Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ ಐದು ವರ್ಷಗಳಲ್ಲಿ 1.5 ಲಕ್ಷ ಕೋಟಿ...

ಕಳೆದ ಐದು ವರ್ಷಗಳಲ್ಲಿ 1.5 ಲಕ್ಷ ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸಿದ ಕೇಂದ್ರ ಸಾರ್ವಜನಿಕ ಕ್ಷೇತ್ರದ ಉದ್ಯಮಗಳು

23 March 2023 5:09 PM IST
share
ಕಳೆದ ಐದು ವರ್ಷಗಳಲ್ಲಿ 1.5 ಲಕ್ಷ ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸಿದ ಕೇಂದ್ರ ಸಾರ್ವಜನಿಕ ಕ್ಷೇತ್ರದ ಉದ್ಯಮಗಳು

ಹೊಸದಿಲ್ಲಿ: ವಿತ್ತ ಸಚಿವಾಲಯವು ಒದಗಿಸಿರುವ ಮಾಹಿತಿಯಂತೆ ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸಾರ್ವಜನಿಕ ಕ್ಷೇತ್ರದ ಉದ್ಯಮ (ಸಿಪಿಎಸ್ಇ)ಗಳು 1.5 ಲಕ್ಷ ಕೋಟಿ ರೂ.ಗೂ ಅಧಿಕ ನಷ್ಟವನ್ನು ಅನುಭವಿಸಿವೆ.

ಸಹಾಯಕ ವಿತ್ತಸಚಿವ ಭಾಗವತ ಕರಾಡ್ ಅವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಉತ್ತರದಲ್ಲಿ, 2021-22ರ ಅಂತ್ಯದಲ್ಲಿ 248 ಸಿಪಿಎಸ್ಇಗಳು ಕಾರ್ಯ ನಿರ್ವಹಿಸುತ್ತಿದ್ದವು ಮತ್ತು 2017-18ರಲ್ಲಿ 72 ಸಿಪಿಎಸ್ಇಗಳು ನಷ್ಟದಲ್ಲಿದ್ದವು. ಇಂತಹ ಸಿಪಿಎಸ್ಇಗಳ ಸಂಖ್ಯೆ 2018-19ರಲ್ಲಿ 69ಕ್ಕೆ ತಗ್ಗಿತ್ತಾದರೂ,2019-20ರಲ್ಲಿ ಮತ್ತೆ 84ಕ್ಕೆ ಏರಿಕೆಯಾಗಿತ್ತು ಎಂದು ತಿಳಿಸಿದರು.

ಆಗಿನಿಂದ ನಷ್ಟದಲ್ಲಿರುವ ಸಿಪಿಎಸ್ಇಗಳ ಸಂಖ್ಯೆ ತಗ್ಗಿದೆ. 2020-21ರಲ್ಲಿ 76ಕ್ಕೆ ಮತ್ತು 2021-22ರಲ್ಲಿ 59ಕ್ಕೆ ಇಳಿಕೆಯಾಗಿದೆ. ಈ ಕಂಪನಿಗಳು 2019-20ರಲ್ಲಿ 44,239 ಕೋಟಿ ರೂ.ಗಳ ನಷ್ಟವನ್ನು ಅನುಭವಿಸಿದ್ದವಾದರೂ ಕಳೆದ ವರ್ಷ ಅದು 15,586 ಕೋ.ರೂ.ಗಳಿಗೆ ತಗ್ಗಿದೆ.

2017-18ರಿಂದ 2021-22ರವರೆಗಿನ ಐದು ವರ್ಷಗಳಲ್ಲಿ ಸಿಪಿಎಸ್ಇಗಳು ಒಟ್ಟು 1.54 ಲಕ್ಷ ಕೋಟಿ ರೂ.ಗಳ ನಷ್ಟವನ್ನು ಅನುಭವಿಸಿವೆ ಎನ್ನುವುದನ್ನು ಸಚಿವರು ಒದಗಿಸಿರುವ ಮಾಹಿತಿಯು ತೋರಿಸಿದೆ.

