Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎ.6ಕ್ಕೆ ನಂದಳಿಕೆ ಅಯನೋತ್ಸವ ಸಿರಿ...

ಎ.6ಕ್ಕೆ ನಂದಳಿಕೆ ಅಯನೋತ್ಸವ ಸಿರಿ ಜಾತ್ರಾ ಮಹೋತ್ಸವ

24 March 2023 9:08 PM IST
share
ಎ.6ಕ್ಕೆ ನಂದಳಿಕೆ ಅಯನೋತ್ಸವ ಸಿರಿ ಜಾತ್ರಾ ಮಹೋತ್ಸವ

ಉಡುಪಿ, ಮಾ.24: ಕಾರ್ಕಳ ತಾಲೂಕು ಇತಿಹಾಸ ಪ್ರಸಿದ್ಧ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರತಿ ವರ್ಷ ನಡೆಯುವ ನಂದಳಿಕೆ ಅಯನೋತ್ಸವ ಸಿರಿಜಾತ್ರೆ ಈ ಬಾರಿ ಎ.6 ಗುರುವಾರದಂದು ನಡೆಯಲಿದೆ ಎಂದು ನಂದಳಿಕೆ ಚಾವಡಿ ಅರಮನೆಯ ಸುಹಾಸ್ ಹೆಗ್ಡೆ ಇಂದು ಇಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತುಳುನಾಡಿನ ಪ್ರಸಿದ್ಧ ಸಿರಿ ಜಾತ್ರೆಗಳಲ್ಲಿ ಒಂದಾದ ನಂದಳಿಕೆ ಸಿರಿಜಾತ್ರೆ ಯಲ್ಲಿ ಜಿಲ್ಲೆ ಹಾಗೂ ಹೊರಜಿಲ್ಲೆಗಳಿಂದ ಲಕ್ಷಾಂತರ ಮಂದಿ ಭಕ್ತರು ಭಾಗವಹಿಸಲಿದ್ದಾರೆ. ಈ ಬಾರಿಯೂ ಬರುವ ಭಕ್ತರಿಗೆ ಸಕಲ ವ್ಯವಸ್ಥೆಯನ್ನು ಕಲ್ಪಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ ಎಂದವರು ತಿಳಿಸಿದರು.

ಕನ್ನಡ ಸಾಹಿತ್ಯದಲ್ಲಿ ನವೋದಯದ ಮುಂಗೋಳಿ ಎಂದೇ ಕರೆಸಿಕೊಳ್ಳುವ   ಕವಿ ಮುದ್ದಣ ಜನಿಸಿದ ನಂದಳಿಕೆ, ಮಹಾಲಿಂಗೇಶ್ವರನ ಸನ್ನಿಧಿಯಲ್ಲಿರುವ  ಅಬ್ಬಗ-ದಾರಗ ಸಿರಿಜಾತ್ರೆಯ ಮೂಲಕ ಧಾರ್ಮಿಕ ಕ್ಷೇತ್ರದಲ್ಲೂ ಪ್ರಸಿದ್ಧಿ ಯನ್ನು ಪಡೆದಿದೆ. ನಂದಳಿಕೆ ಸಿರಿ ಜಾತ್ರೆಯ ಪ್ರಚಾರ ಫಲಕಗಳು ಪ್ರತಿವರ್ಷ ವಿಭಿನ್ನತೆ ಯೊಂದಿಗೆ ಜಿಲ್ಲೆಯಾ ದ್ಯಂತ ಜನಮನವನ್ನು ಸೆಳೆಯುತಿದ್ದು, ಪ್ರತಿ ಸಲದಂತೆ ಈ ಬಾರಿಯೂ ವಿಭಿನ್ನವಾದ ಪ್ರಚಾರ ಫಲಕವನ್ನು ಜಿಲ್ಲೆಯಾದ್ಯಂತ ಅಳವಡಿಸಲಾಗುತ್ತದೆ ಎಂದು ಸುಹಾಸ್ ಹೆಗ್ಡೆ ತಿಳಿಸಿದರು.

