Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈ ಹಿಂದೆ ಯಾವೆಲ್ಲ ಭಾರತೀಯ ಸಂಸದರು,...

ಈ ಹಿಂದೆ ಯಾವೆಲ್ಲ ಭಾರತೀಯ ಸಂಸದರು, ಶಾಸಕರು ಅನರ್ಹಗೊಂಡಿದ್ದರು?: ಇಲ್ಲಿದೆ ಮಾಹಿತಿ

25 March 2023 12:31 PM IST
share
ಈ ಹಿಂದೆ ಯಾವೆಲ್ಲ ಭಾರತೀಯ ಸಂಸದರು, ಶಾಸಕರು ಅನರ್ಹಗೊಂಡಿದ್ದರು?: ಇಲ್ಲಿದೆ ಮಾಹಿತಿ

ಹೊಸದಿಲ್ಲಿ: ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅಮಾನತುಗೊಂಡಿದ್ದು, ಈ ಹಿಂದೆ ಇಂತಹ ವಿರಳ ಪ್ರಕರಣಗಳಲ್ಲಿ ಅನರ್ಹತೆಗೊಳಗಾಗಿದ್ದ ಸಂಸದರು ಹಾಗೂ ಶಾಸಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಜನಪ್ರತಿನಿಧಿ ಕಾಯ್ದೆ ಪ್ರಕಾರ, ಯಾವುದೇ ವ್ಯಕ್ತಿಗೆ ಎರಡು ವರ್ಷ ಅಥವಾ ಅದಕ್ಕೂ ಮೇಲ್ಪಟ್ಟ ಶಿಕ್ಷೆ ಘೋಷಣೆಯಾದರೆ, ಶಿಕ್ಷೆ ಘೋಷಣೆಯಾದ ದಿನದಿಂದಲೇ ತನ್ನ ಸ್ಥಾನದಿಂದ ಅನರ್ಹಗೊಳ್ಳುತ್ತಾನೆ ಹಾಗೂ ಶಿಕ್ಷೆ ಪೂರೈಸಿದ ನಂತರ ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸಲು ಅನರ್ಹನಾಗಿರುತ್ತಾನೆ ಎಂದು hindustantimes.com ವರದಿ ಮಾಡಿದೆ.

ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಮ್ಮ ಸದಸ್ಯತ್ವದಿಂದ ಅಮಾನತಾದ ಸಂಸದರು, ಶಾಸಕರ ವಿವರ ಈ ಕೆಳಗಿನಂತಿದೆ:

ಲಾಲೂ ಪ್ರಸಾದ್ ಯಾದವ್:

ಸೆಪ್ಟೆಂಬರ್, 2013ರಲ್ಲಿ ಮೇವು ಹಗರಣದಲ್ಲಿ ತಪ್ಪಿತಸ್ಥರೆಂದು ಘೋಷಣೆಗೊಳಗಾದ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ತಮ್ಮ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರು. ಅವರು ಬಿಹಾರದ ಸರಣ್ ಕ್ಷೇತ್ರದಿಂದ ಸಂಸದರಾಗಿದ್ದರು.

ಜೆ.ಜಯಲಲಿತಾ:

2014ರಲ್ಲಿ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ದೋಷಿಯೆಂದು ಘೋಷಣೆಗೊಳಗಾಗಿ, ನಾಲ್ಕು ವರ್ಷದ ಶಿಕ್ಷೆಗೆ ಗುರಿಯಾಗಿದ್ದರು. ಅವರು ಅನರ್ಹಗೊಂಡಾಗ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದರು ಮತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

ಪಿ.ಪಿ.ಮುಹಮ್ಮದ್ ಫೈಸಲ್:

2023ರಲ್ಲಿ ಕೊಲೆ ಪ್ರಯತ್ನ ಪ್ರಕರಣದಲ್ಲಿ ದೋಷಿಯೆಂದು ಘೋಷಣೆಗೊಳಗಾಗಿ, ಹತ್ತು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಲಕ್ಷದ್ವೀಪದ ಎನ್‌ಸಿಪಿ ಸಂಸದ ಪಿ.ಪಿ.ಮುಹಮ್ಮದ್ ಫೈಸಲ್ ಅವರ ಲೋಕಸಭಾ ಸದಸ್ಯ ಸ್ವಯಂಚಾಲಿತವಾಗಿ ಅನರ್ಹಗೊಂಡಿತ್ತು. ಆದರೆ, ಕೇರಳ ಹೈಕೋರ್ಟ್ ಅವರ ವಿರುದ್ಧದ ತೀರ್ಪು ಹಾಗೂ ಶಿಕ್ಷೆ ಎರಡನ್ನೂ ಅಮಾನತುಗೊಳಿಸಿತ್ತು. ಅವರ ಪ್ರಕಾರ, ಲೋಕಸಭಾ ಕಾರ್ಯಾಲಯವು ಇನ್ನಷ್ಟೇ ಅವರ ಅನರ್ಹತೆ ರದ್ದತಿಯ ಕುರಿತು ಅಧಿಸೂಚನೆ ಹೊರಡಿಸಬೇಕಿದೆ.

