Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೈಲೆಂಟ್‌ ಸುನಿಲ್‌ ಸೇರ್ಪಡೆ ಮೂಲಕ...

ಸೈಲೆಂಟ್‌ ಸುನಿಲ್‌ ಸೇರ್ಪಡೆ ಮೂಲಕ ‘ಬಿಜೆಪಿ ರೌಡಿ ಮೋರ್ಚಾ’ಕ್ಕೆ ಬಹಿರಂಗವಾಗಿ ಚಾಲನೆ ದೊರೆತಿದೆ: ಕಾಂಗ್ರೆಸ್ ಟೀಕೆ

ನಿಮ್ಮನ್ನು ಸ್ವಾಗತಿಸಲು ಮತ್ತೊಬ್ಬ ಪಾತಕಿಯನ್ನು ಬಿಜೆಪಿ ಸೇರಿಸಿದೆ: ಪ್ರಧಾನಿ ಮೋದಿಗೆ ಕುಟುಕಿದ ಕಾಂಗ್ರೆಸ್‌

18 March 2023 6:55 PM IST
share
ಸೈಲೆಂಟ್‌ ಸುನಿಲ್‌ ಸೇರ್ಪಡೆ ಮೂಲಕ ‘ಬಿಜೆಪಿ ರೌಡಿ ಮೋರ್ಚಾ’ಕ್ಕೆ ಬಹಿರಂಗವಾಗಿ ಚಾಲನೆ ದೊರೆತಿದೆ: ಕಾಂಗ್ರೆಸ್ ಟೀಕೆ
ನಿಮ್ಮನ್ನು ಸ್ವಾಗತಿಸಲು ಮತ್ತೊಬ್ಬ ಪಾತಕಿಯನ್ನು ಬಿಜೆಪಿ ಸೇರಿಸಿದೆ: ಪ್ರಧಾನಿ ಮೋದಿಗೆ ಕುಟುಕಿದ ಕಾಂಗ್ರೆಸ್‌

ಬೆಂಗಳೂರು: ‘ಪಾತಕಿ ಸೈಲೆಂಟ್ ಸುನೀಲನನ್ನು ಪಕ್ಷಕ್ಕೆ ಅಧಿಕೃತವಾಗಿ ಸೇರಿಸಿಕೊಳ್ಳುವ ಮೂಲಕ ‘ಬಿಜೆಪಿ ರೌಡಿ ಮೋರ್ಚಾ’ಕ್ಕೆ ಬಹಿರಂಗವಾಗಿ ಚಾಲನೆ ದೊರೆತಿದೆ! ಯಾವುದೇ ಕಾರಣಕ್ಕೂ ರೌಡಿ ಶೀಟರ್‍ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ನಾಲಿಗೆಯನ್ನು ಈಗ ಯಾವುದರಲ್ಲಿ ತೊಳೆದುಕೊಳ್ಳುವಿರಿ? ಗೋಮೂತ್ರವೋ, ಗೋಮಯವೋ!?’ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಫೈಟರ್ ರವಿ ಎದುರು ಕೈಮುಗಿದು ನಿಂತ ನರೇಂದ್ರ ಅವರೇ, ಮುಂದಿನ ಬಾರಿ ಬಂದಾಗ ಮತ್ತೊಬ್ಬ ರೌಡಿ ಸೈಲೆಂಟ್ ಸುನೀಲನಿಗೆ ಕೈ ಮುಗಿಯುವಿರಾ, ಕಾಲಿಗೆ ಬೀಳುವಿರಾ ನಿಮ್ಮ ವಿವೇಚನೆಗೆ ಬಿಟ್ಟಿದ್ದು! ನಿಮ್ಮನ್ನು ಸ್ವಾಗತಿಸಲು ಮತ್ತೊಬ್ಬ ಪಾತಕಿಯನ್ನು ಬಿಜೆಪಿ ಪಕ್ಷ ಸೇರ್ಪಡೆ ಮಾಡಿಕೊಂಡಿದೆ’ ಎಂದು ವಾಗ್ದಾಳಿ ನಡೆಸಿದೆ.

