Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರಿಗೆ ನೌಕರರ ಮುಷ್ಕರ ವಾಪಸ್

ಸಾರಿಗೆ ನೌಕರರ ಮುಷ್ಕರ ವಾಪಸ್

19 March 2023 8:57 PM IST
share
ಸಾರಿಗೆ ನೌಕರರ ಮುಷ್ಕರ ವಾಪಸ್

ಬೆಂಗಳೂರು, ಮಾ.19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರ ವಾಪಸ್ ಬಗ್ಗೆ ನೌಕರರು ಮಾ.21ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತಸುಬ್ಬರಾವ್ ತಿಳಿಸಿದ್ದಾರೆ.

ರವಿವಾರ ಅನಂತಸುಬ್ಬರಾವ್ ಸೇರಿದಂತೆ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನೌಕರರ ವೇತನವನ್ನು ಶೇ.15ಕ್ಕೆ ಏರಿಕೆ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದು, ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು. ಇದಕ್ಕೆ ಮುಖ್ಯಮಂತ್ರಿ ಸಕರಾತ್ಮಕವಾಗಿ ಸ್ಪಂದಿಸಿದರು. 

ಹಂತ ಹಂತವಾಗಿ ಬೇಡಿಕೆ ಈಡೇರಿಸುವ ಭರವಸೆ ಸಿಕ್ಕಿದ ಮೇರೆಗೆ ಮುಷ್ಕರ ವಾಪಸ್ ಪಡೆಯಲಾಗಿದೆ. ವೇತನ ಹೆಚ್ಚಳ ಹಾಗೂ ಭತ್ಯೆ ಸೇರಿದಂತೆ ಉಳಿದ ಎಲ್ಲ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆ ಜೊತೆಗೆ ನಿಗಮ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಪ್ರತಿ ಐದು ವರ್ಷಕ್ಕೊಮ್ಮೆ ವೇತನ ಹೆಚ್ಚಳ ಮಾಡಲಾಗುತ್ತದೆ. ಆದರೆ, ಮೂರು ವರ್ಷಗಳಿಂದ ವೇತನ ಹೆಚ್ಚಳ ವಿಷಯವು ನನೆಗುದಿಗೆ ಬಿದ್ದಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಶೇ.15ರಷ್ಟು ವೇತನ ಹೆಚ್ಚಿಸಿ ಬಗೆಹರಿಸಿದ್ದಾರೆ. ಹಿಂದಿನ ಬಾಕಿ ಪಾವತಿ ವಿಚಾರದಲ್ಲಿ ಸಂಘಟನೆಗಳ ಮಾಹಿತಿ ಪಡೆಯುವ ಭರವಸೆ ಸಿಕ್ಕಿದೆ ಎಂದು ಅನಂತಸುಬ್ಬರಾವ್ ಉಲ್ಲೇಖಿಸಿದರು.

ಪ್ರಯಾಣಿಕರ ಆತಂಕ ದೂರ: ‘ನೌಕರರ ಮುಷ್ಕರ ಹಿನ್ನೆಲೆ ಯುಗಾದಿ ಹಬ್ಬದಲ್ಲಿ ಪ್ರಯಾಣಿಕರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇತ್ತು. ಆದರೆ, ಸಾರಿಗೆ ನೌಕರರು ಮುಷ್ಕರ ಹಿಂಪಡೆದಿರುವ ಹಿನ್ನೆಲೆ ಊರುಗಳಿಗೆ ತೆರಳುವ ಸಾರ್ವಜನಿಕ ಪ್ರಯಾಣಿಕರ ಆತಂಕ ದೂರವಾಗಿದೆ.

share
Next Story
X