ಅಝಂ ಖಾನ್:

2019ರಲ್ಲಿ ದ್ವೇಷ ಭಾಷಣ ಮಾಡಿದರೆಂದು ಎಸ್‌ಪಿ ನಾಯಕ ಅಝಂ ಖಾನ್ ಅವರನ್ನು ಉತ್ತರ ಪ್ರದೇಶದ ನ್ಯಾಯಾಲಯವೊಂದು ಅಕ್ಟೋಬರ್ 2022ರಲ್ಲಿ ದೋಷಿ ಎಂದು ಘೋಷಿಸಿ, ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರಿಂದ ಅವರು ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದರು. ಅವರು ಉತ್ತರ ಪ್ರದೇಶದ ರಾಮ್‌ಪುರ ಸರ್ದಾರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಅನಿಲ್ ಕುಮಾರ್ ಸಾಹ್ನಿ:

ವಂಚನೆಯ ಪ್ರಕರಣದಲ್ಲಿ ಬಿಹಾರದ ನ್ಯಾಯಾಲಯವೊಂದು ಅಕ್ಟೋಬರ್, 2022ರಲ್ಲಿ ದೋಷಿ ಎಂದು ಘೋಷಿಸಿ, ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರಿಂದ ಆರ್‌ಜೆಡಿ ಶಾಸಕ ಅನಿಲ್ ಕುಮಾರ್ ಸಾಹ್ನಿ ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದರು. ಅವರು ಬಿಹಾರದ ಕುರ್ಹಾನಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ವಿಕ್ರಂ ಸಿಂಗ್ ಸೈನಿ:

2013ರಲ್ಲಿ ನಡೆದಿದ್ದ ಮುಝಫ್ಫರ್ ನಗರ ಗಲಭೆ ಪ್ರಕರಣದಲ್ಲಿ ದೋಷಿಯೆಂದು ಘೋಷಣೆಯಾಗಿ, ಎರಡು ವರ್ಷಗಳ ಜೈಲು ಶಿಕ್ಷೆಗೊಳಗಾಗಿದ್ದ ಬಿಜೆಪಿ ಶಾಸಕ ವಿಕ್ರಂ ಸಿಂಗ್ ಸೈನಿ ಅಕ್ಟೋಬರ್, 2022ರಿಂದ ಅನರ್ಹಗೊಂಡಿದ್ದರು. ಅವರು ಮುಝಫ್ಫರ್‌ನಗರದ ಖತೌಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಪ್ರದೀಪ್ ಚೌಧರಿ:

ಹಲ್ಲೆ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ದೋಷಿ ಎಂದು ಘೋಷಣೆಯಾಗಿ, ಮೂರು ವರ್ಷಗಳ ಜೈಲು ಶಿಕ್ಷೆಗೊಳಗಾಗಿದ್ದ ಹರ್ಯಾಣದ ಕಾಂಗ್ರೆಸ್ ಶಾಸಕ ಪ್ರದೀಪ್ ಚೌಧರಿ, ಜನವರಿ, 2021ರಿಂದ ಅನರ್ಹಗೊಂಡಿದ್ದರು. ಅವರು ಕಾಲ್ಕಾ ಕ್ಷೇತ್ರದ ಶಾಸಕರಾಗಿದ್ದರು.

ಕುಲದೀಪ್ ಸಿಂಗ್ ಸೆಂಗರ್:

ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯದಿಂದ ದೋಷಿಯೆಂದು ಘೋಷಣೆಗೊಳಗಾಗಿದ್ದ ಉತ್ತರ ಪ್ರದೇಶದ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಫೆಬ್ರವರಿ, 2020ರಲ್ಲಿ ಅನರ್ಹಗೊಳಿಸಲಾಗಿತ್ತು. ಅವರು ಉನ್ನಾಂವ್‌ನ ಬಂಗಾರ್‌ಮಾವು ಕ್ಷೇತ್ರದಿಂದ ಚುನಾಯಿತರಾಗಿದ್ದರು. ಅವರು ದೋಷಿಯೆಂದು ಘೋಷಣೆಯಾಗುವುದಕ್ಕೂ ಮುನ್ನ ಬಿಜೆಪಿಯು ಅವರನ್ನು ಪಕ್ಷದಿಂದ ಉಚ್ಚಾಟಿಸಿತ್ತು.

ಅಬ್ದುಲ್ಲಾ ಅಝಂ ಖಾನ್:

15 ವರ್ಷದಷ್ಟು ಹಳೆಯದಾದ ಪ್ರಕರಣದಲ್ಲಿ ಉತ್ತರ ಪ್ರದೇಶ ನ್ಯಾಯಾಲಯವೊಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರಿಂದ ಎಸ್‌ಪಿ ಶಾಸಕ ಅಬ್ದುಲ್ಲಾ ಅಝಂ ಖಾನ್ ಉತ್ತರ ಪ್ರದೇಶ ವಿಧಾನಸಭೆಯಿಂದ ಫೆಬ್ರವರಿ, 2023ರಿಂದ ಅನರ್ಹಗೊಂಡಿದ್ದರು. ಅವರು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ರಾಮಪುರ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದರು.

ಅನಂತ್ ಸಿಂಗ್:

ತಮ್ಮ ನಿವಾಸದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳು ಪತ್ತೆಯಾದ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲ್ಪಟ್ಟ ಆರ್‌ಜೆಡಿ ಶಾಸಕ ಅನಂತ್ ಸಿಂಗ್ ಅವರನ್ನು ಜುಲೈ, 2022ರಿಂದ ಬಿಹಾರ ವಿಧಾನಸಭೆಯಿಂದ ಅನರ್ಹಗೊಳಿಸಲಾಗಿತ್ತು. ಅವರು ಪಾಟ್ನಾ ಜಿಲ್ಲೆಯ ಮೊಕಾಮಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

share
Next Story
X