ಯುವ ಕ್ರಾಂತಿ ಸಮಾವೇಶ: ಬೆಳಗಾವಿಗೆ ಆಗಮಿಸಿದ ರಾಹುಲ್ ಗಾಂಧಿ
ಬೆಳಗಾವಿ, ಮಾ.20: ಯುವ ಕ್ರಾಂತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠ ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸಿದ್ದಾರೆ.
ಇಂದು ಮಧ್ಯಾಹ್ನ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಖರ್ಗೆ ಮತ್ತು ರಾಹುಲ್ ರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.
"ಯುವಕ್ರಾಂತಿ" ಸಮಾವೇಶದಲ್ಲಿ ಭಾಗವಹಿಸಲು ರಾಜ್ಯಕ್ಕೆ ಆಗಮಿಸಿದ @INCIndia ಅಧ್ಯಕ್ಷರಾದ @kharge ಹಾಗೂ ನಮ್ಮ ನಾಯಕರಾದ @RahulGandhi ಅವರನ್ನು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದೆ. pic.twitter.com/GFF0zo0DTr
— Siddaramaiah (@siddaramaiah) March 20, 2023