Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿರಿಯಾಪಟ್ಟಣ ತಹಶೀಲ್ದಾರ್‌ ಗೆ ಮಾಹಿತಿ...

ಪಿರಿಯಾಪಟ್ಟಣ ತಹಶೀಲ್ದಾರ್‌ ಗೆ ಮಾಹಿತಿ ಹಕ್ಕು ಕಾಯಿದೆಯಡಿ ರೂ. 53 ಸಾವಿರ ದಂಡ

26 March 2023 4:17 PM IST
share
ಪಿರಿಯಾಪಟ್ಟಣ ತಹಶೀಲ್ದಾರ್‌ ಗೆ ಮಾಹಿತಿ ಹಕ್ಕು ಕಾಯಿದೆಯಡಿ ರೂ. 53 ಸಾವಿರ ದಂಡ

ಮಂಗಳೂರು,ಮಾ.26: ಮಾಹಿತಿ ಹಕ್ಕು ಕಾಯ್ದೆಯ ಪ್ರಕಾರ ಮಾಹಿತಿ ಕೇಳಿ ಸಲ್ಲಿಸಿದ ಅರ್ಜಿಗೆ ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸದ ಒಟ್ಟು ನಾಲ್ಕು ಪ್ರತ್ಯೇಕ ಆದೇಶಗಳಲ್ಲಿ ಪಿರಿಯಾಪಟ್ಟಣ ತಾಲೂಕು ತಹಶೀಲ್ದಾರ್ ಹಾಗೂ ಮಾಹಿತಿ ಹಕ್ಕು ಅಧಿಕಾರಿಗೆ  ಕರ್ನಾಟಕ ಮಾಹಿತಿ ಹಕ್ಕು ಆಯೋಗ ಒಟ್ಟು ರೂ.53 ಸಾವಿರ ದಂಡ ವಿಧಿಸಿದೆ.

ಅರ್ಜಿದಾರರಾದ ಮಂಗಳೂರು ಮಂಗಳಾ ದೇವಿಯ ಮಿಷನ್ ಕಾಂಪೌಂಡ್ ನಿವಾಸಿ ಮುಹಮ್ಮದ್‌ ಝಮೀರ್ ಎಂಬವರು ಅಕ್ಟೋಬರ್ 2021ರಲ್ಲಿ ಪಿರಿಯಾಪಟ್ಟಣ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ತಹಶೀಲ್ದಾರ್ ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು.

ನಿಗದಿತ ಸಮಯದೊಳಗೆ ಸೂಕ್ತ ಮಾಹಿತಿ ನೀಡದಿರುವ ಕಾರಣ ಮತ್ತು ಮಾಹಿತಿ ಆಯೋಗದ ಆದೇಶ ಉಲ್ಲಂಘಿಸಿ ನಿರ್ಲಕ್ಷ್ಯ ವಹಿಸಿ ಅರ್ಜಿದಾರರಿಗೆ ಸತಾಯಿಸಿರುವ ಹಿನ್ನೆಲೆಯಲ್ಲಿ ಪಿರಿಯಾಟ್ಟಣ ತಹಶೀಲ್ದಾರ್ ಮತ್ತು ಸಾರ್ವಜನಿಕ ಮಾಹಿತಿ ಹಕ್ಕು ಅಧಿಕಾರಿ ಚಂದ್ರ ಮೌಳಿಯವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ ನಾಲ್ಕನೇ ಬಾರಿಗೆ ರೂ.25  ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಈ ದಂಡ ಮೊತ್ತವನ್ನು ತಹಶೀಲ್ದಾರ್‌ರ ಸಂಬಳದಿಂದ ಕಡಿತಗೊಳಿಸಿ ಮಾಹಿತಿ ಹಕ್ಕು ಆಯೋಗದ ಖಾತೆಗೆ ಜಮೆ ಮಾಡುವಂತೆ ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರು ಆದೇಶ ನೀಡಿದ್ದಾರೆ. 

