Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕ ರಾಜಕೀಯ ಸಮಾವೇಶಗಳಲ್ಲಿ...

ಕರ್ನಾಟಕ ರಾಜಕೀಯ ಸಮಾವೇಶಗಳಲ್ಲಿ ಉಳಿಕೆಯಾದ ಆಹಾರ ಸೇವಿಸಿ 22 ದನಗಳ ಸಾವು

27 March 2023 9:25 PM IST
share
ಕರ್ನಾಟಕ ರಾಜಕೀಯ ಸಮಾವೇಶಗಳಲ್ಲಿ ಉಳಿಕೆಯಾದ ಆಹಾರ ಸೇವಿಸಿ 22 ದನಗಳ ಸಾವು

ಯಾದಗಿರಿ: ಜೆಡಿಎಸ್ ಆಯೋಜಿಸಿದ್ದ ಸಮಾವೇಶ ಮುಕ್ತಾಯದ ನಂತರ ಉಳಿದಿದ್ದ ಆಹಾರವನ್ನು ಸೇವಿಸಿ 15 ದನಗಳು ಸಾವಿಗೀಡಾಗಿರುವ ಘಟನೆ ಮಾರ್ಚ್ 25ರಂದು ನಡೆದಿದೆ. ಇದೇ ತಿಂಗಳ ಆರಂಭದಲ್ಲೂ ಇಂತಹದೇ ಘಟನೆ ವರದಿಯಾಗಿತ್ತು ಎಂದು indianexpress.com ವರದಿ ಮಾಡಿದೆ.

ಈ ಒಂದು ತಿಂಗಳ ಅವಧಿಯಲ್ಲಿ ರಾಜಕೀಯ ಪಕ್ಷಗಳು ಆಯೋಜಿಸಿದ್ದ ಸಮಾವೇಶಗಳ ಮುಕ್ತಾಯದ ನಂತರ ಉಳಿದಿದ್ದ ಆಹಾರವನ್ನು ಸೇವಿಸಿ ಯಾದಗಿರಿ ಹಾಗೂ ರಾಯಚೂರಿನಲ್ಲಿ ಒಟ್ಟು 22 ದನಗಳು ಸಾವಿಗೀಡಾಗಿವೆ ಎಂದು ವರದಿ ಉಲ್ಲೇಖಿಸಿದೆ.

ಯಾದಗಿರಿ ಜಿಲ್ಲೆಯ ಯೆರ್ಗೋಲ್ ಗ್ರಾಮದಲ್ಲಿ ಮಾರ್ಚ್ 25ರಂದು 15 ದನಗಳು ಸಾವಿಗೀಡಾಗಿರುವುದು ಕಂಡು ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪಶು ಸಂಗೋಪನಾ ಅಧಿಕಾರಿಗಳಿಗೆ, ಜೆಡಿಎಸ್ ಸಮಾವೇಶದಲ್ಲಿನ ಉಳಿಕೆ ಆಹಾರವನ್ನು ಸೇವಿಸಿ ಆ ದನಗಳು ಸಾವಿಗೀಡಾಗಿವೆ ಎಂಬ ಸಂಗತಿ ತಿಳಿದು ಬಂದಿದೆ.