‘ಪ. ಬಂಗಾಳ, ಕೇರಳದ ಆರೆಸೆಸ್ಸ್ ಕಚೇರಿಗಳಲ್ಲಿ ಗನ್ನು, ಗ್ರೆನೇಡ್, ಬಾಂಬುಗಳು ಇರುವುದು ಬೆಳಕಿಗೆ ಬಂದಿತ್ತು. ಕರ್ನಾಟಕದ ಬಿಜೆಪಿ ಕಚೇರಿಯಲ್ಲಿ ಇನ್ನು ಮುಂದೆ ಲಾಂಗು, ಮಚ್ಚು, ಡ್ರ್ಯಾಗರ್‍ಗಳ ಸಂಗ್ರಹ ಇರಲಿದೆ! ರೌಡಿಗಳಿಗೆ ಬಿಜೆಪಿ ಮೇಲೆ ಪ್ರೀತಿಯೋ, ಬಿಜೆಪಿಗೆ ರೌಡಿಗಳ ಮೇಲೆ ಪ್ರೀತಿಯೋ ನಳಿನ್ ಕುಮಾರ್ ಕಟೀಲ್ ಉತ್ತರಿಸಬೇಕು’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಹುಲ್ ಗಾಂಧಿ ಅಗೌರವ ತೋರಿದ್ದಾರೆಂದು ಆರೋಪಿಸಿ ಬಿಜೆಪಿ ಮಾಡಿದ್ದ ಟ್ವೀಟ್ ಗೆ ತಿರುಗೇಟು ನೀಡಿದ ಕಾಂಗ್ರೆಸ್, "‘ಸುಳ್ಳೇ ಬಿಜೆಪಿ ಮನೆದೇವ್ರು’ ಪದೇ ಪದೇ ಸಾಬೀತಾಗುತ್ತಿದೆ. ಗೌರವಿಸುವ ಕಾರಣದಿಂದಲೇ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ತಮ್ಮ ಕಾರಿನಲ್ಲಿ ಕರೆದೊಯ್ದರು. ಮೋದಿ ಬೆಂಗಳೂರಿಗೆ ಬಂದಿದ್ದಾಗ ಭೇಟಿಯಾಗಲು ತೆರಳಿದ್ದ ಬಿಎಸ್‍ವೈ ಅವರ ಮುಖ ನೋಡದೆ ಅವಮಾನಿಸಿ ಹೊರಟು ಹೋದಂತಹ ದುರಹಂಕಾರಕ್ಕೆ ಮೊದಲು ಮದ್ದು ಹುಡುಕಿಕೊಳ್ಳಿ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ರೌಡಿ ಸೈಲೆಂಟ್ ಸುನಿಲ್ ಮತ್ತು ಬಿಜೆಪಿಗೆ ಸಂಬಂಧವಿಲ್ಲ: ಅಶ್ವತ್ಥನಾರಾಯಣ
ಸೈಲೆಂಟ್ ಸುನಿಲ್ ಮತ್ತು ಬಿಜೆಪಿಗೆ ಯಾವುದೆ ಸಂಬಂಧವಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸೈಲೆಂಟ್ ಸುನಿಲ್, ಬಿಜೆಪಿ ಸದಸ್ಯತ್ವ ಪಡೆದಿದ್ದರೆ ಅದನ್ನು ರದ್ದು ಮಾಡಲಾಗುವುದು. ಅವರು ಪಕ್ಷದ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದರೆ, ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಅಶ್ವತ್ಥ ನಾರಾಯಣ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯೊಳಗೆ ಲಿಂಗಾಯತ ವಿರೋಧಿ 'ಸಂತೋಷ' ಕೂಟ: ಕಾಂಗ್ರೆಸ್ ಸರಣಿ ಪೋಸ್ಟ್

ಪ. ಬಂಗಾಳ, ಕೇರಳದ RSS ಕಚೇರಿಗಳಲ್ಲಿ ಗನ್ನು, ಗ್ರೆನೇಡ್, ಬಾಂಬುಗಳು ಇರುವುದು ಬೆಳಕಿಗೆ ಬಂದಿತ್ತು.

