Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ವಾಭಿಮಾನದ ಬದುಕಿಗಾಗಿ ಸ್ವ ಉದ್ಯೋಗ...

ಸ್ವಾಭಿಮಾನದ ಬದುಕಿಗಾಗಿ ಸ್ವ ಉದ್ಯೋಗ ಸಹಕಾರಿ: ಸಚಿವ ಎಸ್.ಅಂಗಾರ

ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ

26 March 2023 9:20 PM IST
share
ಸ್ವಾಭಿಮಾನದ ಬದುಕಿಗಾಗಿ ಸ್ವ ಉದ್ಯೋಗ ಸಹಕಾರಿ: ಸಚಿವ ಎಸ್.ಅಂಗಾರ
ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ

ಸುಳ್ಯ: ಮೀನುಗಾರಿಕಾ ಕ್ಷೇತ್ರದಲ್ಲಿ ಸ್ವ ಉದ್ಯೋಗವನ್ನು ಹೆಚ್ಚಿಸಿ ಜನರಿಗೆ ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳನ್ನು ನೀಡಲಾಗಿದೆ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ.

ಕೇಂದ್ರ ಸರಕಾರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ’ಸ್ವಾವಲಂಬಿ ಬದುಕಿಗಾಗಿ ಸ್ವ ಉದ್ಯೋಗ’ – ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಮೀನುಗಾರಿಕಾ ಕ್ಷೇತ್ರದಲ್ಲಿ ಸ್ವ ಉದ್ಯೋಗ ನೀಡುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಉತ್ಪಾದನೆ ಹೆಚ್ಚಿಸಬೇಕು, ಅದಕ್ಕೆ ಉತ್ತಮ ಮಾರುಕಟ್ಟೆ ಹಾಗು ಜನರಿಗೆ ತಾಜಾ ಮೀನು ಕೂಡ ದೊರೆಯಬೇಕು ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂಬ ನೆಲೆಯಲ್ಲಿ ಯೋಜನೆ ರೂಪಿಸಲಾಗಿದೆ. ಸ್ವಾಭಿಮಾನದ ಬದುಕಿಗಾಗಿ ಜನರು ಸ್ವ ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ಅವರು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮೀನುಗಾರಿಕಾ ಇಲಾಖೆಯ ನಿರ್ದೇಶಕರಾದ ರಾಮಾಚಾರ್ಯ ಪುರಾಣಿಕ್ ಮಾತನಾಡಿ ‘ಎಲ್ಲಾ ಗ್ರಾಮಗಳಿಗೆ ತಾಜಾ ಮೀನುಗಳನ್ನು ತಲುಪಿಸಬೇಕೆಂಬ ಉದ್ದೇಶದಿಂದ ಮತ್ಸ್ಯವಾಹಿನಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರಥಮ ಹಂತದಲ್ಲಿ 300 ತ್ರಿಚಕ್ರ ವಾಹನವನ್ನು ಮಂಜೂರಾಗಿದೆ ಎಂದರು.

ರಾಜ್ಯದಲ್ಲಿ 60 ಕೋಟಿ ಮೀನಿನ ಮರಿಗಳ ಬೇಡಿಕೆ ಇದೆ, ಈಗ 40 ಕೋಟಿ ಮೀನುಮರಿಗಳ ಉತ್ಪಾದನೆಯಾ ಗುತ್ತಿದೆ. ಅದೇ ರೀತಿ 2020-21ರಲ್ಲಿ 6 ಲಕ್ಷ ಟನ್ ಮೀನು ಉತ್ಪಾದನೆ ಇತ್ತು 2021-22ರಲ್ಲಿ 10 ಲಕ್ಷ ಟನ್‍ಗೆ ಏರಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ ಮಾತನಾಡಿ’ ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಮೀನುಗಾರಿಕಾ ಇಲಾಖೆಯನ್ನು ಹೇಗೆ ಮುನ್ನಡೆಸಬಹುದು ಎಂಬುದನ್ನು ಸಚಿವ ಅಂಗಾರ ತೋರಿಸಿದ್ದಾರೆ. ಟೀಕೆ ಮಾಡಿದವರನ್ನೂ ಮೂಗಿನ ಮೇಲೆ ಕೈಯಿಡುವಂತೆ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ ಕಂದಡ್ಕ, ಮೀನುಗಾರಿಕಾ ಮಹಾವಿದ್ಯಾಲಯದ ಡೀನ್ ಆಂಜನಪ್ಪ, ಮೀನುಗಾರಿಕಾ ನಿರ್ದೇಶನಲಾಯದ ಅಪರ ನಿರ್ದೇಶಕರಾದ ತಿಪ್ಪೇಸ್ವಾಮಿ, ದಿನೇಶ್ ಕುಮಾರ್, ಮೀನುಗಾರಿಕಾ ಜಂಟಿ ನಿರ್ದೇಶಕರಾದ ಹರೀಶ್ ಕುಮಾರ್, ಕರ್ನಾಟಕ. ಮೀನುಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಗಣೇಶ್, ಮೀನುಗಾರಿಕಾ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಮಲ್ಲಿಕಾರ್ಜುನ, ಸುಳ್ಯ ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರ್ ಶೇಠ್, ಸುಳ್ಯ ತಹಶಿಲ್ದಾರ್ ಮಂಜುನಾಥ್ ಉಪಸ್ಥಿತರಿದ್ದರು. ಮೀನುಗಾರಿಕಾ ನಿರ್ದೇಶನಲಾಯದ ಅಪರ ನಿರ್ದೇಶಕರಾದ ದಿನೇಶ್ ಕುಮಾರ್ ಸ್ವಾಗತಿಸಿ, ತಿಪ್ಪೇಸ್ವಾಮಿ ವಂದಿಸಿದರು. ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು.

ಹೊಸ ಮೀನು ಪಾಲನಾ ಕೊಳ ನಿರ್ಮಾಣ, ಮತ್ಸ್ಯಾಶ್ರಮ ಯೋಜನೆ ಸೇರಿ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

share
Next Story
X