"ಗುರುಮಿಠ್ಕಲ್ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಸಂಭವನೀಯ ಅಭ್ಯರ್ಥಿಯಾಗಿರುವ ಶರಣಗೌಡ ಕಂದಕೂರ್ ಅವರು ಮಾರ್ಚ್ 24ರಂದು ಚುನಾವಣಾ ಸಮಾವೇಶವನ್ನು ಆಯೋಜಿಸಿದ್ದರು. ಅದೇ ದಿನ ಸಂಜೆ ಆ ಗ್ರಾಮದ 30-35 ದನಗಳು ಸಮಾವೇಶದಲ್ಲಿ ಉಳಿಕೆಯಾಗಿದ್ದ ಅನ್ನವನ್ನು ಸೇವಿಸಿದ್ದವು. ಶನಿವಾರ ಬೆಳಗ್ಗೆ ದನಗಳಿಗಾಗಿ ಹುಡುಕಿಕೊಂಡು ಹೋದ ಗ್ರಾಮಸ್ಥರಿಗೆ ದನಗಳು ಹೊಟ್ಟೆ ಊದಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ. ಕೂಡಲೇ ಗ್ರಾಮಸ್ಥರು ಪಶು ಸಂಗೋಪನಾ ಇಲಾಖೆಗೆ ಮಾಹಿತಿ ನೀಡಿದರು" ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕರಾದ ರಾಜು ದೇಶ್‌ಮುಖ್ ಅವರು, "ದನಗಳು ಜೀರ್ಣ ಕ್ರಿಯೆಯ ಆಮ್ಲೀಕರಣದಿಂದ ಸಾವಿಗೀಡಾಗಿವೆ. ಮರಣೋತ್ತರ ಪರೀಕ್ಷೆಯ ಪ್ರಕಾರ, ದನಗಳು ಕಾರ್ಬೊಹೈಡ್ರೇಟ್ ಪ್ರಮಾಣ ಹೊಂದಿರುವ ಆಹಾರವನ್ನು ಹೇರಳವಾಗಿ ಸೇವಿಸಿವೆ. ದನಗಳು ಹೇರಳ ಪ್ರಮಾಣದ ಅನ್ನ ಸೇವಿಸಿರುವುದರಿಂದ ಮರಣ ಸಂಭವಿಸಿದೆ" ಎಂದು Indian Express ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಪಶು ಸಂಗೋಪನಾ ಇಲಾಖೆಯ ಅಧಿಕಾರಿಯೊಬ್ಬರು, "ಈ ಪ್ರಕರಣವು ಆಹಾರ ನಂಜಿನ ಸ್ಪಷ್ಟ ಪ್ರಕರಣವಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ದನಗಳು 5-6 ಕೆಜಿಯಷ್ಟು ಹಳಸಿದ ಅನ್ನವನ್ನು ಸೇವಿಸಿದ್ದು, ಇದೇ ಸಾವಿಗೆ ಕಾರಣವಾಗಿರಬಹುದು. ದೊಡ್ಡ ಪ್ರಮಾಣದ ಆಹಾರವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಿರುವುದರಿಂದ ಗ್ರಾಮಸ್ಥರಿಗೆ ಆ ಸ್ಥಳವನ್ನು ಚೊಕ್ಕಟಗೊಳಿಸುವಂತೆ ಸೂಚಿಸಲಾಗಿದೆ" ಎಂದು ತಿಳಿಸಿದ್ದಾರೆ.

ಇದೇ ಬಗೆಯ ಘಟನೆಯೊಂದು ಮಾರ್ಚ್ 10ರಂದು ರಾಯಚೂರಿನ ಗುಂಜಲಿ ಗ್ರಾಮದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲೂ ನಡೆದು, ಏಳು ದನಗಳು ಮೃತಪಟ್ಟಿದ್ದವು.

ಈ ಕುರಿತು ಪ್ರತಿಕ್ರಿಯಿಸಿರುವ ರಾಯಚೂರು ಬಿಜೆಪಿಯ ಜಿಲ್ಲಾಧ್ಯಕ್ಷ ರಮಾನಂದ ಯಾದವ್, "ದನಗಳು ಆಹಾರ ನಂಜಿನಿಂದ ಮೃತಪಟ್ಟಿದ್ದು, ಪಕ್ಷವು ದನಗಳ ಮಾಲಕರನ್ನು ಸಂಪರ್ಕಿಸಿದೆ. ನಮಗೆ ಘಟನೆಯ ಕುರಿತು ತಿಳಿಯಿತು ಮತ್ತು ನಾವು ರೈತರಿಗೆ ಪರಿಹಾರ ಒದಗಿಸಿದ್ದೇವೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ" ಎಂದು ಭರವಸೆ ನೀಡಿದ್ದಾರೆ.

share
Next Story
X