Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾವೆಲ್ಲರೂ ಹುಟ್ಟಿದ್ದು, ಇರುವುದು ಹಿಂದೂ...

ನಾವೆಲ್ಲರೂ ಹುಟ್ಟಿದ್ದು, ಇರುವುದು ಹಿಂದೂ ರಾಷ್ಟ್ರದಲ್ಲಿ: ಮಿಥುನ್ ರೈ ವಿವಾದಾತ್ಮಕ ಹೇಳಿಕೆ ವೈರಲ್

27 March 2023 5:45 PM IST
share
ನಾವೆಲ್ಲರೂ ಹುಟ್ಟಿದ್ದು, ಇರುವುದು ಹಿಂದೂ ರಾಷ್ಟ್ರದಲ್ಲಿ: ಮಿಥುನ್ ರೈ ವಿವಾದಾತ್ಮಕ ಹೇಳಿಕೆ ವೈರಲ್

ಮಂಗಳೂರು , ಮಾ. 27 : " ನಾವೆಲ್ಲರೂ ಹುಟ್ಟಿದ್ದು, ನಾವೆಲ್ಲರೂ ಇರುವುದು ಹಿಂದೂ ರಾಷ್ಟ್ರದಲ್ಲಿ, ಅದನ್ನು ಎದೆತಟ್ಟಿ ಹೇಳ್ತೇವೆ ನಾವು " ಎಂದು ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಹೇಳಿರುವ ವೀಡಿಯೊವೊಂದು ಇದೀಗ ವಿವಾದಕ್ಕೆ ಕಾರಣವಾಗಿದೆ. 

ಟಿವಿ ವಾಹಿನಿಯೊಂದರ ಚುನಾವಣಾ ಚರ್ಚಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಮಿಥುನ್ ರೈ  " ನಾವೆಲ್ಲರೂ ಹುಟ್ಟಿದ್ದು, ನಾವೆಲ್ಲರೂ ಇರುವುದು ಹಿಂದೂ ರಾಷ್ಟ್ರದಲ್ಲಿ, ಅದನ್ನು ಎದೆತಟ್ಟಿ ಹೇಳ್ತೇನೆ ನಾನು " ಎಂದು ಹೇಳಿರುವುದು ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. 

ಕಾಂಗ್ರೆಸ್ ಪಕ್ಷದ ವಿಧಾನಸಭಾ ಅಭ್ಯರ್ಥಿಯಾಗಿ ಈ ಹಿಂದೆ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಭಾರತ ಜಾತ್ಯತೀತ ರಾಷ್ಟ್ರವೆಂಬ ಸಾಮಾನ್ಯ ಜ್ಞಾನ ಗೊತ್ತಿಲ್ಲದಂತೆ ಹಾಗು ಸಂಘ ಪರಿವಾರದ ಮುಖಂಡರು ಮಾತಾಡಿದಂತೆ ಮಿಥುನ್ ರೈ ಮಾತಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತವಾಗಿದೆ. 

ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂದು ಸಂಘ ಪರಿವಾರ, ಹಿಂದುತ್ವ ಸಂಘಟನೆಗಳು ಬಯಸುತ್ತವೆ. ಈಗ ನೋಡಿದರೆ ಕಾಂಗ್ರೆಸ್ ಅಭ್ಯರ್ಥಿಯಾದವರೇ ಜಾತ್ಯತೀತ ತತ್ವಕ್ಕೆ, ಸಿದ್ಧಾಂತಕ್ಕೆ ವಿರುದ್ಧವಾಗಿ ಭಾರತ ಹಿಂದೂ ರಾಷ್ಟ್ರ ಎಂಬಂತೆ ಬಿಂಬಿಸಿ ಮಾತಾಡುತ್ತಿದ್ದಾರೆ. ಇವರು ಜಾತ್ಯತೀತ ಕಾಂಗ್ರೆಸ್ ನ ತತ್ವ ಸಿದ್ಧಾಂತವನ್ನೇ ತಿಳಿದುಕೊಂಡಿಲ್ಲ ಎಂದು ಮಿಥುನ್ ರೈ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ. 

"ಇಂತಹ ಹೇಳಿಕೆ ನೀಡುವ ಮೂಲಕ ಮಿಥುನ್ ರೈ ಮೃದು ಹಿಂದುತ್ವ ನೀತಿ ಅನುಸರಿಸುತ್ತಿದ್ದಾರೆ. ಅಲ್ಲಿ ರಾಹುಲ್ ಗಾಂಧಿ ಸಂಘ ಪರಿವಾರದ ವಿರುದ್ಧ ಹೋರಾಡುತ್ತಿದ್ದಾರೆ. ಆದರೆ ಅವರ ಪಕ್ಷದ ಸ್ಥಳೀಯ ನಾಯಕರು ಸಂಘ ಪರಿವಾರದ ಬೆಂಬಲಿಗರನ್ನು ಓಲೈಸುವ ರಾಜಕಾರಣ ಮಾಡುತ್ತಿದ್ದಾರೆ " ಎಂದು ಫೇಸ್ ಬುಕ್ ಹಾಗು ವಾಟ್ಸ್ ಆಪ್ ಗಳಲ್ಲಿ ಮಿಥುನ್ ರೈ ವಿರುದ್ಧ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಿಥುನ್ ರೈ ಹೇಳಿದ್ದೇನು? 

ಚರ್ಚಾ ಕಾರ್ಯಕ್ರಮದಲ್ಲಿ ಮಿಥುನ್ ರೈ ಮಾತನಾಡುತ್ತಾ 'ನಾವೆಲ್ಲರೂ ಹುಟ್ಟಿದ್ದು, ನಾವೆಲ್ಲರೂ ಇರುವುದು ಹಿಂದೂ ರಾಷ್ಟ್ರದಲ್ಲಿ, ಅದನ್ನು ಎದೆತಟ್ಟಿ ಹೇಳ್ತೇವೆ ನಾವು. ಆದರೆ ನನ್ನ ಹಿಂದುತ್ವ ಮತ್ತು ಅನ್ಯ ಪಕ್ಷದವರ ಹಿಂದುತ್ವಕ್ಕೆ ವ್ಯತ್ಯಾಸ ಇದೆ. ''ನನ್ನ ಹಿಂದುತ್ವ ಎದೆ ತಟ್ಟಿ ಹೇಳು ನೀ ಹಿಂದು, ಅನ್ಯ ಸಮುದಾಯದವರ ಮನಸ್ಸನ್ನು ಗೆದ್ದು  ಹೇಳು ನೀ ಹಿಂದು'' ನನ್ನ ಕೇಸರಿಯಲ್ಲಿ ಬೇರೆ ಸಮುದಾಯದವರಿಗೆ ರಕ್ಷಣೆ ಸಿಗಬೇಕು. ನನ್ನ ಕೇಸರಿಯಿಂದ ಬೇರೆ ಸಮುದಾಯದವರಿಗೆ ಭಯದ ವಾತಾವರಣ ಸೃಷ್ಟಿಯಾಗಬಾರದು' ಎಂದು ಹೇಳಿದ್ದಾರೆ. 

ಕಾರ್ಯಕ್ರಮದಲ್ಲಿ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಪೇಜಾವರ ಶ್ರೀಗಳ ಮಾಜಿ ಕಾರು ಚಾಲಕ ಆರಿಫ್ ಭಾಗವಹಿಸಿದ್ದರು.

share
Next Story
X