ನಟ ಚೇತನ್ ಅಹಿಂಸಾ ಬಂಧನ

ಬೆಂಗಳೂರು, ಮಾ.21: ಸಾಮಾಜಿಕ ಜಾಲತಾಣದಲ್ಲಿ ಸಂಘಪರಿವಾರ ವಿರುದ್ಧ ಪೋಸ್ಟ್ ಮಾಡಿದ್ದಾರೆಂಬ ಆರೋಪದ ಮೇರೆಗೆ ನಟ ಚೇತನ್ ಅಹಿಂಸಾ ಅವರನ್ನು ಪೊಲೀಸರು ಬಂಧಿಸಿರುವುದು ವರದಿಯಾಗಿದೆ.
ಇಂದು (ಮಂಗಳವಾರ) ಬೆಳಗ್ಗೆ ಶೇಷಾದ್ರಿಪುರಂ ಪೊಲೀಸರು ನಟ ಚೇತನ್ ರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಂಘಪರಿವಾರ ವಿರುದ್ಧ ಪೋಸ್ಟ್ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಸೋಮವಾರ ರಾತ್ರಿ ಶೇಷಾದ್ರಿಪುರಂ ಠಾಣೆಯಲ್ಲಿ ನಟ ಚೇತನ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.
ಬಂಧನಕ್ಕೆ ಕಾರಣವಾದ ಚೇತನ್ ಅವರ ಫೇಸ್ ಬುಕ್ ಪೋಸ್ಟ್ ನಲ್ಲೇನಿದೆ?
''ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ "ರಾಷ್ಟ್ರ" ಪ್ರಾರಂಭವಾಯಿತು ಎಂದಿರುವ ಸಾವರ್ಕರ್ ಹೇಳಿಕೆ ಸುಳ್ಳು. 1992 ರಲ್ಲಿ ಬಾಬರಿ ಮಸೀದಿ 'ರಾಮನ ಜನ್ಮಭೂಮಿ’ ಎನ್ನುವುದು ಸಹ ಒಂದುಸುಳ್ಳು.ಈಗ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ‘ಕೊಂದರು’ ಎನ್ನುವುದು ಸುಳ್ಳಲಾಗಿದ್ದು, ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ'' ಎಂದು ಚೇತನ್ ತಮ್ಮ ಫೇಸ್ಬುಕ್ ಹಾಗೂ ಟ್ವಿಟ್ಟರ್ ಖಾತೆಗಳನ್ನು ಈ ಬರಹ ಪ್ರಕಟಿಸಿದ್ದರು.
ಇದನ್ನೂ ಓದಿ: ದಾವಣಗೆರೆ: ಚರಂಡಿ ಸ್ವಚ್ಛಗೊಳಿಸುತ್ತಿದ್ದ ಪೌರಕಾರ್ಮಿಕರಿಬ್ಬರು ಮೃತ್ಯು
#Kannada actor @ChetanAhimsa has been arrested by Sheshadripuram police. Based on complaint by Shivkumar alleging he has hurt #Hindu sentiments in his tweet. He has been arrested. In his tweet he had attacked #Hindutva claiming it is built on lies. #Karnataka pic.twitter.com/974d93JYTS
— Imran Khan (@KeypadGuerilla) March 21, 2023
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) March 20, 2023