Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಪ್ರಧಾನಿ ಕಚೇರಿ'ಯ ನಕಲಿ ಅಧಿಕಾರಿಗಳ...

'ಪ್ರಧಾನಿ ಕಚೇರಿ'ಯ ನಕಲಿ ಅಧಿಕಾರಿಗಳ ತಂಡದಲ್ಲಿ ಪುತ್ರ ಭಾಗಿ: ಗುಜರಾತ್ ಸಿಎಂ ಕಚೇರಿಯ ಹಿರಿಯ ಅಧಿಕಾರಿ ರಾಜೀನಾಮೆ

25 March 2023 10:58 AM IST
share
ಪ್ರಧಾನಿ ಕಚೇರಿಯ ನಕಲಿ ಅಧಿಕಾರಿಗಳ ತಂಡದಲ್ಲಿ  ಪುತ್ರ ಭಾಗಿ: ಗುಜರಾತ್ ಸಿಎಂ ಕಚೇರಿಯ ಹಿರಿಯ ಅಧಿಕಾರಿ ರಾಜೀನಾಮೆ

ಶ್ರೀನಗರ: ಪ್ರಧಾನಮಂತ್ರಿ ಕಚೇರಿಯ ಅಧಿಕೃತ ತಂಡದ  ಸೋಗಿನಲ್ಲಿ  ಜಮ್ಮು ಮತ್ತು ಕಾಶ್ಮೀರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ವಂಚಿಸಿದ  ತಂಡದಲ್ಲಿ ತಮ್ಮ ಪುತ್ರನು ಭಾಗವಾಗಿದ್ದ ಎಂಬ  ವಿಚಾರ ಭಾರೀ ವಿವಾದ ಉಂಟಾದ ನಂತರ ಗುಜರಾತ್ ಮುಖ್ಯಮಂತ್ರಿ ಕಚೇರಿಯ ಹಿರಿಯ ಅಧಿಕಾರಿ ಹಿತೇಶ್ ಪಾಂಡ್ಯ ರಾಜೀನಾಮೆ ನೀಡಿದ್ದಾರೆ.

 ಪಾಂಡ್ಯ ಅವರ ಪುತ್ರ ಅಮಿತ್ ಹಿತೇಶ್ ಪಾಂಡ್ಯ ಈ ತಿಂಗಳ ಆರಂಭದಲ್ಲಿ ಬಂಧನದ ನಂತರ ಸುದ್ದಿಯಾಗಿದ್ದ  ಕಿರಣ್ ಭಾಯ್ ಪಟೇಲ್ ನೇತೃತ್ವದ 'ಪ್ರಧಾನಿ ಕಚೇರಿ'ಯ ನಕಲಿ 'ಅಧಿಕೃತ ತಂಡ'ದ ಭಾಗವಾಗಿದ್ದ.

2001 ರಿಂದ ಗುಜರಾತ್ ಮುಖ್ಯಮಂತ್ರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿ (PRO) ಆಗಿ ಸೇವೆ ಸಲ್ಲಿಸುತ್ತಿರುವ  ಪಾಂಡ್ಯ ಅವರು ನಿನ್ನೆ ಸಂಜೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ರಾಜೀನಾಮೆ ಸಲ್ಲಿಸಿದರು.

ತನ್ನ ಮಗ "ನಿರಪರಾಧಿ" ಆಗಿದ್ದರೂ, ಪ್ರಧಾನ ಮಂತ್ರಿ ಕಚೇರಿ ಮತ್ತು ಗುಜರಾತ್ ಮುಖ್ಯಮಂತ್ರಿ ಕಚೇರಿಯ ಇಮೇಜ್‌ಗೆ ಕಳಂಕ ತರಲು ನಾನು ಬಯಸುವುದಿಲ್ಲ ಎಂದು ಪಾಂಡ್ಯ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

"ನನ್ನ ಮಗ ನಿರಪರಾಧಿ. ಆದರೆ, ಸಿಎಂಒ ಮತ್ತು ಪಿಎಂಒ ಇಮೇಜ್‌ಗೆ ಧಕ್ಕೆಯಾಗುವುದು ನನಗೆ ಇಷ್ಟವಿಲ್ಲ, ಆದ್ದರಿಂದ ನಾನು ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ" ಎಂದು ಪಾಂಡ್ಯ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಗುಜರಾತ್ ಬಿಜೆಪಿ ಕೂಡ ಅಮಿತ್ ಪಾಂಡ್ಯ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿದೆ ಎಂದು ವರದಿಯಾಗಿದೆ. ಪಾಂಡ್ಯ ಅವರು ಗುಜರಾತ್‌ನ ಉತ್ತರ ವಲಯದ ಪಕ್ಷದ ಸಾಮಾಜಿಕ ಮಾಧ್ಯಮ ವಿಭಾಗದ ಉಸ್ತುವಾರಿ ವಹಿಸಿದ್ದರು.

ಪ್ರಧಾನ ಮಂತ್ರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಯಾಗಿ ಪೋಸ್ ನೀಡುತ್ತಾ ನಾಲ್ಕು ತಿಂಗಳ ಕಾಲ ಅಧಿಕೃತ ಪ್ರೋಟೋಕಾಲ್ ಅನ್ನು ಅನುಭವಿಸಿದ್ದ  ಕಿರಣ್ ಭಾಯ್ ಪಟೇಲ್ ನನ್ನು ಮಾ.2ರಂದು ಬಂಧಿಸಲಾಯಿತು.

ಪಾಂಡ್ಯ ಅವರ ಪುತ್ರ ಅಮಿತ್ ಹಿತೇಶ್ ಪಾಂಡ್ಯ ಅವರು ಕಿರಣ್ ಭಾಯ್ ಪಟೇಲ್ ನೇತೃತ್ವದ ನಕಲಿ 'ಅಧಿಕೃತ ತಂಡ'ದ ಭಾಗವಾಗಿದ್ದ.

ಅಮಿತ್ ಹಿತೇಶ್ ಪಾಂಡ್ಯ, ಗುಜರಾತ್‌ನ ಜೇ ಸಿತಾಪರಾ ಹಾಗೂ  ರಾಜಸ್ಥಾನದ ತ್ರಿಲೋಕ್ ಸಿಂಗ್ ಅವರು ಶ್ರೀನಗರದ ಪಂಚತಾರಾ ಹೋಟೆಲ್‌ನಲ್ಲಿ ಪಟೇಲ್ ಅವರೊಂದಿಗೆ ಉಳಿದುಕೊಂಡಿದ್ದರು ಮತ್ತು ಪ್ರಧಾನ ಮಂತ್ರಿ ಕಚೇರಿಯ ಅಧಿಕೃತ ತಂಡದಂತೆ ನಟಿಸಿದ್ದರು.

share
Next Story
X