ಸಿಪಿಎಸ್ಇಗಳ ಚೇತರಿಕೆಗಾಗಿ ಆಯಾ ಆಡಳಿತ ಮಂಡಳಿಗಳು ಮತ್ತು ಆಡಳಿತಾತ್ಮಕ ಸಚಿವಾಲಯಗಳು/ಇಲಾಖೆಗಳು ಉದ್ಯಮ ನಿರ್ದಿಷ್ಟ ಕ್ರಮಗಳನ್ನು ಕೈಗೊಂಡಿವೆ. ಉದ್ಯಮ ಪುನರ್ರಚನೆ,ಜಂಟಿ ಉದ್ಯಮಗಳ ಸ್ಥಾಪನೆ,ಆಧುನೀಕರಣ ಮತ್ತು ಸುಧಾರಿತ ಮಾರಾಟ ಕಾರ್ಯತಂತ್ರ ಇತ್ಯಾದಿಗಳು ಈ ಕ್ರಮಗಳಲ್ಲಿ ಸೇರಿವೆ. ಸರಕಾರವು ಫೆಬ್ರವರಿ 2021ರಲ್ಲಿ ನೂತನ ಸಾರ್ವಜನಿಕ ಕ್ಷೇತ್ರ ಉದ್ಯಮ (ಪಿಎಸ್ಇ) ನೀತಿಯನ್ನೂ ಅಧಿಸೂಚಿಸಿದ್ದು,ಅದರ ಪ್ರಕಾರ ಕೆಲವು ಮಾನದಂಡಗಳನ್ನು ಆಧರಿಸಿ ಸಿಪಿಎಸ್ಇಗಳನ್ನು ವ್ಯೂಹಾತ್ಮಕ ಮತ್ತು ವ್ಯೂಹಾತ್ಮಕವಲ್ಲದ ಉದ್ಯಮಗಳು ಎಂದು ವರ್ಗೀಕರಿಸಲಾಗಿದೆ. ಹೀಗಾಗಿ ಸಿಪಿಎಸ್ಇಗಳನ್ನು ನೂತನ ಪಿಎಸ್ಇ ನೀತಿಯ ನಿಬಂಧನೆಗಳ ಪ್ರಕಾರ ಮಾತ್ರ ನಿರ್ವಹಿಸಬೇಕಿದೆ ಎಂದು ಕರಾಡ್ ತಿಳಿಸಿದರು.

ನೂತನ ಪಿಎಸ್ಇ ನೀತಿಯಂತೆ ಸಿಪಿಎಸ್ಇಗಳು ಅಣುಶಕ್ತಿ, ಬಾಹ್ಯಾಕಾಶ ಮತ್ತು ರಕ್ಷಣೆ; ಸಾರಿಗೆ ಮತ್ತು ದೂರಸಂಪರ್ಕ; ವಿದ್ಯುತ್,  ಪೆಟ್ರೋಲಿಯಂ, ಕಲ್ಲಿದ್ದಲು ಮತ್ತು ಇತರ ಖನಿಜಗಳು; ಬ್ಯಾಂಕಿಂಗ್, ವಿಮೆ ಮತ್ತು ಹಣಕಾಸು ಸೇವೆಗಳು ಈ ನಾಲ್ಕು ವ್ಯೆಹಾತ್ಮಕ ಕ್ಷೇತ್ರಗಳಲ್ಲಿ ಕನಿಷ್ಠ ಉಪಸ್ಥಿತಿಯನ್ನು ಹೊಂದಿರಲಿವೆ. ಇತರ ಕ್ಷೇತ್ರಗಳಲ್ಲಿಯ ಸಿಪಿಎಸ್ಇಗಳನ್ನು ಖಾಸಗೀಕರಣ, ವಿಲೀನಗೊಳಿಸಲಾಗುತ್ತದೆ ಅಥವಾ ಅವುಗಳನ್ನು ಮುಚ್ಚುವುದನ್ನು ಪರಿಗಣಿಸಲಾಗುತ್ತದೆ.

share
Next Story
X