ಕರ್ನಾಟಕದ @BJP4Karnataka ಕಚೇರಿಯಲ್ಲಿ ಇನ್ನು ಮುಂದೆ ಲಾಂಗು, ಮಚ್ಚು, ಡ್ರ್ಯಾಗರ್‌ಗಳ ಸಂಗ್ರಹ ಇರಲಿದೆ!

ರೌಡಿಗಳಿಗೆ ಬಿಜೆಪಿ ಮೇಲೆ ಪ್ರೀತಿಯೋ, ಬಿಜೆಪಿಗೆ ರೌಡಿಗಳ ಮೇಲೆ ಪ್ರೀತಿಯೋ @nalinkateel ಉತ್ತರಿಸಬೇಕು.#BJPRowdyMorcha pic.twitter.com/bUigWwEByu

— Karnataka Congress (@INCKarnataka) March 18, 2023

ಫೈಟರ್ ರವಿ ಎದುರು ಕೈಮುಗಿದು ನಿಂತ @narendramodi ಅವರೇ, ಮುಂದಿನ ಬಾರಿ ಬಂದಾಗ ಮತ್ತೊಬ್ಬ ರೌಡಿ ಸೈಲೆಂಟ್ ಸುನೀಲನಿಗೆ ಕೈ ಮುಗಿಯುವಿರಾ, ಕಾಲಿಗೆ ಬೀಳುವಿರಾ ನಿಮ್ಮ ವಿವೇಚನೆಗೆ ಬಿಟ್ಟಿದ್ದು!

ನಿಮ್ಮನ್ನು ಸ್ವಾಗತಿಸಲು ಮತ್ತೊಬ್ಬ ಪಾತಕಿಯನ್ನು @BJP4Karnataka ಪಕ್ಷ ಸೇರ್ಪಡೆ ಮಾಡಿಕೊಂಡಿದೆ.#BJPRowdyMorcha pic.twitter.com/ESLZ7YN9fx

— Karnataka Congress (@INCKarnataka) March 18, 2023

ಕುಖ್ಯಾತ ಪಾತಕಿ ಸೈಲೆಂಟ್ ಸುನೀಲನನ್ನು ಪಕ್ಷಕ್ಕೆ ಅಧಿಕೃತವಾಗಿ ಸೇರಿಸಿಕೊಳ್ಳುವ ಮೂಲಕ#BJPRowdyMorcha ಕ್ಕೆ ಬಹಿರಂಗವಾಗಿ ಚಾಲನೆ ದೊರೆತಿದೆ!

ಯಾವುದೇ ಕಾರಣಕ್ಕೂ ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದಿದ್ದ @BSBommai ಅವರೇ, ನಿಮ್ಮ ನಾಲಿಗೆಯನ್ನು ಈಗ ಯಾವುದರಲ್ಲಿ ತೊಳೆದುಕೊಳ್ಳುವಿರಿ?

ಗೋಮೂತ್ರವೋ, ಗೋಮಯವೋ!? pic.twitter.com/1e2UawSpC7

— Karnataka Congress (@INCKarnataka) March 18, 2023

"ಸುಳ್ಳೇ ಬಿಜೆಪಿ ಮನೆದೇವ್ರು" ಪದೇ ಪದೇ ಸಾಬೀತಾಗುತ್ತಿದೆ.

ಗೌರವಿಸುವ ಕಾರಣದಿಂದಲೇ @RahulGandhi ಅವರು @kharge ಅವರನ್ನು ತಮ್ಮ ಕಾರಿನಲ್ಲಿ ಕರೆದೊಯ್ದರು.@BJP4Karnataka,
ಮೋದಿ ಬೆಂಗಳೂರಿಗೆ ಬಂದಿದ್ದಾಗ ಭೇಟಿಯಾಗಲು ತೆರಳಿದ್ದ @BSYBJP ಅವರ ಮುಖ ನೋಡದೆ ಅವಮಾನಿಸಿ ಹೊರಟು ಹೋದಂತಹ ದೂರಹಂಕಾರಕ್ಕೆ ಮೊದಲು ಮದ್ದು ಹುಡುಕಿಕೊಳ್ಳಿ. https://t.co/SrG9iLKhLT

— Karnataka Congress (@INCKarnataka) March 18, 2023
share
Next Story
X