Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಭಯೋತ್ಪಾದಕ ದಾಳಿ...

ದೇಶದಲ್ಲಿ ಭಯೋತ್ಪಾದಕ ದಾಳಿ ಸಾಧ್ಯತೆಯನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ: ಸೇನಾ ವರಿಷ್ಠ ಮನೋಜ್ ಪಾಂಡೆ

21 March 2023 8:16 PM IST
share
ದೇಶದಲ್ಲಿ ಭಯೋತ್ಪಾದಕ ದಾಳಿ ಸಾಧ್ಯತೆಯನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ: ಸೇನಾ ವರಿಷ್ಠ ಮನೋಜ್ ಪಾಂಡೆ

ಗುರುಗ್ರಾಮ, ಮಾ.21:  ಭವಿಷ್ಯದಲ್ಲಿಯೂ ಭಾರತವು ಭಯೋತ್ಪಾದನೆ ಹಾಗೂ ಆಂತರಿಕ ಭದ್ರತೆ ಕುರಿತ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಮತ್ತು ಅವುಗಳನ್ನು ದೇಶದ ಭದ್ರತಾ ಪಡೆಗಳು ಏಕತೆಯೊಂದಿಗೆ ನಿಭಾಯಿಸಲಿವೆಂದು ಎಂದು ಭೂ ಸೇನಾ ವರಿಷ್ಠ ಜನರಲ್ ಮನೋಜ್ ಪಾಂಡೆ ತಿಳಿಸಿದ್ದಾರೆ.

ಗುರುಗ್ರಾಮದ ಮಾನೆಸರ್ನಲ್ಲಿರುವ ರಾಷ್ಟ್ರೀಯ ಭದ್ರತಾ ದಳ (ಎನ್ಎಸ್ಜಿ)ದ  ನೆಲೆಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪೊಲೀಸ್ ಕಮಾಂಡೊ ಸ್ಪರ್ಧೆಯನ್ನು   ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಆಧುನಿಕ ಯುಗದ ತಂತ್ರಜ್ಞಾನವು ಶತ್ರುವು ಡ್ರೋನ್, ಇಂಟರ್ನೆಟ್, ಸೈಬರ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು  ತನ್ನ ಚಟುವಟಿಕೆಗನ್ನು  ನಡೆಸುವುದಕ್ಕೆ  ಅವಕಾಶ ಮಾಡಿಕೊಟ್ಟಿದೆ ಎಂದವರು  ಹೇಳಿದರು.

‘‘ಭಯೋತ್ಪಾದನೆ ಹಾಗೂ ಆಂತರಿಕ ಭದ್ರತಾ ಪರಿಸ್ಥಿತಿಯು ನಮ್ಮ ದೇಶದ ಮೇಲೆ ವಿವಿಧ ರೂಪದಲ್ಲಿ ಪರಿಣಾಮವನ್ನು ಬೀರುತ್ತದೆ.  ಈ ಸವಾಲುಗಳನ್ನು ನಾವು ಏಕತೆಯೊಂದಿಗೆ ಎದುರಿಸುತ್ತಿದ್ದೇವೆ. ಇದರಿಂದಾಗಿ ವಿವಿಧ ರಾಜ್ಯಗಳಲ್ಲಿ ಭದ್ರತಾ ಪರಿಸ್ಥಿತಿಯ ಸುಧಾರಣೆಯಾಗುತ್ತದೆ. ಭವಿಷ್ಯದಲ್ಲಿಯೂ ಈ ಸವಾಲುಗಳು ಮುಂದುವರಿಯಲಿವೆ. ದೀರ್ಘ ಸಮಯದಿಂದಲೂ ಈ ಸವಾಲುಗಳು ನಮ್ಮ ಮುಂದಿದ್ದು, ಅವುಗಳಲ್ಲಿ ಕೆಲವು ಪರೋಕ್ಷವಾಗಿ ಹಾಗೂ ಇನ್ನು ಕೆಲವು ಗುಪ್ತವಾಗಿ ನಮಗೆ ಎದುರಾಗುತ್ತಿವೆ ಎಂದು ಮನೋಜ್ ಪಾಂಡೆ ತಿಳಿಸಿದರು.

ದೇಶದಲ್ಲಿ ಭಯೋತ್ಪಾದಕ ದಾಳಿ ನಡೆಯುವ  ಸಾಧ್ಯತೆಯನ್ನು  ನಿರ್ಲಕ್ಷಿಸುವ ಹಾಗಿಲ್ಲವೆಂದು ಹೇಳಿದ ಜ.ಪಾಂಡೆ, ಇಂತಹ ಹಲವು ಸಂಚುಗಳನ್ನು ವಿಫಲಗೊಳಿಸಿರುವುದಕ್ಕಾಗಿ  ಹಾಗೂ ಜಾಲಗಳನ್ನು ಮಟ್ಟಹಾಕಿರುವುದಕ್ಕಾಗಿ  ಭದ್ರತಾಪಡೆಗಳು ಹಾಗೂ ಬೇಹುಗಾರಿಕಾ ಸಂಸ್ಥೆಗಳನ್ನು ಅವರು ಮುಕ್ತಕಂಠದಿಂದ ಶ್ಲಾಘಿಸಿದರು.

ಬಾಂಬ್ ಪತ್ತೆ ಹಾಗೂ ವಿಲೇವಾರಿ, ಹೊಂಚುದಾಳಿ,ಶತ್ರು ಡ್ರೋನ್ಗಳನ್ನು ಮಟ್ಟಹಾಕಲು  ವಿಶೇಷ ನೈಪುಣ್ಯತೆಯನ್ನು  ಅಭಿವೃದ್ಧಿಪಡಿಸಿರುವುದಕ್ಕಾಗಿ ಹಾಗೂ ಇತರ ಭದ್ರತಾಪಡೆಗಳ ಜೊತೆ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕಾಗಿ ಅವರು ಎನ್ಎಸ್ಜಿಯನ್ನು ಅಭಿನಂದಿಸಿದರು.

ಮಾರ್ಚ್ 31ರವರೆಗೆ ನಡೆಯಲಿರುವ  ಅಖಿಲ ಭಾರತ ಕಮಾಂಡೊ ಪೊಲೀಸ್ ಸ್ಪರ್ಧೆಯಲ್ಲಿ ಕೇಂದ್ರ  ಸಶಸ್ತ್ರ ಪೊಲೀಸ್ ಪಡೆಗಳು ಹಾಗೂ ರಾಜ್ಯ ಪೊಲೀಸ್ ಸಂಘಟನೆಗಳಿಗೆ  ಸೇರಿದ ಒಟ್ಟು 24 ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿವೆ.

share
Next Story
X