Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಸ್ತಿ-ಬಾಧ್ಯತೆಗಳ ಅಸಮತೋಲನದ ವಿರುದ್ಧ...

ಆಸ್ತಿ-ಬಾಧ್ಯತೆಗಳ ಅಸಮತೋಲನದ ವಿರುದ್ಧ ಬ್ಯಾಂಕ್ ಗಳು ಎಚ್ಚರಿಕೆ ವಹಿಸಬೇಕು: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್

17 March 2023 10:31 PM IST
share
ಆಸ್ತಿ-ಬಾಧ್ಯತೆಗಳ ಅಸಮತೋಲನದ ವಿರುದ್ಧ ಬ್ಯಾಂಕ್ ಗಳು ಎಚ್ಚರಿಕೆ ವಹಿಸಬೇಕು: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್

ಮುಂಬೈ, ಮಾ.17: ತಮ್ಮ ಆಸ್ತಿ- ಬಾಧ್ಯತೆ (ಆಸೆಟ್ಸ್ -ಲಯಾಬಿಲಿಟೀಸ್)ಗಳು ಪರಸ್ಪರ ಹೊಂದಾಣಿಕೆಯಾಗದೆ ಇರುವುದರ ವಿರುದ್ಧ ಬ್ಯಾಂಕ್ಗಳು ಜಾಗರೂಕತೆೆ ವಹಿಸಬೇಕು ಇಲ್ಲದಿದ್ದಲ್ಲಿ ಆರ್ಥಿಕ ಸ್ಥಿರತೆಗೆ ಧಕ್ಕೆಯುಂಟಾಗಲಿದೆಯೆಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಎಚ್ಚರಿಕೆ ನೀಡಿದ್ದಾರೆ. ಸಿಲಿಕಾನ್ ವ್ಯಾಲಿ ಬ್ಯಾಂಕ್ ಮುಚ್ಚುಗಡೆ ಸೇರಿದಂತೆ ಅಮೆರಿಕದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಪ್ರಸಕ್ತ ಉಂಟಾಗಿರುವ ಬಿಕ್ಕಟ್ಟಿಗೆ ಆಸ್ತಿ- ಬಾಧ್ಯತೆ (ಆಸೆಟ್ಸ್ ಲಯಾಬಿಲಿಟೀಸ್)ಗಳ ಅಸಮತೋಲನ ಕಾರಣವೆಂದು ಅವರು ತಿಳಿಸಿದ್ದಾರೆ.

ಕೇರಳದ ಕೊಚ್ಚಿಯಲ್ಲಿ ಶುಕ್ರವಾರ ಕೆ.ಪಿ. ಹಾರ್ಮಿಸ್ (ಫೆಡರಲ್ ಬ್ಯಾಂಕ್ ಸಂಸ್ಥಾಪಕ)  ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ವಿದೇಶಿ ವಿನಿಮಯ ದರದಲ್ಲಿ ಮುಂದುವರಿದಿರುವ ಚಂಚಲತೆ, ಅದರಲ್ಲೂ ವಿಶೇಷವಾಗಿ ಅಮೆರಿಕ ಡಾಲರ್ನ ವೌಲ್ಯದಲ್ಲಿ ಅತಿಯಾದ ಏರಿಕೆ ಮತ್ತು ಇದರಿಂದಾಗಿ ರಾಷ್ಟ್ರಗಳ ಬಾಹ್ಯ ಸಾಲ ಪಾವತಿ ಸಾಮರ್ಥ್ಯದ ಮೇಲೆ ಉಂಟಾಗಿರುವ ಪರಿಣಾಮಗಳನ್ನು ಪ್ರಸ್ತಾವಿಸಿದ ದಾಸ್ ‘‘ಈ ಬಗ್ಗೆ ನಾವು ಹೆದರಬೇಕಾಗಿಲ್ಲ. ನಮ್ಮ ಬಾಹ್ಯ ಸಾಲವನ್ನು ನಾವು ನಿಭಾಯಿಸಬಹುದಾಗಿದೆ . ಡಾಲರ್ ಮೌಲ್ಯ ಏರಿಕೆಯು ನಮಗೆ ಯಾವುದೇ ಸಮಸ್ಯೆಯನ್ನುಂಟು ಮಾಡಲಾರದು ಎಂದವರು ಹೇಳಿದರು.

ಅಮೆರಿಕದ ಡಾಲರ್ ಮೌಲ್ಯದ ಹೆಚ್ಚಳದಿಂದಾಗಿ ಬಾಹ್ಯ ಸಾಲದ ದರ ಅಧಿಕವಾಗಿರುವ ಅಪಾಯವನ್ನು ಎದುರಿಸುವ ದೇಶಗಳಗೆ ನೆರವಾಗುವಂತೆ ಅವರು ಜಿ20 ರಾಷ್ಟ್ರಗಳನ್ನು ಆಗ್ರಹಿಸಿದರು. ಆರ್ಬಿಐ ಗವರ್ನರ್ ಅವರು ತನ್ನ ಭಾಷಣದಲ್ಲಿ ಜಿ20 ಒಕ್ಕೂಟದಲ್ಲಿ ಭಾರತದ ಅಧ್ಯಕ್ಷತೆಯ ಬಗ್ಗೆ ಹೆಚ್ಚಿನ ಒತ್ತು ನೀಡಿದರು.

ಹವಾಮಾನ ಬದಲಾವಣೆಯಿಂದ ಬಾಧಿತವಾದ ರಾಷ್ಟ್ರಗಳಿಗೆ ಜಿ20 ದೇಶಗಳು ವಿಶೇಷ ಆರ್ಥಿಕ ನೆರವನ್ನು ನೀಡಬೇಕೆಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು. ಖಾಸಗಿ ಡಿಜಿಟಲ್ ಕರೆನ್ಸಿಗಳ ಚಲಾವಣೆಯನ್ನು ತಾನು ವಿರೋಧಿಸುವುದಾಗಿ ಹೇಳಿದ ಶಕ್ತಿಕಾಂತ್ ದಾಸ್, ಹಣಕಾಸು ವ್ಯವಸ್ಥೆಗೆ ಖಾಸಗಿ ಕ್ರಿಪ್ಟೊಕರೆನ್ಸಿಗಳಿಂದ ಅಪಾಯ ಉಂಟು ಮಾಡಬಲ್ಲದೆಂಬುದನ್ನು ಅಮೆರಿಕದ ಪ್ರಸಕ್ತ ಬ್ಯಾಂಕಿಂಗ್ ಬಿಕ್ಕಟ್ಟು ತೋರಿಸಿಕೊಟ್ಟಿದೆ ಎಂದು ಹೇಳಿದರು.

share
Next Story
X