Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಾರಿಯರ್ಸ್ ಮಣಿಸಿದ ಮುಂಬೈ ಇಂಡಿಯನ್ಸ್...

ವಾರಿಯರ್ಸ್ ಮಣಿಸಿದ ಮುಂಬೈ ಇಂಡಿಯನ್ಸ್ ಫೈನಲ್‌ಗೆ, ಡೆಲ್ಲಿ ಕ್ಯಾಪಿಟಲ್ಸ್ ಎದುರಾಳಿ

ಡಬ್ಲುಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ವಾಂಗ್ ಹ್ಯಾಟ್ರಿಕ್ ವಿಕೆಟ್

24 March 2023 10:58 PM IST
share
ವಾರಿಯರ್ಸ್ ಮಣಿಸಿದ ಮುಂಬೈ ಇಂಡಿಯನ್ಸ್ ಫೈನಲ್‌ಗೆ, ಡೆಲ್ಲಿ ಕ್ಯಾಪಿಟಲ್ಸ್ ಎದುರಾಳಿ
ಡಬ್ಲುಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ವಾಂಗ್ ಹ್ಯಾಟ್ರಿಕ್ ವಿಕೆಟ್

  ಮುಂಬೈ, ಮಾ.24: ವೇಗದ ಬೌಲರ್ ಚಿಹ್ ಮಿಂಗ್ ವಾಂಗ್ ಹ್ಯಾಟ್ರಿಕ್ ವಿಕೆಟ್ ಹಾಗೂ ಅಗ್ರ ಸರದಿಯ ಆಟಗಾರ್ತಿ ನ್ಯಾಟ್ ಸಿವೆರ್-ಬ್ರಂಟ್ ಭರ್ಜರಿ ಅರ್ಧಶತಕದ(ಔಟಾಗದೆ 72 ರನ್, 38 ಎಸೆತ)ಕೊಡುಗೆಯ ಸಹಾಯದಿಂದ ಮುಂಬೈ ಇಂಡಿಯನ್ಸ್ ತಂಡ ಮಹಿಳಾ ಪ್ರೀಮಿಯರ್ ಲೀಗ್‌ನ(ಡಬ್ಲುಪಿಎಲ್) ಎಲಿಮಿನೇಟರ್ ಸುತ್ತಿನ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು 72 ರನ್ ಅಂತರದಿಂದ ಮಣಿಸಿತು.

ಈ ಗೆಲುವಿನ ಮೂಲಕ ಮಾ.26ರಂದು ನಡೆಯುವ ಫೈನಲ್‌ಗೆ ಅರ್ಹತೆ ಪಡೆದಿದ್ದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯವನ್ನು ಸೋತಿರುವ ವಾರಿಯರ್ಸ್ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಡಿ.ವೈ.ಪಾಟೀಲ್ ಸ್ಟೇಡಿಯಮ್‌ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ವಾರಿಯರ್ಸ್ ನಾಯಕಿ ಅಲಿಸಾ ಹೀಲಿ ಮುಂಬೈ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಬ್ರಂಟ್ ಬ್ಯಾಟಿಂಗ್ ಅಬ್ಬರದ(ಔಟಾಗದೆ 72 ರನ್, 38 ಎಸೆತ, 9 ಬೌಂಡರಿ, 2 ಸಿಕ್ಸರ್)ನೆರವಿನಿಂದ ಮುಂಬೈ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 182 ರನ್ ಗಳಿಸಿತು.

 ಗೆಲ್ಲಲು ಕಠಿಣ ಗುರಿ ಬೆನ್ನಟ್ಟಿದ ಯುಪಿ  17.4 ಓವರ್‌ಗಳಲ್ಲಿ 110 ರನ್ ಗಳಿಸಿ ಆಲೌಟಾಯಿತು. ವಾರಿಯರ್ಸ್ ಪರ ಕಿರಣ್ ನವ್‌ಗಿರ್(43 ರನ್, 27 ಎಸೆತ)ಏಕಾಂಗಿ ಹೋರಾಟ ನೀಡಿದರು. ಉಳಿದವರು ಪೆವಿಲಿಯನ್‌ಗೆ ಪರೇಡ್ ನಡೆಸಿದರು. 13ನೇ ಓವರ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ವಾಂಗ್ ಅವರು ವಾರಿಯರ್ಸ್ ಸಂಕಷ್ಟ ಹೆಚ್ಚಿಸಿದರು. ವಾಂಗ್ ದಾಳಿಗೆ ತತ್ತರಿಸಿದ ಕಿರಣ್(43 ರನ್), ಸಿಮ್ರಾನ್ ಶೇಖ್(0), ಸೋಫಿ ಎಕ್ಲೆಸ್ಟೋನ್(0)ಬೆನ್ನುಬೆನ್ನಿಗೆ ಔಟಾದರು.
  
ಇದಕ್ಕೂ ಮೊದಲು ಯಸ್ತಿಕಾ ಭಾಟಿಯಾ(21 ರನ್)ಹಾಗೂ ಹೇಲಿ ಮ್ಯಾಥ್ಯೂಸ್(26 ರನ್)ಮೊದಲ ವಿಕೆಟಿಗೆ 31 ರನ್ ಸೇರಿಸಿ ಮುಂಬೈಗೆ ಸಾಧಾರಣ ಆರಂಭ ನೀಡಿದರು. ಅಮೇಲಿಯ ಕೆರ್(29 ರನ್, 19 ಎಸೆತ), ನಾಯಕಿ ಹರ್ಮನ್‌ಪ್ರೀತ್ ಕೌರ್ (14 ರನ್,15 ಎಸೆತ)ಹಾಗೂ ಪೂಜಾ ವಸ್ತ್ರಕರ್(ಔಟಾಗದೆ 11,4 ಎಸೆತ) ಎರಡಂಕೆಯ ಸ್ಕೋರ್ ಗಳಿಸಿದರು.

ಸೋಫಿ ಎಕ್ಲೆಸ್ಟೋನ್(2-39)ಯಶಸ್ವಿ ಬೌಲರ್ ಎನಿಸಿಕೊಂಡರು. ಅಂಜಲಿ ಸರ್ವಾನಿ(1-17) ಹಾಗೂ ಪಾರ್ಶವಿ ಚೋಪ್ರಾ(1-25)ತಲಾ ಒಂದು ವಿಕೆಟ್ ಗಳಿಸಿದರು.

share
Next Story
X