Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್ಐಎಯಿಂದ ಕಾಶ್ಮೀರಿ ಪತ್ರಕರ್ತ ಇರ್ಫಾನ್...

ಎನ್ಐಎಯಿಂದ ಕಾಶ್ಮೀರಿ ಪತ್ರಕರ್ತ ಇರ್ಫಾನ್ ಮೆಹ್ರಾಜ್‌ ಬಂಧನ

21 March 2023 8:12 PM IST
share
ಎನ್ಐಎಯಿಂದ ಕಾಶ್ಮೀರಿ ಪತ್ರಕರ್ತ ಇರ್ಫಾನ್ ಮೆಹ್ರಾಜ್‌ ಬಂಧನ

ಶ್ರೀನಗರ, ಮಾ. 21: ಭಯೋತ್ಪಾದನೆಗೆ ನಿಧಿ ಪೂರೈಸಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದದಲ್ಲಿ, ಕಾಶ್ಮೀರಿ ಪತ್ರಕರ್ತ ಇರ್ಫಾನ್ ಮೆಹ್ರಾಜ್ ರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯು ಸೋಮವಾರ ಬಂಧಿಸಿದೆ.

ಮೆಹ್ರಾಜ್, ೨೦೨೧ ನವೆಂಬರ್ನಲ್ಲಿ ಕಾನೂನುಬಾಹಿರ (ಚಟುವಟಿಕೆಗಳ) ತಡೆ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಮಾನವಹಕ್ಕುಗಳ ಹೋರಾಟಗಾರ ಖುರ್ರಮ್ ಪರ್ವೇಝ್ರ ನಿಕಟ ಒಡನಾಡಿಯಾಗಿದ್ದಾರೆ ಎಂದು ಹೇಳಿಕೆಯೊಂದರಲ್ಲಿ ಎನ್ಐಎ ತಿಳಿಸಿದೆ. ಮೆಹ್ರಾಜ್ ಮತ್ತು ಪರ್ವೇಝ್ ಇಬ್ಬರೂ ಶ್ರೀನಗರದಲ್ಲಿರುವ ಲಾಭ ಉದ್ದೇಶವಿಲ್ಲದ ಸಂಘಟನೆ ಜಮ್ಮು ಕಾಶ್ಮೀರ ಕೋಯಲೀಶನ್ ಆಫ್ ಸಿವಿಲ್ ಸೊಸೈಟಿ (ಜೆಕೆಸಿಸಿಎಸ್)ಯೊಂದಿಗೆ ನಂಟು ಹೊಂದಿದ್ದಾರೆ ಎಂದು ಅದು ಹೇಳಿದೆ.
‌
‘‘ಕಾಶ್ಮೀರ ಕಣಿವೆಯಲ್ಲಿ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಜೆಕೆಸಿಸಿಎಸ್ ನಿಧಿ ಪೂರೈಸುತ್ತಿತ್ತು ಹಾಗೂ ಮಾನವಹಕ್ಕುಗಳ ರಕ್ಷಣೆಯ ಸೋಗಿನಲ್ಲಿ ಅದು ಕಣಿವೆಯಲ್ಲಿ ಪ್ರತ್ಯೇಕತಾವಾದಿ ಚಳವಳಿಯನ್ನು ನಡೆಸುತ್ತಿತ್ತು’’ ಎಂದು ಎನ್ಐಎ ಆರೋಪಿಸಿದೆ. ‘‘ಭಯೋತ್ಪಾದನೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಕಣಿವೆಯಲ್ಲಿರುವ ಕೆಲವು ಸರಕಾರೇತರ ಸಂಘಟನೆಗಳು (ಎನ್ಜಿಒ), ಟ್ರಸ್ಟ್ಗಳು ಮತ್ತು ಸೊಸೈಟಿಗಳ ಶಾಮೀಲಾತಿಯ ಬಗ್ಗೆ ಈ ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದೆ’’ ಎಂದು ಅದು ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕೆಲವು ಸರಕಾರೇತರ ಸಂಘಟನೆಗಳು ಪರೋಪಕಾರ ಮತ್ತು ಕಲ್ಯಾಣ ಚಟುವಟಿಕೆಗಳ ಸೋಗಿನಲ್ಲಿ ನಿಧಿಗಳನ್ನು ಸಂಗ್ರಹಿಸುತ್ತಿವೆ, ಆದರೆ ಅವುಗಳು ಲಷ್ಕರೆ ತಯ್ಯಬ ಮತ್ತು ಹಿಝ್ಬುಲ್ ಮುಜಾಹಿದೀನ್ ಮುಂತಾದ ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಹೊಂದಿವೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಆರೋಪಿಸಿದೆ.

ಪ್ರಕರಣ ೨೦೨೦ ಅಕ್ಟೋಬರ್ನಲ್ಲಿ ದಾಖಲಾಗಿದ್ದು, ಬಂಧನಕ್ಕೊಳಗಾಗಿರುವ ಮೊದಲ ವ್ಯಕ್ತಿ ಮೆಹ್ರಾಜ್ ಆಗಿದ್ದಾರೆ. ಅವರನ್ನು ದಿಲ್ಲಿಗೆ ಕರೆದುಕೊಂಡು ಹೋಗಲಾಗಿದೆ ಎನ್ನಲಾಗಿದೆ.

ಮೆಹ್ರಾಜ್ ‘ವಂದೇ ಮ್ಯಾಗಝಿನ್’ನ ಸ್ಥಾಪಕ ಸಂಪಾದಕರಾಗಿದ್ದಾರೆ. ಅವರು ಈಗ TwoCircles.net ನ ಹಿರಿಯ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ದ ಇಂಡಿಯನ್ ಎಕ್ಸ್ಪ್ರೆಸ್, ಅಲ್ ಜಝೀರ, ಹಿಮಾಲ್ ಸೌತ್ಏಶ್ಯನ್, ಡಿಡಬ್ಲ್ಯು ಮತ್ತು ಟಿಆರ್ಟಿ ವರ್ಲ್ಡ್ ಮುಂತಾದ ಮಾಧ್ಯಮಗಳಿಗೆ ಲೆಖನಗಳನ್ನು ಬರೆಯುತ್ತಾರೆ ಹಾಗೂ ಕಾರ್ಯಕ್ರಮಗಳನ್ನು ನೀಡುತ್ತಾರೆ.

‘ಪತ್ರಕರ್ತರ ಬಂಧನ, ವಂಚಕರಿಗೆ ಮುಕ್ತ ಅವಕಾಶ’

ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥ ಮೆಹಬೂಬಾ ಮುಫ್ತಿ, ಮೆಹ್ರಾಜ್ ರ ಬಂಧನವನ್ನು ಖಂಡಿಸಿದ್ದಾರೆ. ‘‘ಸತ್ಯವನ್ನು ಹೇಳಿರುವುದಕ್ಕಾಗಿ ಮೆಹ್ರಾಜ್ ರಂಥ ಪತ್ರಕರ್ತರನ್ನು ಬಂಧಿಸಲಾಗುತ್ತಿದೆ, ಆದರೆ ವಂಚಕರಿಗೆ ಕಾಶ್ಮೀರದಲ್ಲಿ ಮುಕ್ತ ಅವಕಾಶವನ್ನು ನೀಡಲಾಗುತ್ತಿದೆ’’ ಎಂದು ಅವರು ಹೇಳಿದ್ದಾರೆ.

ಗುಜರಾತ್ ನಿವಾಸಿಯಾಗಿರುವ ಕಿರಣ್ ಭಾಯಿ ಪಟೇಲ್, ತಾನು ಪ್ರಧಾನಿ ಕಚೇರಿಯ ಹಿರಿಯ ಅಧಿಕಾರಿ ಎಂದು ಹೇಳಿಕೊಂಡು ಝಡ್ ಪ್ಲಸ್ ಭದ್ರತೆಯೊಂದಿಗೆ ಕಾಶ್ಮೀರದಾದ್ಯಂತ ತಿರುಗಾಡಿರುವ ಘಟನೆಯನ್ನು ಮುಫ್ತಿ ಪ್ರಸ್ತಾಪಿಸಿದ್ದಾರೆ. ಅತಿ ಭದ್ರತೆಯ ವಲಯಗಳಿಗೆ ಪ್ರವೇಶಿಸಲು ವಂಚಕ ಕಿರಣ್ ಪಟೇಲ್ಗೆ ಅವಕಾಶ ನೀಡಲಾಗಿತ್ತು. ಆತನನ್ನು ಮಾರ್ಚ್ ೩ರಂದು ಬಂಧಿಸಲಾಗಿದೆ.

‘‘ಯುಎಪಿಎಯಂಥ ಕಠೋರ ಕಾನೂನುಗಳನ್ನು ನಿರಂತರವಾಗಿ ದುರುಪಯೋಗಪಡಿಸಲಾಗುತ್ತಿದೆ. ಕಾನೂನಿನ ಪ್ರಕ್ರಿಯೆಯೇ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುತ್ತಿದೆ’’ ಎಂಬುದಾಗಿ ಮುಫ್ತಿ ಮಂಗಳವಾರ ಹೇಳಿದ್ದಾರೆ.

share
Next Story
X