ಈ ಬಾರಿ ಪರಿಸರ ಸ್ನೇಹಿ ರಟ್ಟಿನ ಬಾಕ್ಸ್ ಮೇಲೆ ಮಣ್ಣಿನ ಪಾತ್ರೆಯಲ್ಲಿ ನೀರು ತುಂಬಿಟ್ಟು ಹಕ್ಕಿಗಳಿಗೆ ನೀರುಣಿಸುವ ಮೂಲಕ ಸಿರಿಜಾತ್ರೆಯ ಪ್ರಚಾರ ದೊಂದಿಗೆ ಪರಿಸರದ ಹಕ್ಕಿಗಳ ಬಾಯಾರಿಕೆ ತಣಿಸುವ ಪ್ರಯತ್ನ ಮಾಡಲಾ ಗುತ್ತಿದೆ ಎಂದವರು ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿದ ಸುಬಾಸ್ ಹೆಗ್ಡೆ, ಸಿದ್ಧಾಪುರದಲ್ಲಿ ತಯಾರಿಸಿದ ಮಣ್ಣಿನ ಚಿಕ್ಕ ಪಾತ್ರೆ ಹಾಗೂ ಪೇಪರ್ ರಟ್ಟಿನ ಮೇಲೆ ಮುದ್ರಿಸಿದ ನಂದಳಿಕೆ ಸಿರಿ ಜಾತ್ರೆಯ ಪ್ರಚಾರಕ್ಕೆ ಸುಮಾರು 150ರೂ. ವೆಚ್ಚವಾಗಿದೆ. ಈ ಬಾರಿ 1500ರಷ್ಟು ಪ್ರಚಾರ ಫಲಕವನ್ನು ಸಿದ್ಧಪಡಿಸಿದ್ದೇವೆ ಎಂದರು.

ಈ ಹಿಂದಿನಂತೆ ಇವುಗಳನ್ನು ರಸ್ತೆಯ ಪಕ್ಕದಲ್ಲಿ ಇಡದೇ, ಅಲ್ಲಲ್ಲಿ ರಸ್ತೆ ಪಕ್ಕ ಮನೆ ಹಾಗೂ ಅಂಗಡಿಗಳ ಮುಂಭಾಗದಲ್ಲಿ ಇದನ್ನು ಅಳವಡಿಸಿ, ಇದರ ಸುಪರ್ದಿಯನ್ನು ಆಯಾ ಮನೆ ಅಥವಾ ಅಂಗಡಿಯವರಿಗೆ ವಹಿಸಲಾ ಗುವುದು. ಅವರು ಪ್ರತಿದಿನ ಪಕ್ಷಿಗಳಿಗಾಗಿ ಮಣ್ಣಿನ ಪಾತ್ರೆಗೆ ನೀರು ಹಾಕಬೇಕಾಗುತ್ತದೆ ಎಂದರು.

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಸಿರಿ ಜಾತ್ರೆ ನಮ್ಮ ಉದ್ದೇಶವಾಗಿದೆ. ಉಡುಪಿ, ದಕ್ಷಿಣಕನ್ನಡವಲ್ಲದೇ ಆಸುಪಾಸಿನ ನಾಲ್ಕೈದು ಜಿಲ್ಲೆಗಳಿಂದ ನಂದಳಿಕೆ ಸಿರಿಜಾತ್ರೆಗೆ ಭಕ್ತರು ಆಗಮಿಸಲಿದ್ದಾರೆ. 1500ರಷ್ಟು ಸ್ವಯಂ ಸೇವಕರು ಜಾತ್ರೆಯ ವೇಳೆ ಕಾರ್ಯನಿರ್ವಹಿಸಲಿದ್ದಾರೆ ಎಂದರು. 

share
Next Story
X