Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಭಾರತದಲ್ಲಿ ಮಾನವಹಕ್ಕುಗಳ...

"ಭಾರತದಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದೆ"

ಸ್ವರ್ಣಮಂದಿರಕ್ಕೆ ಭೇಟಿ ನೀಡಿದ್ದ ಜಿ20 ಪ್ರತಿನಿಧಿಗಳ ಮುಂದೆ ಎಸ್‌ಜಿಪಿಸಿ ವರಿಷ್ಠನ ‘ದೂರು’

19 March 2023 10:40 PM IST
share
ಭಾರತದಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದೆ
ಸ್ವರ್ಣಮಂದಿರಕ್ಕೆ ಭೇಟಿ ನೀಡಿದ್ದ ಜಿ20 ಪ್ರತಿನಿಧಿಗಳ ಮುಂದೆ ಎಸ್‌ಜಿಪಿಸಿ ವರಿಷ್ಠನ ‘ದೂರು’

ಹೊಸದಿಲ್ಲಿ, ಮಾ.19: ಜಿ20 ಶಿಕ್ಷಣ ಕ್ರಿಯಾ ಸಮಿತಿಯ ಸಭೆಗಳಲ್ಲಿ ಭಾಗವಹಿಸಲು  ಪಂಜಾಬ್ಗೆ ಆಗಮಿಸಿದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳ ಮುಂದೆ ಶಿರೋಮಣಿ ಗುರುದ್ವಾರ ಪ್ರಬಂಧಕ ಸಮಿತಿಯ ವರಿಷ್ಠ ಹರ್ಜಿಂದರ್ ಸಿಂಗ್ ಧಾಮಿ ಅವರು ಭಾರತದಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದೆಯೆಂದು  ಆಪಾದಿಸಿರುವುದಾಗಿ ‘ ದಿ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.

ಜಿ20 ರಾಷ್ಟ್ರಗಳ 55ಕ್ಕೂ ಅಧಿಕ ಪ್ರತಿನಿಧಿಗಳು, ಅತಿಥಿ ರಾಷ್ಟ್ರಗಳು ಹಾಗೂ ಯುನಿಸೆಫ್ನಂತಹ ಆಹ್ವಾನಿತ ಸಂಘಟನೆಗಳು ಮೂರು ದಿನಗಳ  ಸಭೆಗಳಲ್ಲಿ ಪಾಲ್ಗೊಂಡಿದ್ದವು.ಶಿಕ್ಷಣ ಕ್ರಿಯಾ ಸಮಿತಿಯ ಸಭೆಗಳ ಸಂದರ್ಭ ಹಮ್ಮಿಕೊಳ್ಳಲಾಗಿದ್ದ ಪ್ರವಾಸ ಕಾರ್ಯಕ್ರಮದ ಭಾಗವಾಗಿ ಈ ಪ್ರತಿನಿಧಿಗಳನ್ನು ಶುಕ್ರವಾರ ಅಮೃತಸರದ ಸುವರ್ಣ ದೇಗುಲಕ್ಕೆ ಕರೆದೊಯ್ಯಲಾಗಿತ್ತು.

ಈ ಸಂದರ್ಭ  ಸುವರ್ಣ ದೇಗುಲದಲ್ಲಿ ಪ್ರತಿನಿಧಿಗಳ ಗೌರವಾರ್ಥ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಧಾಮಿ ಅವರು ‘‘ ಜಗತ್ತಿನಾದ್ಯಂತ ಮಾನವಹಕ್ಕುಗಳು ದೊಡ್ಡ ಪ್ರಮಾಣದಲ್ಲಿ ಉಲ್ಲಂಘನೆಯಾಗುತ್ತಿರುವ ಬಗ್ಗೆ ವಿನಮ್ರಪೂರ್ವಕವಾಗಿ ನಿಮ್ಮೆಲ್ಲರ ಗಮನಕ್ಕೆ ತರಲು ನಾನು ಬಯಸುತ್ತಿದ್ದೇನೆ ’’ ಎಂದು ಹೇಳಿದರು. ಆಗ ಕೂಡಲೇ ಕೇಂದ್ರ ಸರಕಾರದ ಜಂಟಿ ಕಾರ್ಯದರ್ಶಿ ( ಉನ್ನತ ಶಿಕ್ಷಣ) ನೀತಾ ಪ್ರಸಾದ್ ಹಾಗೂ ಜಿ-20 ಶಿಕ್ಷಣ ಕ್ರಿಯಾ ಸಮಿತಿಯ ವರಿಷ್ಠ ಚೈತನ್ಯಕುಮಾರ್ ಪ್ರಸಾದ್ ಅವರು ಈ ಪ್ರತಿನಿಧಿಗಳು ಧಾರ್ಮಿಕ ಉದ್ದೇಶದಿಂದ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಇತರ ವಿಷಯಗಳನ್ನು  ಪ್ರಸ್ತಾವಿಸುವುದಕ್ಕೆ ಅವಕಾಶವಿಲ್ಲವೆಂದು  ಧಾಮಿ ಅವರಿಗೆ ತಿಳಿಸುವಂತೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅವರಿಗೆ ತಿಳಿಸಿದರು.

ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅವರು ಈ ವಿಷಯವನ್ನು ತಿಳಿಸುವ ಮೊದಲೇ,  ಧಾಮಿ ಅವರು ಇಂಗ್ಲಿಷ್ನಲ್ಲಿ ಮಾತನಾಡುತ್ತಾ,  ಕೆಲವೊಮ್ಮೆ  ಪಂಜಾಬ್ ಹಾಗೂ ಭಾರತದಲ್ಲಿ ಕೂಡಾ ಮಾನವಹಕ್ಕುಗಳ ಉಲ್ಲಂಘನೆಯಾಗಿದೆ’’ ಎಂದು ಹೇಳಿದರು. ‘‘ ಹೀಗಾಗಿ  ವಿಶೇಷವಾಗಿ ಸಿಖ್ಖರನ್ನು ಒಳಗೊಂಡ ಪ್ರಕರಣಗಳಲ್ಲಿ   ಈ ವಾಸ್ತವಾಂಶವನ್ನು ದಯವಿಟ್ಟು ಗಮನಿಸಬೇಕೆಂದು ಶಿರೋಮಣಿ ಗುರುದ್ವಾರ ಪ್ರಬಂಧಕ ಸಮಿತಿಯ ಅಧ್ಯಕ್ಷರಿಗೆ ಅವರು ಮನವಿ ಮಾಡಿದರು.

ಸ್ಥಳದಲ್ಲಿ ಉಪಸ್ಥಿತರಿದ್ದ ಎಸ್ಜಿಪಿಸಿ ಸಹಾಯಕ ಕಾರ್ಯದರ್ಶಿ ಜಸ್ವಿಂದರ್ ಸಿಂಗ್ ಅವರು, ವಿಶೇಷವಾಗಿ ಸಿಖ್ಖ್ ಸಮುದಾಯದ ಪರವಾಗಿ ಧ್ವನಿಯೆತ್ತುವಂತೆ ಪ್ರತಿನಿಧಿಗಳನ್ನು ಆಗ್ರಹಿಸಿದರು.  ಎಸ್ಜಿಪಿಸಿಯು ಜಗತ್ತಿನಾದ್ಯಂತದ ಸಿಖ್ಖರನ್ನು ಪ್ರತಿನಿಧಿಸುತ್ತಿರುವುದರಿಂದ ಅದರ ಅಧ್ಯಕ್ಷರಾಗಿರುವ ಧಾಮಿ ಅವರು  ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿರುವ ವಿಷಯವಾಗಿ ನಿಮಗೆ ಮನವಿ ಮಾಡಿದ್ದಾರೆ ಎಂದು ಜಸ್ವಿಂದರ್ ಹೇಳಿದರು.

 ಆಗ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅವರು ಮಧ್ಯಪ್ರವೇಶಿಸಿ, ಇಂತಹ ವಿಷಯಗಳ ಬಗ್ಗೆ ಚರ್ಚಿಸಲು ಇದು ಸೂಕ್ತ ವೇದಿಕೆಯಲ್ಲ ಎಂದರು. ಆನಂತರ ಜಸ್ವಿಂದರ್ ಸಿಂಗ್ ಅವರು ಸುವರ್ಣ ಮಂದಿರದ ನಾಲ್ಕು  ದ್ವಾರಗಳ ಮಹತ್ವದ ಬಗ್ಗೆ ಪ್ರತಿನಿಧಿಗಳಿಗೆ ವಿವರಿಸಿದರು.

share
Next Story
X