ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ: ಖಾದರ್, ರೈ ಸೇರಿದಂತೆ ದ.ಕ ಜಿಲ್ಲೆಯ 5 ಅಭ್ಯರ್ಥಿಗಳ ಹೆಸರು ಘೋಷಣೆ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.
ಮೊದಲ ಹಂತದ ಪಟ್ಟಿಯಲ್ಲಿ ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಸೇರಿ ದ.ಕ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಆದರೆ ಟಿಕೆಟ್ ಆಕಾಂಕ್ಷಿಗಳ ತೀವ್ರ ಹಣಾಹಣಿ ಇರುವ ಮಂಗಳೂರು ಉತ್ತರ , ಮಂಗಳೂರು ದಕ್ಷಿಣ ಹಾಗು ಪುತ್ತೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿಲ್ಲ.
ಇದನ್ನೂ ಓದಿ: ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆ | ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ
► ಅಭ್ಯರ್ಥಿಗಳ ವಿವರ
ಬೆಳ್ತಂಗಡಿ-ರಕ್ಷಿತ್ ಶಿವರಾಮ್
ಮೂಡಬಿದಿರೆ-ಮಿಥುನ್ ಎಮ್. ರೈ.
ಮಂಗಳೂರು- ಯು.ಟಿ. ಅಬ್ದುಲ್ ಖಾದರ್ ಅಲಿ ಫರೀದ್
ಬಂಟ್ವಾಳ-ರಮನಾಥ್ ರೈ .ಬಿ
ಸುಳ್ಯ- ಎಸ್ಸಿ- ಕೃಷ್ಣಪ್ಪ ಜಿ
Next Story