Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಟೋರಿಕ್ಷಾ ಚಾಲಕರ ಮುಷ್ಕರ: ಹಲವರನ್ನು...

ಆಟೋರಿಕ್ಷಾ ಚಾಲಕರ ಮುಷ್ಕರ: ಹಲವರನ್ನು ವಶಕ್ಕೆ ಪಡೆದ ಪೊಲೀಸರು

20 March 2023 5:30 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಆಟೋರಿಕ್ಷಾ ಚಾಲಕರ ಮುಷ್ಕರ: ಹಲವರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು, ಮಾ.20: ‘ಆ್ಯಪ್ ಆಧಾರಿತ ರ್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ರದ್ದುಪಡಿಸಬೇಕೆಂದು ಆಗ್ರಹಿಸಿ ಬೆಂಗಳೂರು ಆಟೋ ರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಕರೆ ನೀಡಿದ್ದ ಆಟೋ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. 

ಮುಷ್ಕರದ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಿಂದ ಆಟೋರಿಕ್ಷಾ ಚಾಲಕರು ಒಂದೆಡೆ ಜಮಾವಣೆಗೊಂಡು ಆಟೋಗಳಿಗೆ ಕಪ್ಪು ಬಾವುಟಗಳನ್ನು ಕಟ್ಟಿಕೊಂಡು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಚಾಲಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. 

ಈ ಸಂದರ್ಭದಲ್ಲಿ ಮಾತನಾಡಿದ ರಿಕ್ಷಾ ಚಾಲಕರ ಯೂನಿಯನ್ ಅಧ್ಯಕ್ಷ ಸಿ.ಎನ್.ಶ್ರೀನಿವಾಸ್, ಆಟೋ ಚಾಲಕ ಸಂಘಟನೆಗಳು ಸರಕಾರಕ್ಕೆ ಈಗಾಗಲೇ 3 ದಿನಗಳ ಗಡುವು ನೀಡಿದ್ದು, ರ್ಯಾಪಿಡೋ ಬೈಕ್ ಟ್ಯಾಕ್ಸಿನಂತಹ ಅನಧಿಕೃತ ಸಂಚಾರಿ ಸೇವೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸುತ್ತಿದ್ದೇವೆ. ಆದರೆ, ಸರಕಾರ ಆನ್‍ಲೈನ್ ಸೇವೆ ಆಧಾರಿತ ಖಾಸಗಿ ಸಂಸ್ಥೆಗಳಿಗೆ ಸಹಾಯವಾಗುವಂತೆ ತಮ್ಮ ಹಠಮಾರಿ ಧೋರಣೆಯನ್ನು ಕೈಬಿಡುತ್ತಿಲ್ಲ. ಇದರಿಂದ ಆಟೊ ಚಾಲಕರು ಸಂಪಾದನೆಯಿಲ್ಲದೆ ಪರದಾಡುವಂತಹ ಸ್ಥಿತಿ ಸೃಷ್ಠಿಯಾಗಿದೆ ಎಂದು ದೂರಿದರು.

ಸರಕಾರ ಕೂಡಲೇ ಆಟೋ ಚಾಲಕರ ಆದಾಯಕ್ಕೆ ಕುತ್ತಾಗಿರುವ ಸಮಸ್ಯೆಗಳನ್ನು ಬಗೆಹರಿಸಬೇಕು. ಅನುಮತಿ ಇಲ್ಲದೆ, ಅನಧಿಕೃತವಾಗಿ ಬೈಕ್ ಟ್ಯಾಕ್ಸಿಗಳು ಸಂಚಾರ ಮಾಡುತ್ತಿದ್ದರೂ, ಸರಕಾರ ಮತ್ತು ಸಾರಿಗೆ ಇಲಾಖೆ ಮಾತ್ರ ಕ್ರಮಕೈಗೊಳ್ಳುತ್ತಿಲ್ಲ. ಪ್ರತಿಬಾರಿ ಪ್ರತಿಭಟನೆ ಮಾಡಿದಾಗಲೂ ಕೇವಲ ಭರವಸೆ ನೀಡುತ್ತಿದ್ದಾರೆ ಹೊರತು ಬೇಡಿಕೆಗಳನ್ನು ಈಡೇರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎಆರ್‍ಡಿಯು ಉಪಾಧ್ಯಕ್ಷ ಆರ್.ನವೀನ್ ಶೆಣೈ ಮಾತನಾಡಿ, ಆಟೋ ಚಾಲಕರು ಸಾರಿಗೆ ಇಲಾಖೆಯ ನಿಯಮಗಳನ್ನು ಅನುಸರಿಸಿ ಕರ್ತವ್ಯ ಮಾಡುತ್ತಿದ್ದೇವೆ. ಪ್ರತಿನಿತ್ಯ ತೆರಿಗೆ ಕಟ್ಟುವವರು ನಾವು ಆದರೆ ಬಿಜೆಪಿ ಸರಕಾರ ನಮ್ಮಂಥ ಆಟೋ ಚಾಲಕರತ್ತ ಗಮನ ಹರಿಸುತ್ತಿಲ್ಲ. ದಿನ ಬಳಕೆ ವಸ್ತುಗಳು, ಮಕ್ಕಳ ಶಿಕ್ಷಣ, ಇತ್ಯಾದಿ ಖರ್ಚುಗಳ ಅಧಿಕವಾಗಿದೆ. ಆದರೂ ಆಟೋ ಚಾಲಕರ ಆದಾಯ ಮಾತ್ರ ಏರಿಕೆಯಾಗಿಲ್ಲ. ಚಾಲಕರು ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ಚಾಲಕರಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ರೂಪಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಗೆ ಕರೆ ನೀಡಿದ್ದ ವಿವಿಧ ಆಟೋ ಸಂಘಟನೆಗಳ ಮುಖಂಡರು ಮತ್ತು ಚಾಲಕರು, ಮಹಿಳಾ ಆಟೋ ಚಾಲಕರು ಒಳಗೊಂಡು ಸುಮಾರು 300 ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಆಟೋ ಸಂಘಟನೆಗಳ ನಿಯೋಗ ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿತು. 

ಪ್ರತಿಭಟನೆಯಲ್ಲಿ ಎಆರ್‍ಡಿಯು ಸಂಘಟನೆ ಮುಖಂಡರಾದ ಜಾವೀದ್ ಅಹ್ಮದ್, ಎನ್.ನಾಗರಾಜ್, ಮೊಹಮ್ಮದ್ ರಿಯಾಜ್, ಎನ್. ನರಸಿಂಹಮೂರ್ತಿ, ಬಸವರಾಜು, ಆದರ್ಶ ಆಟೋ ಮತ್ತು ಟ್ಯಾಕ್ಸಿ ಡ್ರೈವರ್ಸ್ ಯೂನಿಯನ್ ಅಧ್ಯಕ್ಷ ಎಂ.ಮಂಜುನಾಥ್, ಕರವೇ ಆಟೋ ಘಟಕ ಅಧ್ಯಕ್ಷ ಜಿ.ಎಸ್. ಕುಮಾರ್, ಪೀಸ್ ಆಟೋ ಮತ್ತು ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಷನ್ ಅಧ್ಯಕ್ಷ ರಘು ನಾರಾಯಣ ಗೌಡ, ಬೆಂಗಳೂರು ಆಟೋ ಸೇನೆ ಅಧ್ಯಕ್ಷ ಎಂ.ಆರ್ ಚೇತನ್ ಸೇರಿದಂತೆ ಹಲವರು ಇದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X