Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂ ರಾಷ್ಟ್ರಕ್ಕಾಗಿ ಬೇಡಿಕೆ ಇಡುವವರ...

ಹಿಂದೂ ರಾಷ್ಟ್ರಕ್ಕಾಗಿ ಬೇಡಿಕೆ ಇಡುವವರ ವಿರುದ್ಧ ಕಠಿಣ ಕ್ರಮ ಏಕಿಲ್ಲ: ಸಿಖ್ಖರ ಉನ್ನತ ಸಂಘಟನೆ ಪ್ರಶ್ನೆ

ಸಿಖ್ ಯುವಕರನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರಕಾರಕ್ಕೆ 24 ಗಂಟೆಗಳ ಗಡುವು

28 March 2023 10:38 AM IST
share
ಹಿಂದೂ ರಾಷ್ಟ್ರಕ್ಕಾಗಿ ಬೇಡಿಕೆ ಇಡುವವರ ವಿರುದ್ಧ  ಕಠಿಣ ಕ್ರಮ ಏಕಿಲ್ಲ: ಸಿಖ್ಖರ ಉನ್ನತ ಸಂಘಟನೆ ಪ್ರಶ್ನೆ
ಸಿಖ್ ಯುವಕರನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರಕಾರಕ್ಕೆ 24 ಗಂಟೆಗಳ ಗಡುವು

ಅಮೃತಸರ: ಖಾಲಿಸ್ತಾನಿ ತೀವ್ರವಾದಿ ಪ್ರಚಾರಕ  ಅಮೃತ್ ಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರ ದಬ್ಬಾಳಿಕೆಗೆ ಸಂಬಂಧಿಸಿದಂತೆ ಭಗವಂತ್ ಮಾನ್ ಸರಕಾರ ಹಾಗೂ  ಕೇಂದ್ರದ ವಿರುದ್ಧ ಸಿಖ್ಖರ  ಉನ್ನತ ಸಂಘಟನೆ    ಅಕಾಲ್ ತಖ್ತ್ ತೀಕ್ಷಣ ಹೇಳಿಕೆ ನೀಡಿದ್ದು, “ಹಿಂದೂ ರಾಷ್ಟ್ರಕ್ಕಾಗಿ ಬೇಡಿಕೆ ಇಡುವವರ” ವಿರುದ್ಧ ಇದೇ ರೀತಿಯ ಕ್ರಮವನ್ನು ಏಕೆ ತೆಗೆದುಕೊಳ್ಳುವುದಿಲ್ಲ'' ಎಂದು ಪ್ರಶ್ನಿಸಿದೆ.

ಅಕಾಲ್ ತಖ್ತ್ ಜಥೇದಾರ್ ಗಿಯಾನಿ ಹರ್‌ಪ್ರೀತ್ ಸಿಂಗ್ ಅವರು ಪ್ರತ್ಯೇಕತಾವಾದಿ ಪ್ರಚಾರಕನ ವಿರುದ್ಧದ ಕಾರ್ಯಾಚರಣೆಯ ಸಮಯದಲ್ಲಿ ಬಂಧಿಸಲ್ಪಟ್ಟ ಸಿಖ್ ಯುವಕರನ್ನು ಬಿಡುಗಡೆ ಮಾಡುವಂತೆ ರಾಜ್ಯ ಸರಕಾರಕ್ಕೆ 24 ಗಂಟೆಗಳ ಗಡುವು ನೀಡಿದರು. ಪಂಜಾಬ್‌ನಲ್ಲಿನ ಪರಿಸ್ಥಿತಿಯನ್ನು ಚರ್ಚಿಸಲು ಬುದ್ಧಿಜೀವಿಗಳು, ವಕೀಲರು, ಪತ್ರಕರ್ತರು, ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರನ್ನು ಒಳಗೊಂಡ ಸಿಖ್ ಸಂಘಟನೆಗಳ ಸಭೆಯನ್ನು ಉದ್ದೇಶಿಸಿ ಸಿಂಗ್  ಮಾತನಾಡುತ್ತಿದ್ದರು.

ಅಕಾಲ್ ತಖ್ತ್ ಸಿಖ್ಖರಿಗೆ ಅಧಿಕಾರದ ಅತ್ಯುನ್ನತ ಸ್ಥಾನವಾಗಿದೆ ಮತ್ತು ಅದರ ಜತೇದಾರ್ ಅವರ ಉನ್ನತ ವಕ್ತಾರರಾಗಿದ್ದಾರೆ.

ಅಮೃತಪಾಲ್ ಸಿಂಗ್ ಹಾಗೂ  ಅವರ ಖಾಲಿಸ್ತಾನದ ಬೇಡಿಕೆಯನ್ನು ಬೆಂಬಲಿಸಿದ ಆರೋಪದ ಮೇಲೆ ಬಂಧಿಸಿದವರ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ(NSA) ಯನ್ನು ಏಕೆ ಅನ್ವಯಿಸಲಾಗಿದೆ ಎಂದು ಪ್ರಶ್ನಿಸಿದ ಅವರು, "ಹಿಂದೂ ರಾಷ್ಟ್ರಕ್ಕಾಗಿ ಬೇಡಿಕೆಯಿಡುವ ಲಕ್ಷಾಂತರ ಜನರಿದ್ದಾರೆ. ಹಿಂದೂ ರಾಷ್ಟ್ರಕ್ಕಾಗಿ ಕರೆ ನೀಡುವವರ ವಿರುದ್ಧವೂ ಕಾನೂನು ಕ್ರಮ ಜರುಗಿಸಬೇಕು. ಅವರನ್ನೂ ಸಹ NSA ಅಡಿಯಲ್ಲಿ ಬಂಧಿಸಬೇಕು''  ಎಂದು ಆಗ್ರಹಿಸಿದರು.

ಯಾವುದೇ ದೇಶವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಕಂಡುಬಂದಲ್ಲಿ ಕಸ್ಟಡಿಗೆ ತೆಗೆದುಕೊಂಡವರನ್ನು ಬಿಡುಗಡೆ ಮಾಡುವಂತೆ ರಾಜ್ಯ ಪೊಲೀಸರನ್ನು ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಮಾನ್ ಹೇಳಿದ್ದಾರೆ. ಆದರೆ, ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲ್ಪಟ್ಟ  353 ಮಂದಿಯಲ್ಲಿ 197 ಮಂದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

share
Next Story
X