Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ಎ.1ಕ್ಕೆ ಅಂತರ್ಗತ ಶಿಕ್ಷಣ,...

ಮಣಿಪಾಲ: ಎ.1ಕ್ಕೆ ಅಂತರ್ಗತ ಶಿಕ್ಷಣ, ಕೌಶಲ ತರಬೇತಿ ಕಾರ್ಯಾಗಾರ

24 March 2023 9:10 PM IST
share
ಮಣಿಪಾಲ: ಎ.1ಕ್ಕೆ ಅಂತರ್ಗತ ಶಿಕ್ಷಣ, ಕೌಶಲ ತರಬೇತಿ ಕಾರ್ಯಾಗಾರ

ಉಡುಪಿ, ಮಾ.24: ಜಿಲ್ಲೆಯಲ್ಲಿ ವಿಶೇಷ ಮಕ್ಕಳಿಗೆ ಕಲಿಸುತ್ತಿರುವ ವಿಶೇಷ ಶಿಕ್ಷಕರು, ವಿಶೇಷ ಮಕ್ಕಳ ಹೆತ್ತವರು ಹಾಗೂ ಪಾಲಕರಿಗಾಗಿ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ‘ಅಂತರ್ಗತ ಶಿಕ್ಷಣ ಹಾಗೂ ಕೌಶಲ ತರಬೇತಿ ಕಾರ್ಯಾಗಾರ’ ಎ.1ರಂದು ಮಣಿಪಾಲ ವಿವಿಯ ಇಂಟರಾಕ್ಟ್ ಹಾಲ್‌ನಲ್ಲಿ ನಡೆಯಲಿದೆ.

ಮೈ ಟ್ರೂ ಸ್ಕಿಲ್ (ಎಂಟಿಎಸ್) ಎಂಬ ಸಂಸ್ಥೆಯು ಮಣಿಪಾಲ ಮಾಹೆಯ ವಿಶೇಷ ಚೇತನ ಮಕ್ಕಳ ಪುನಶ್ಚೇತನ ಹಾಗೂ ತರಬೇತಿ ಕೇಂದ್ರ ‘ಆಸರೆ’ಯ ಸಹ ಯೋಗದೊಂದಿಗೆ ಈ ಕಾರ್ಯಾಗಾರವನ್ನು ಆಯೋಜಿಸುತ್ತಿದೆ ಎಂದು ಎಂಟಿಎಸ್ ಸಂಸ್ಥೆಯ ಸಿಓಓ ಸ್ಮಿತಾ ಪಾಟೀಲ್ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಾಗಾರದಲ್ಲಿ ಸುಮಾರು 100ರಿಂದ 120 ಮಂದಿ ವಿಶೇಷ ಮಕ್ಕಳ ಹೆತ್ತವರು,ಶಿಕ್ಷಕರು ಹಾಗೂ ಪಾಲಕರು ಭಾಗವಹಿಸುವ ನಿರೀಕ್ಷೆ ಇದೆ. ಇದಕ್ಕೆ ಜಿಲ್ಲಾ ವಿಕಲಚೇತನರ ಅಭಿವೃದ್ಧಿ ಇಲಾಖೆಯು ಸಂಪೂರ್ಣ ಸಹಕಾರವನ್ನು ನೀಡುತ್ತಿದೆ ಎಂದವರು ಹೇಳಿದರು.

ಕಾರ್ಯಾಗಾರದಲ್ಲಿ ಅಮೆರಿಕದ ನಿವಾಸಿಯಾಗಿರುವ, ತೆಲಂಗಾಣದಲ್ಲಿ ಮಾರ್ಗಿಕಾ ಎಂಬ ಸರಕಾರೇತರ ಸಂಸ್ಥೆಯನ್ನು ಸ್ಥಾಪಿಸಿ ಅದರ ಮೂಲಕ ವಿಶೇಷ ಚೇತನ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಡಾ.ನೀನಾ ರಾವ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ಸ್ಮಿತಾ ಪಾಟೀಲ್ ವಿವರಿಸಿದರು.

ಇದೇ ಸಂದರ್ಭದಲ್ಲಿ ಡಾ.ನೀನಾ ಅವರು ಸಂಕಲಿಸಿರುವ ವಿಶೇಷ ಚೇತನ ಮಕ್ಕಳೇ ರಚಿಸಿದ ಕಥೆ, ಕವನ ಹಾಗೂ ಚಿತ್ರಗಳನ್ನು ಒಳಗೊಂಡ ‘ಮೈಂಡ್‌ಸ್ಕೇಪ್’ ಎಂಬ ಕೃತಿಯನ್ನು ಬಿಡುಗಡೆಗೊಳಿಸಲಾಗುವುದು. ಕಾರ್ಯಕ್ರಮದಲ್ಲಿ ಮಣಪಾಲ ಮಾಹೆಯ ಡಾ.ಪದ್ಮರಾಜ್ ಹೆಗ್ಡೆ ಹಾಗೂ  ವಿಕಲಚೇತನರ ಅಧಿಕಾರಿ ರತ್ನಮ್ಮ ಭಾಗವಹಿಸಲಿದ್ದಾರೆ ಎಂದರು.

ತಮ್ಮ ಎಂಟಿಎಸ್ ಸಂಸ್ಥೆಯು ಕಳೆದ ಕೆಲವು ವರ್ಷಗಳಿಂದ ಕರಾವಳಿಯ ಶಾಲಾ ಮಕ್ಕಳಿಗೆ ಶಾಲೆಯಲ್ಲಿ ಜೀವನ ಕೌಶಲಗಳ ಬಗ್ಗೆ ತರಬೇತಿ ನೀಡುತ್ತಿದೆ. 1ರಿಂದ 12ನೇ ತರಗತಿವರೆಗಿನ ಮಕ್ಕಳಿಗೆ ಮೌಲ್ಯಾಧಾರಿತ ಪಾಠವನ್ನು ಬೋಧಿಸುತ್ತಿದೆ.ಅಲ್ಲದೇ ಎಂಟಿಎಸ್ ಸಂಸ್ಥೆ ಪೂರಕ ಶಿಕ್ಷಣಕ್ಕೆ ಬೇಕಾದ ಪಠ್ಯಕ್ರಮ ತಯಾರಿ ಹಾಗೂ ತರಬೇತಿ ಕಾರ್ಯಕ್ರಮದಲ್ಲಿ ನಿರತವಾಗಿದೆ ಎಂದು ಸ್ಮಿತಾ ಪಾಟೀಲ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಹೆಯ ಆಸರೆ ಸಂಸ್ಥೆಯ ಸ್ಥಾಪಕ ಜೈವಿಠಲ್, ಎಂಟಿಎಸ್ ಸಂಸ್ಥೆಯ ಸ್ಥಾಪಕಿ ಸುಪರ್ಣ ಶೆಟ್ಟಿ ಮಣಿಪಾಲ ಉಪಸ್ಥಿತರಿದ್ದರು.

share
Next Story
X