Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್‌ ನ ಲೋಪಗಳನ್ನು ದುರ್ಬಳಕೆ...

ಆಧಾರ್‌ ನ ಲೋಪಗಳನ್ನು ದುರ್ಬಳಕೆ ಮಾಡುತ್ತಿರುವ ವಂಚಕರು: ವಿಶಿಷ್ಟ ಗುರುತು ಪ್ರಾಧಿಕಾರಕ್ಕೆ ದಿಲ್ಲಿ ಪೊಲೀಸರ ಪತ್ರ

18 March 2023 7:28 PM IST
share
ಆಧಾರ್‌ ನ ಲೋಪಗಳನ್ನು ದುರ್ಬಳಕೆ ಮಾಡುತ್ತಿರುವ ವಂಚಕರು: ವಿಶಿಷ್ಟ ಗುರುತು ಪ್ರಾಧಿಕಾರಕ್ಕೆ ದಿಲ್ಲಿ ಪೊಲೀಸರ ಪತ್ರ

ಹೊಸದಿಲ್ಲಿ: ವಂಚಕರು ದುರುಪಯೋಗಪಡಿಸಿಕೊಳ್ಳುತ್ತಿರುವ ಆಧಾರ್‌ ವ್ಯವಸ್ಥೆಯ ಲೋಪದೋಷಗಳು ಹಾಗೂ ದುರ್ಬಲತೆಗಳ ಕುರಿತು ದಿಲ್ಲಿ ಪೊಲೀಸರು ಬೆಳಕು ಚೆಲ್ಲಿ ವಿಶಿಷ್ಟ ಗುರುತು ಪ್ರಾಧಿಕಾರಕ್ಕೆ ಪತ್ರ ಬರೆದಿದ್ದಾರೆ.

ಬ್ಯಾಂಕ್‌ ವಂಚನೆ ಸಹಿತ ಇತ್ತೀಚಿನ ಕೆಲ ಪ್ರಕರಣಗಳ ಪೊಲೀಸ್‌ ತನಿಖೆಯಿಂದ ಕಂಡುಕೊಂಡಂತೆ ವಿಶಿಷ್ಟ ಗುರುತು ಪ್ರಾಧಿಕಾರವು ಐಡಿಗಳನ್ನು ರಚಿಸುವಾಗ ಫೇಶಿಯಲ್‌ ಬಯೋಮೆಟ್ರಿಕ್ಸ್‌ ಅನ್ನು ಹೊಂದಾಣಿಕೆ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ.

ಆಧಾರ್‌ ಕಾರ್ಡ್‌ಗಳಲ್ಲಿ ಒಂದೇ ವ್ಯಕ್ತಿಯ ಫೋಟೋ ಇದ್ದರೂ ವಿವಿಧ ವ್ಯಕ್ತಿಗಳ ಹೆಸರುಗಳಲ್ಲಿ 12 ಬ್ಯಾಂಕ್‌ ಖಾತೆಗಳನ್ನು ತೆರೆಯಲಾಗಿರುವ ಪ್ರಕರಣದ ಕುರಿತು ದಿಲ್ಲಿ ಪೊಲೀಸರು ಪ್ರಾಧಿಕಾರದ ಗಮನ ಸೆಳೆದಿದ್ದಾರೆ.

ಸರಕಾರಿ ಸಂಸ್ಥೆಗಳಲ್ಲಿ ಮಾತ್ರ ಲಾಗಿನ್‌ ಮಾಡಬಹುದಾದ ಅಧಿಕೃತ ಆಧಾರ್‌ ಏಜಂಟರ ರುಜುವಾತುಗಳನ್ನೂ ಸಹ ವಂಚಕರು ಬಳಸುತ್ತಿದ್ದಾರೆ, ಜಿಪಿಎಸ್‌ ಟ್ಯಾಗಿಂಗ್‌ ಅನ್ನು ಬೈಪಾಸ್‌ ಮಾಡಲು ವಂಚಕರು ನಿಯೋಜಿತ ಸರ್ಕಾರಿ ಸಂಸ್ಥೆಗಳೊಂದಿಗೆ ಸಿಂಕ್‌ ಆಗುವಂತಾಗಲು ತಮ್ಮ ಲ್ಯಾಪ್‌ಟಾಪ್‌ಗಳನ್ನು ಸತತ ಮರುಕಾನ್ಫಿಗರ್‌ ಮಾಡುತ್ತಿರುವ ಅಂಶವನ್ನೂ ಪೊಲೀಸರು ಪ್ರಾಧಿಕಾರದ ಗಮನಕ್ಕೆ ತಂದಿದ್ದಾರೆ.

ಆಧಾರ್‌ ವ್ಯವಸ್ಥೆಗೆ ಸಿಲಿಕಾನ್‌ ಬೆರಳಚ್ಚು ಮತ್ತು ನೈಜ ಬೆರಳಚ್ಚು ನಡುವಿನ ವ್ಯತ್ಯಾಸ ಕಂಡುಹಿಡಿಯಲಾಗುತ್ತಿಲ್ಲ, ಇದರಿಂದಾಗಿ ವಂಚಕರು  ಅಧಿಕೃತ ಏಜಂಟರ ಸಿಲಿಕಾನ್‌ ಬೆರಳಚ್ಚುಗಳನ್ನು ಬಳಸುತ್ತಿದ್ದಾರೆ. ಐರಿಸ್‌ ಸ್ಕ್ಯಾನ್‌ ವಿಚಾರವೂ ಇದೇ ಆಗಿದೆ, ಜನರ ಕಲರ್‌ ಪ್ರಿಂಟ್‌ ಔಟ್‌ ಬಳಸಿ ಈ ಸ್ಕ್ಯಾನ್‌ ಅನ್ನೂ ವಂಚಿಸಬಹುದು ಎಂದು ದಿಲ್ಲಿ ಪೊಲೀಸರು ಹೇಳಿದ್ದಾರೆ.

ಆಧಾರ್‌ ವ್ಯವಸ್ಥೆಯು ಒಬ್ಬ ವ್ಯಕ್ತಿಯ  10 ಬೆರಳುಗಳನ್ನು ಪ್ರತ್ಯೇಕ ಗುರುತು ಎಂದು ಪರಿಗಣಿಸದೆ ಒಂದೇ ಗುರುತು ಎಂದು ಪರಿಗಣಿಸುತ್ತದೆ.ಇದೇ ಕಾರಣದಿಂದ ತಮ್ಮ ಬೆರಳಚ್ಚು ಬದಲಿಸಿದ ವ್ಯಕ್ತಿಗಳಿಗೆ ಹಲವು ಕಾರ್ಡ್‌ಗಳನ್ನು ಒದಗಿಸಲಾಗಿದೆ, ಅಂದರೆ ಉಂಗುರ ಬೆರಳು ಇರಿಸಬೇಕಾದಲ್ಲಿ ತೋರು ಬೆರಳು ಇರಿಸಿದ್ದಾರೆ ಎಂಬುದನ್ನು ಪೊಲೀಸರು ಕಂಡುಕೊಂಡಿದ್ದು ಈ ಮಾಹಿತಿಯನ್ನು ಪ್ರಾಧಿಕಾರಕ್ಕೆ ಒದಗಿಸಲಾಗಿದೆ.

share
Next Story
X