನು ವೆಚ್ಚ ಮಾಡದೆಯೇ ಬಾಕಿ ಉಳಿಸಿಕೊಂಡಿರುವುದು ಗೊತ್ತಾಗಿದೆ.

ವಿಪತ್ತು ನಿರ್ವಹಣೆಯಲ್ಲಿ 695.93 ಕೋಟಿ ರೂ., ಅರಣ್ಯ ಇಲಾಖೆಯಲ್ಲಿ 608.74 ಕೋಟಿ ರೂ., ಮೂಲಸೌಲಭ್ಯ ಅಭಿವೃದ್ಧಿಯಲ್ಲಿ 575.38 ಕೋಟಿ ರೂ., ಅಲ್ಪಸಂಖ್ಯಾತರ ಕಲ್ಯಾಣದಲ್ಲಿ 567.70 ಕೋಟಿ ರೂ., ಸಣ್ಣ ನೀರಾವರಿಯಲ್ಲಿ 525.05 ಕೋಟಿ ರೂ., ಪಶುಸಂಗೋಪನೆಯಲ್ಲಿ 464.45 ಕೋಟಿ ರೂ., ವಾಣಿಜ್ಯ ಮತ್ತು ಕೈಗಾರಿಕೆಯಲ್ಲಿ 417.30 ಕೋಟಿ ರೂ., ತೋಟಗಾರಿಕೆಯಲ್ಲಿ 406.56 ಕೋಟಿ ರೂ, ಕೌಶಲ್ಯಾಭಿವೃದ್ಧಿಯಲ್ಲಿ 260.33 ಕೋಟಿ ರೂ, ಕನ್ನಡ ಸಂಸ್ಕೃತಿಯಲ್ಲಿ 221.71 ಕೋಟಿ ರೂ.ಗಳನ್ನು ವೆಚ್ಚ ಮಾಡಿಲ್ಲ ಎಂಬುದು ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X