ಮಂಗಳೂರು ವಿವಿಯ ಗೌರವ ಡಾಕ್ಟರೇಟ್ ಪುರಸ್ಕೃತ ಯು.ಕೆ.ಮೋನು ಅವರಿಗೆ ಸನ್ಮಾನ

ಮಂಗಳೂರು, ಮಾ.18: ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಕಣಚೂರು ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಂಸ್ಥಾಪಕ ಕಣಚೂರು ಗ್ರೂಪ್ ಆಫ್ ಇಂಡಸ್ಟ್ರೀಸ್ ಮಾಲಕ ಯು.ಕೆ.ಮೋನು ಕಣಚೂರು ಅವರನ್ನು ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್ ಮಾತನಾಡಿ, ವಿದ್ಯಾದಾನ ಮತ್ತು ಆರೋಗ್ಯದಾನದಂತಹ ಶ್ರೇಷ್ಠ ಕಾರ್ಯ ಮಾಡಿ ಸಾಧನೆಗೆ ಜೀವನದಲ್ಲಿ ಆರ್ಥಿಕ ಬಡತನ ಅಡ್ಡಿಯಲ್ಲ ಎಂದು ಸಾಬೀತುಪಡಿಸಿದ ಕಣಚೂರ್ ಮೋನು ಹಾಜಿಯವರ ಸಾಧನೆ ನಮಗೆ ಮಾರ್ಗದರ್ಶನ, ಯುವಕರಿಗೆ ಸ್ಫೂರ್ತಿ ಎಂದು ಹೇಳಿದರು
ಸನ್ಮಾನಕ್ಕೆ ಸ್ವೀಕರಿಸಿ ಮಾತನಾಡಿದ ಕಣಚೂರು ಮೋನು, ಜನರ, ಪ್ರೀತಿ ವಿಶ್ವಾಸ ಗಳಿಸಲು ಸಮಾಜ ಸೇವೆಯಿಂದ ಸಾಧ್ಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ದ.ಕ. ಜಿಲ್ಲೆಯನ್ನು ಅಭಿವೃದ್ಧಿ, ಶಾಂತಿ ಸೌಹಾರ್ತೆ, ಸಾಮರಸ್ಯದ ನೆಲೆವೀಡಾಗಿಸಿ ಭವಿಷ್ಯದ ಮಾದರಿ ಜಿಲ್ಲೆಯಾಗಿಸಲು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ, ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್, ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಸಂಘಟನಾ ಕಾರ್ಯದರ್ಶಿ ಎಸ್.ಸಂಶುದ್ದೀನ್, ಪುತ್ತೂರು ಸಯ್ಯದ್ ಮಲೆ ಜುಮಾ ಮಸೀದಿಯ ಅಧ್ಯಕ್ಷ ಅಡ್ವೋಕೇಟ್ ನೂರುದ್ದೀನ್ ಸಾಲ್ಮರ, ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ಎ.ಮಹಮ್ಮದ್, ಕೃಷಿ ಸಮಾಜದ ಜಿಲ್ಲಾಧ್ಯಕ್ಷ ಹೈದರ್ ಪರ್ತಿಪ್ಪಾಡಿ, ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಖಾಲಿದ್ ಉಜಿರೆ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸಿದ್ದೀಕ್ ಕೊಕ್ಕೋ, ರಾಜ್ಯ ಯುವ ಕಾಂಗ್ರೆಸ್ ಮಾಜಿ ಸಂಯೋಜಕ ಸಮದ್ ಸೋಂಪಾಡಿ, ಅನ್ಸಾರ್ ನಿರ್ದೇಶಕ ಬಶೀರ್ ಸಪ್ನ ಮೊದಲಾದವರು ಉಪಸ್ಥಿತರಿದ್ದರು.








