Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್ ನಲ್ಲಿ ಪ್ರತಿಪಕ್ಷ ಸಂಸದರ ಮೈಕ್‌...

ಸಂಸತ್ ನಲ್ಲಿ ಪ್ರತಿಪಕ್ಷ ಸಂಸದರ ಮೈಕ್‌ ಗಳು ಮ್ಯೂಟ್: ಕಾಂಗ್ರೆಸ್ ಆರೋಪ; ತಾಂತ್ರಿಕ ದೋಷವೆಂದ ಸರಕಾರ

17 March 2023 8:57 PM IST
share
ಸಂಸತ್ ನಲ್ಲಿ ಪ್ರತಿಪಕ್ಷ ಸಂಸದರ ಮೈಕ್‌ ಗಳು ಮ್ಯೂಟ್: ಕಾಂಗ್ರೆಸ್ ಆರೋಪ; ತಾಂತ್ರಿಕ ದೋಷವೆಂದ ಸರಕಾರ

ಹೊಸದಿಲ್ಲಿ, ಮಾ. 17: ಸರಕಾರದ ವಿರುದ್ಧದ ಧ್ವನಿಯನ್ನು ದಮನಿಸುವುದಕ್ಕಾಗಿ ಸಂಸತ್ನಲ್ಲಿ ಪ್ರತಿಪಕ್ಷ ನಾಯಕರ ಮೈಕ್ರೋಫೋನ್ ಗಳನ್ನು ಮೌನಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಆದರೆ, ಅದು ‘‘ತಾಂತ್ರಿಕ ದೋಷ’’ ಎಂಬುದಾಗಿ ಆಡಳಿತಾರೂಢ ಬಿಜೆಪಿ ಹೇಳಿದೆ.

ಇದಕ್ಕೆ ಸಂಬಂಧಿಸಿದ ವೀಡಿಯೊ ತುಣುಕೊಂದನ್ನು ಕಾಂಗ್ರೆಸ್ ಟ್ವಿಟರ್ ನಲ್ಲಿ ಹಂಚಿಕೊಂಡಿದೆ. ಸಂಸತ್ ನಲ್ಲಿ ಕಲಾಪಗಳು ಆರಂಭಗೊಂಡ ಸ್ವಲ್ಪ ಹೊತ್ತಿನ ಬಳಿಕ, ಪ್ರತಿಪಕ್ಷಗಳ ಪ್ರತಿಭಟನೆಯ ವೇಳೆ ಲೋಕಸಭೆಯಲ್ಲಿ ವೌನ ಆವರಿಸುವುದನ್ನು ಈ ವೀಡಿಯೊ ತುಣುಕು ತೋರಿಸುತ್ತದೆ.

ಲೋಕಸಭಾ ಸ್ಪೀಕರ್ ಓಮ್ ಬಿರ್ಲಾರ ಕುರ್ಚಿಯ ಸಮೀಪ ಪ್ರತಿಪಕ್ಷ ಸಂಸದರು ಪ್ರತಿಭಟನೆ ನಡೆಸುವುದನ್ನು ಹಾಗೂ ಆಡಳಿತಾರೂಢ ಪಕ್ಷದ ಬಹುತೇಕ ಎಲ್ಲ ಸದಸ್ಯರು ಎದ್ದು ನಿಂತಿರುವುದನ್ನು ವೀಡಿಯೊ ತೋರಿಸುತ್ತದೆ. ಆಗ ಸುಮಾರು 20 ನಿಮಿಷಗಳ ಕಾಲ ಧ್ವನಿಯೇ ಕೇಳುವುದಿಲ್ಲ. ಸ್ಪೀಕರ್ ಮಾತನಾಡಿದಾಗಷ್ಟೇ ಧ್ವನಿ ಮರಳುತ್ತದೆ. ಸ್ಪೀಕರ್ ಮೊದಲು, ಬೊಬ್ಬೆ ಹೊಡೆಯುವುದನ್ನು ನಿಲ್ಲಿಸುವಂತೆ ಸಂಸದರನ್ನು ಒತ್ತಾಯಿಸುತ್ತಾರೆ ಮತ್ತು ಬಳಿಕ, ಸದನವನ್ನು ದಿನದ ಮಟ್ಟಿಗೆ ಮುಂದೂಡುತ್ತಾರೆ.

ಧ್ವನಿಯನ್ನು ಉದ್ದೇಶಪೂರ್ವಕವಾಗಿ ಹತ್ತಿಕ್ಕಲಾಗಿದೆ ಎನ್ನುವುದನ್ನು ಸರಕಾರ ನಿರಾಕರಿಸಿದೆ. ‘‘ಅದು ತಾಂತ್ರಿಕ ದೋಷ, ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ’’ ಎಂದು ಮೂಲಗಳು ತಿಳಿಸಿವೆ. ‘‘ಮೋದಿಯವರ ಸ್ನೇಹಿತನಿಗಾಗಿ ಲೋಕಸಭೆಯ ಧ್ವನಿಯನ್ನೇ ಹತ್ತಿಕ್ಕಲಾಗಿದೆ’’

‘‘ಮೊದಲು, ಮೈಕ್ಗಳನ್ನು ಮಾತ್ರ ಬಂದ್ ಮಾಡಲಾಗುತ್ತಿತ್ತು. ಇದು ಸದನದ ಕಲಾಪಗಳನ್ನೇ ವೌನಗೊಳಿಸಲಾಗಿದೆ. ಮೋದಿಯವರ ಸ್ನೇಹಿತನಿಗಾಗಿ ಲೋಕಸಭೆಯ ಧ್ವನಿಯನ್ನೇ ಹತ್ತಿಕ್ಕಲಾಗಿದೆ’’ ಎಂಬುದಾಗಿ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಅದಾನಿ ಗುಂಪಿನ ವಿರುದ್ಧ ಹಿಂಡನ್ಬರ್ಗ್ ರಿಸರ್ಚ್ ವರದಿಯು ಮಾಡಿರುವ ಆರೋಪಗಳ ವಿಚಾರಣೆಯನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಗೆ ವಹಿಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಹತ್ತಿಕ್ಕುವುದಕ್ಕಾಗಿ ಅವರ ಮೈಕ್ಗಳನ್ನು ಮೌನಗೊಳಿಸಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದೇ ವೇಳೆ, ಸಂಸತ್ನಲ್ಲಿ ಮಾತನಾಡಲು ರಾಹುಲ್ ಗಾಂಧಿಗೆ ಅವಕಾಶ ನೀಡದಿರಲು ಬಿಜೆಪಿ ನಿರ್ಧರಿಸಿದೆ ಎಂಬುದಾಗಿಯೂ ಕಾಂಗ್ರೆಸ್ ಆರೋಪಿಸಿದೆ.

share
Next Story
X