Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಕೆಂಗಲ್...

ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಕೆಂಗಲ್ ಹನುಮಂತಯ್ಯ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ

27 March 2023 8:52 PM IST
share
ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಕೆಂಗಲ್ ಹನುಮಂತಯ್ಯ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಮಾ.27: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಮಾಜಿ ಮುಖ್ಯ ಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಹೆಸರು ಇಡಲಾಗುವುದು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜೀವ್ ಗಾಂಧಿ ಆರೋಗ್ಯ ವಿವಿಯಿಂದ  ಇಲ್ಲಿ ಒಂದು ಸಾವಿರ ಹಾಸಿಗೆಗಳ ಸಾಮರ್ಥ್ಯದ  ಆಸ್ಪತ್ರೆ ಬರಲಿದೆ. ರಾಮನಗರದ ಬಡವರ ಚಿಕಿತ್ಸೆಗೆ ದೊಡ್ಡ ಸಂಸ್ಥೆಯಾಗಲಿದೆ. ಸಂಶೋಧನೆಗಳು ದೊಡ್ಡ ಪ್ರಮಾಣದಲ್ಲಿ ಆಗಲಿದೆ. ದೇಶದಲ್ಲಿಯೇ ದೊಡ್ಡ ಆರೋಗ್ಯ ಕೇಂದ್ರವಾಗಲಿದೆ ಎಂದರು.

ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಆಗಬೇಕೆಂದು ಕಳೆದ 16 ವರ್ಷಗಳಿಂದ ಪ್ರಯತ್ನ ನಡೆದಿದೆ. ಹಲವಾರು ತಿರುವುಗಳನ್ನು ಕಂಡು ಸ್ವಂತ ಕಟ್ಟಡ ಬಗ್ಗೆ ಸಂಶಯ ಉಂಟಾಗುವ ಮಟ್ಟಕ್ಕೆ ತಲುಪಿ, ಗೊಂದಲದ ಗೂಡಾಗಿತ್ತು. ಇಲ್ಲಿ ವಿಶ್ವವಿದ್ಯಾಲಯ ಕಟ್ಟಲೇಬೇಕೆಂದು  ಸರಕಾರ ಸಮಸ್ಯೆಗೆ ಪರಿಹಾರವನ್ನು ಒದಗಿಸಿದೆ. ಕನ್ನಡ ನಾಡು ಸಮಗ್ರವಾಗಿ ಅಭಿವೃದ್ಧಿಯಾಗಲು ಪ್ರಾದೇಶಿಕವಾಗಿಯೂ ಅಭಿವೃದ್ಧಿ ಯಾಗಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಬಿಡದಿ, ಮಾಗಡಿಯನ್ನು ಬೆಂಗಳೂರಿಗೆ ಮೆಟ್ರೋ ಮೂಲಕ ಜೋಡಿಸಬೇಕು. ಇಂಟಿಗ್ರೇಟೆಡ್ ಟೌನ್ ಶಿಪ್ ಕೆಲಸ ಈ ವರ್ಷ ಪ್ರಾರಂಭವಾಗಲಿದೆ. ಬಿಡದಿ ಹಾಗೂ ಮಾಗಡಿಯವರೆಗೆ  ಮೆಟ್ರೋ ವಿಸ್ತರಿಸಿ ರಾಮನಗರವನ್ನು ಬೆಂಗಳೂರಿಗೆ ಜೋಡಿಸಬೇಕು ಎಂದು ಅವರು ತಿಳಿಸಿದರು.

ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ರಸ್ತೆ ಆರ್ಥಿಕ ಅಭಿವೃದ್ಧಿಯ ಸಂಕೇತ. ಇದೊಂದು ರಾಷ್ಟ್ರೀಯ ಆಸ್ತಿಯಾಗಿದೆ. ರಾಮನಗರ ಹೊಸ ಜಿಲ್ಲೆಯಾಗಿದ್ದು ಇಲ್ಲಿ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ವಿಶ್ವವಿದ್ಯಾಲಯ ಆದರೆ ಸಾರ್ಥಕವಾಗುತ್ತದೆ. ಎಲ್ಲ ತಾಲೂಕುಗಳು ಅಭಿವೃದ್ಧಿಯಾಗುತ್ತವೆ. ನೀರಾವರಿ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಬೃಹತ್ ರೇಷ್ಮೆ ಮಾರುಕಟ್ಟೆಗೆ ಅಡಿಗಲ್ಲು: ರಾಮನಗರಕ್ಕೆ 180 ಕೋಟಿ ರೂ.ಗಳ ವೆಚ್ಚದ ಹೈಟೆಕ್ ರೇಷ್ಮೆ ಮಾರುಕಟ್ಟೆಗೆ ಅಡಿಗಲ್ಲು ಹಾಕಲಾಗಿದೆ. ಇಷ್ಟು ಬೃಹತ್ ರೇಷ್ಮೆ ಮಾರುಕಟ್ಟೆ ರಾಜ್ಯದಲ್ಲಿ ಎಲ್ಲೂ ಇಲ್ಲ. ರೇಷ್ಮೆ ಬೆಳೆಗಾರರಿಗೆ ಮಾರುಕಟ್ಟೆ ನಿಯಂತ್ರಣ ರೈತರ ಕೈಗೆ ಬರಲಿದೆ. ಮಾವಿನ ಸಂಸ್ಕರಾಣಾ ಘಟಕಗಳಿಗೆ ಚಾಲನೆ ನೀಡಲಾಗಿದ್ದು, 160 ಕೋಟಿ ರೂ. ಮೊತ್ತದ ಹೊಸ ಕಾಮಗಾರಿಯನ್ನು ಪ್ರಾರಂಭ ಮಾಡಲಾಗಿದೆ ಎಂದು ಅವರು ಹೇಳಿದರು. 

605 ಕೋಟಿ ರೂ.ಗಳ ಯೋಜನೆಗೆ ಸರಕಾರ ಅನುದಾನ ನೀಡಿ ಪ್ರಾರಂಭಿಸಿದೆ. ಈ ಭಾಗದ ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವರಾದ ಕೆ.ಸಿ.ನಾರಾಯಣಗೌಡ, ಡಾ.ಕೆ.ಸುಧಾಕರ್, ವಿಧಾನಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಸಿ.ಪಿ.ಯೋಗೇಶ್ವರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
Next Story
X