ಈ ಪ್ರಕರಣದಲ್ಲಿ ನಿಗದಿತ ಸಮಯದಲ್ಲಿ ಮಾಹಿತಿ ಒದಗಿಸದೆ ಇದ್ದ ಕಾರಣ ಮಾಹಿತಿ ಹಕ್ಕು ಕಾಯಿದೆ 20(1)ಅಡಿಯಲ್ಲಿ ಮಾಹಿತಿ ಹಕ್ಕು ಅಯೋಗ 13-12-2022 ರಂದು ದಂಡ ವಿಧಿಸುವುದಾಗಿ ಸ್ಪಷ್ಟ ನಿರ್ದೇಶನ ನೀಡಿದ್ದರೂ ತಹಶೀಲ್ದಾರ್ ವಿಚಾರಣೆಗೆ ಗೈರು ಹಾಜರಾಗಿದ್ದರು. ಸಮಂಜಸ ಹೇಳಿಕೆ ನೀಡದೆ ನಿರ್ಲಕ್ಷ್ಯ ವಹಿಸಿದ್ದ ಕಾರಣ ಮಾಹಿತಿ ಹಕ್ಕು ಅಧಿನಿಯ 2005 ಕಲಂ20(1)ರನ್ವಯ ಪಿರಿಯಾಪಟ್ಟಣ ತಾಲೂಕು ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ತಹಸೀಲ್ದಾರ್ ರವರಿಗೆ ರೂ.25,000.00 ದಂಡವಿಧಿಸಿದೆ, ಮತ್ತು ಅವರ ವೇತನದಿಂದ ಈ ದಂಡದ ಮೊತ್ತ ವನ್ನು ಕಡಿತಗೊಳಿಸಿ ಪಾವತಿಸಲು ಜನವರಿ 31, 2023ರಲ್ಲಿ ಆದೇಶಿಸಿದೆ. ಈ ಆದೇಶದ ಕ್ರಮದ ಬಗ್ಗೆ ಆಯೋಗ ಮಾರ್ಚ್ 29,2023 ರಂದು ವಿಚಾರಣೆಯನ್ನು ನಿಗದಿಪಡಿಸಿದೆ.

ಪ್ರಕರಣದ ವಿವರ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕೊಪ್ಪ ಹಾರನಹಳ್ಳಿ ಹೋಬಳಿಯ ಬೈಲುಕೊಪ್ಪ  ಗ್ರಾಮ ಪಂಚಾಯತ್ ನ ಲಕ್ಷ್ಮೀಪುರ ಗ್ರಾಮದ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಹಶೀಲ್ದಾರ್ ಮೂಲಕ ಪಡೆಯ ಬೇಕಾಗಿದ್ದ ದಾಖಲೆಗಾಗಿ ಮಂಗಳೂರು ಮಂಗಳಾದೇವಿಯ ಮಿಷನ್ ಕಾಂಪೌಂಡ್ ನಿವಾಸಿ ಮುಹಮ್ಮದ್‌ ಝಮೀರ್ ಎಂಬವರು 2021ರಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಪಿರಿಯಾಪಟ್ಟಣದ ತಹಶೀಲ್ದಾರ್‌ ಗೆ ನಿಗದಿತ ಅವಧಿಯಲ್ಲಿ ಮಾಹಿತಿ ನೀಡಿಲ್ಲ ಎನ್ನುವ ಕಾರಣಕ್ಕೆ ಮಾಹಿತಿ ಆಯೋಗ ಪ್ರಥಮ ಬಾರಿಗೆ ರೂ.3000 ದಂಡ ವಿಧಿಸಿತ್ತು.

ಇದೇ ಪ್ರಕರಣದಲ್ಲಿ ತಪ್ಪು ಹಿಂಬರಹವನ್ನು ಅರ್ಜಿದಾರರಿಗೆ ನೀಡಿದ್ದಾರೆ ಎನ್ನುವ ಕಾರಣಕ್ಕಾಗಿ ಅವರ ಎರಡು ತಿಂಗಳ ಸಂಬಳದಿಂದ 15,000 ರೂ.ನ್ನು ರಾಜ್ಯ ಮಾಹಿತಿ ಹಕ್ಕು ಆಯೋಗಕ್ಕೆ ದಂಡ ಪಾವತಿಸಲು ಎರಡನೆ ಬಾರಿ ಆದೇಶಿಸಿತ್ತು.
20.10.2022ರಂದು ಆಯೋಗ ವಿಚಾರಣೆ ಕೋರಿ ಮಾಹಿತಿ ಒದಗಿಸಲು ನೀಡಿದ ಆದೇಶವನ್ನು ಉಲ್ಲಂಘನೆ ಮಾಡಿರುವ ಕಾರಣ ಪಿರಿಯಾಪಟ್ಟಣ ತಹಶೀಲ್ದಾರ್ ರಿಗೆ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತರು ಮೂರನೇ ಬಾರಿ ರೂ.10 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿತ್ತು.

ಇದೀಗ ನಾಲ್ಕನೇ ಬಾರಿ ಮಾಹಿತಿ ಹಕ್ಕಿನ ಕಾಯ್ದೆ ಉಲ್ಲಂಘನೆಯ ಹಿನ್ನಲೆಯಲ್ಲಿ ರೂ.25 ಸಾವಿರ ದಂಡ ಸೇರಿದಂತೆ ಒಟ್ಟು  ನಾಲ್ಕು ಬಾರಿ ಆಯೋಗದ ಆದೇಶದ ಪ್ರಕಾರ ತಹಶೀಲ್ದಾರ್ ಚಂದ್ರ ಮೌಳಿ ರೂ.53 ಸಾವಿರ ದಂಡವನ್ನು ತಮ್ಮ ವೇತನದಿಂದ ಪಾವತಿಸಬೇಕಾಗಿ ಬಂದಿದೆ.

share
Next Story
X