Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಟ್ಕಳದಲ್ಲಿ 'ಮುಸ್ಲಿಮ್ ಅಭ್ಯರ್ಥಿ'...

ಭಟ್ಕಳದಲ್ಲಿ 'ಮುಸ್ಲಿಮ್ ಅಭ್ಯರ್ಥಿ' ನಿರ್ಣಯಕ್ಕೆ ಸೋಲು: ಸ್ಪಷ್ಟೀಕರಣ ನೀಡಿದ ತಂಝೀಮ್

24 March 2023 9:44 PM IST
share
ಭಟ್ಕಳದಲ್ಲಿ ಮುಸ್ಲಿಮ್ ಅಭ್ಯರ್ಥಿ ನಿರ್ಣಯಕ್ಕೆ ಸೋಲು: ಸ್ಪಷ್ಟೀಕರಣ ನೀಡಿದ ತಂಝೀಮ್

 ಭಟ್ಕಳ, ಮಾ.24: ತಂಝೀಮ್ ನೇತೃತ್ವದಲ್ಲಿ ಮಾ.20ರಂದು ನಡೆದ ಸರ್ವ ಜಮಾಅತ್ ಪ್ರತಿನಿಧಿಗಳ ಸಭೆಯಲ್ಲಿ ಭಟ್ಕಳದಲ್ಲಿ ತಂಝೀಮ್ ಸಂಸ್ಥೆಯು ಮುಸ್ಲಿಮ್ ಅಭ್ಯರ್ಥಿಯನ್ನು ಚುನಾವಣಾ ಕಣಕ್ಕಿಳಿಸುವುದರ ವಿರುದ್ಧ ನಿರ್ಣಯವೇ ಹೊರತು ಮುಸ್ಲಿಮ್ ಅಭ್ಯರ್ಥಿಯನ್ನು ಬೆಂಬಲಿಸುವುದರ ವಿರುದ್ಧ ಅಲ್ಲ ಎಂದು ತಂಝೀಮ್ ರಾಜಕೀಯ ವ್ಯವಹಾರಗಳ ಸಮಿತಿ ಸಂಚಾಲಕ ನ್ಯಾಯವಾದಿ ಇಮ್ರಾನ್ ಲಂಕಾ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ತಂಝೀಮ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಂಝೀಮ್ ಸಂಸ್ಥೆಯ ರಾಜಕೀಯ ವ್ಯವಹಾರಗಳ ಸಮಿತಿ ಈ ಬಾರಿಯ ಚುನಾವಣೆಯಲ್ಲಿ ಮುಸ್ಲಿಮ್ ಅಭ್ಯರ್ಥಿಯನ್ನು ತಂಝೀಮ್ ವತಿಯಿಂದಲೇ ಕಣಕ್ಕಿಳಿಸಬಹುದೇ ಎಂದು ಸರ್ವ ಜಮಾಅತ್ ಸಮಿತಿಗೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಆ ಪ್ರಸ್ತಾವನೆಯ ಕುರಿತು ಚರ್ಚಿಸಲು ಕರೆದ ಸಭೆಯಲ್ಲಿ ತಂಝೀಮ್ ಸಂಸ್ಥೆಯಿಂದ ಯಾವುದೇ ಮುಸ್ಲಿಮ್ ಅಭ್ಯರ್ಥಿಯನ್ನು ನಿಲ್ಲಿಸಕೂಡದು ಎಂದು ನಿರ್ಣಯಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಮುಸ್ಲಿಮ್ ಅಭ್ಯರ್ಥಿಗೆ ಬೆಂಬಲ ನೀಡುವಲ್ಲಿ ತಂಝೀಮ್ ವಿರೋಧ ವ್ಯಕ್ತಪಡಿಸುತ್ತಿದೆ ಎಂಬಂತೆ ಬಿಂಬಿಸಲಾಗುತ್ತಿದೆ. ಇದು ಸರಿಯಲ್ಲ ಎಂದ ಲಂಕಾ, ಚುನಾವಣೆ ಘೋಷಣೆಯಾಗಿ ಕೊನೆಯ ದಿನದವರೆಗೂ ನಾವು ಯಾರನ್ನು ಬೆಂಬಲಿಸಬೇಕು, ಬಿಡಬೇಕು ಎಂಬ ನಿರ್ಣಯ ತೆಗೆದುಕೊಳ್ಳುತ್ತೇವೆ. ಜಾತ್ಯತೀತ ಅಭ್ಯರ್ಥಿ ಮುಸ್ಲಿಮ್ ಅಥವಾ ಹಿಂದೂ ಆಗಿರಬಹುದು, ಯಾರನ್ನೂ ಬೇಕಾದರೂ ನಾವು ಬೆಂಬಲಿಸಬಹುದು ಎಂದರು.

ಈ ಸಂದರ್ಭದಲ್ಲಿ ರಾಜಕೀಯ ವ್ಯವಹಾರಗಳ ಸಮಿತಿ ಉಪಸಂಚಾಲಕ ಅಝೀಝುರ್ರಹ್ಮಾನ್ ರುಕ್ನುದ್ದೀನ್ ಇದ್ದರು.

ಇನಾಯತುಲ್ಲಾ ಶಾಬಂದ್ರಿಗೆ ಅವಕಾಶ: ಮುಸ್ಲಿಮ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ತಂಝೀಮ್ ನಿರ್ಣಯದಿಂದ ಜೆಡಿಎಸ್‌ನ ಪ್ರಬಲ ಆಕಾಂಕ್ಷಿ ಇನಾಯತುಲ್ಲಾ ಶಾಬಂದ್ರಿಗೆ ಹಿನ್ನೆಡೆಯುಂಟಾಗಿತ್ತು. ಆದರೆ ತಂಝೀಮ್ ರಾಜಕೀಯ ವ್ಯವಹಾರಗಳ ಸಮಿತಿ ನೀಡಿದ ಸ್ಪಷ್ಟೀಕರಣದಿಂದಾಗಿ ಶಾಬಂದ್ರಿ ಅವರು ಚುನಾವಣೆಗೆ ಸ್ಪರ್ಧಿಸುವ ಅವಕಾಶಗಳು ಮತ್ತೇ ತೆರೆದುಕೊಂಡಿದೆ. ಅವರು ಜೆಡಿಎಸ್‌ನಿಂದ ಟಿಕೆಟ್ ಪಡೆದು ತಮಗೆ ಬೆಂಬಲ ನೀಡುವಂತೆ ತಂಝೀಮ್ ಸಂಸ್ಥೆಗೆ ಮನವಿ ಮಾಡಿಕೊಳ್ಳುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ.

share
Next Story
X