Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೆಕ್ಸಿಕೊ: ವಲಸಿಗರ ಬಂಧನ ಕೇಂದ್ರದಲ್ಲಿ...

ಮೆಕ್ಸಿಕೊ: ವಲಸಿಗರ ಬಂಧನ ಕೇಂದ್ರದಲ್ಲಿ ಭೀಕರ ಅಗ್ನಿದುರಂತ; ಕನಿಷ್ಠ 37 ಮಂದಿ ಮೃತ್ಯು

28 March 2023 11:40 PM IST
share
ಮೆಕ್ಸಿಕೊ: ವಲಸಿಗರ ಬಂಧನ ಕೇಂದ್ರದಲ್ಲಿ ಭೀಕರ ಅಗ್ನಿದುರಂತ; ಕನಿಷ್ಠ 37 ಮಂದಿ ಮೃತ್ಯು

ಮೆಕ್ಸಿಕೊ ಸಿಟಿ, ಮಾ.28:  ಮೆಕ್ಸಿಕೊ ದೇಶದ ರಾಜಧಾನಿಯಲ್ಲಿನ ವಲಸಿಗರ ಬಂಧನ ಕೇಂದ್ರದಲ್ಲಿ ಸೋಮವಾರ ರಾತ್ರಿ  ಸಂಭವಿಸಿದ ಭೀಕರ ಅಗ್ನಿದುರಂತದಲ್ಲಿ ಕನಿಷ್ಠ 37 ಮಂದಿ ಸಾವನ್ನಪ್ಪಿದ್ದಾರೆ.

ಮೆಕ್ಸಿಕೊಸಿಟಿಯ  ರಸ್ತೆ ಬದಿಗಳಲ್ಲಿ  ಬೀಡುಬಿಟ್ಟಿದ್ದ ಸುಮಾರು 71 ವಲಸಿಗರನ್ನು ಸೋಮವಾರ ಸಂಜೆ ವಶಕ್ಕೆ ತೆಗೆದುಕೊಂಡು ಬಂಧನ ಕೇಂದ್ರದಲ್ಲಿರಿಸಿದ್ದರು. ಇದಾದ ಕೆಲ ಹೊತ್ತಿನ  ಬಳಿಕ ಅಗ್ನಿ ಅವಘಡ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿ ದುರಂತಕ್ಕೆ ಸಂಬಂಧಿಸಿ ಮೆಕ್ಸಿಕೊದ ರಾಷ್ಟ್ರೀಯ ವಲಸೆ ಸಂಸ್ಥೆಯು ತನಿಖೆಯನ್ನು ಆರಂಭಿಸಿದೆ.. ಆದರೆ ಅವಘಡಕ್ಕೆ  ಕಾರಣ ಹಾಗೂ ಮೃತಪಟ್ಟವರು ಯಾವ ದೇಶಕ್ಕೆ ಸೇರಿದವರು ಎಂಬ ಬಗ್ಗೆ  ಈತನಕ ಅದು ಯಾವುದೇ ಮಾಹಿತಿಯನ್ನು ಬಿಡುಗಡೆಗೊಳಿಸಿಲ್ಲ. 
ಅಗ್ನಿಶಾಮಕದಳದಸಿಬ್ಬಂದಿ ಹಾಗೂ ರಕ್ಷಣಾ ಕಾರ್ಯಕರ್ತರು  ಅಗ್ನಿದುರಂತಕ್ಕೀಡಾದ ಕಟ್ಟಡದ ವಾಹನ ಪಾರ್ಕಿಂಗ್ ಆವರಣದಲ್ಲಿ   ಹಲವಾರು ಶವಗಳನ್ನು ಸಾಲಾಗಿ ಇರಿಸಿರುವುದನ್ನು ತಾನು ಕಂಡಿರುವುದಾಗಿ ಎಎಫ್ಪಿ ಸುದ್ದಿಸಂಸ್ಥೆಯ ವರದಿಗಾರರೊಬ್ಬರು ತಿಳಿಸಿದ್ದಾರೆ.

ಪ್ರತಿ ತಿಂಗಳು ದಕ್ಷಿಣ ಅಮೆರಿಕದ ವಿವಿಧ ರಾಷ್ಟ್ರಗಳಿಂದ ಸುಮಾರು 2 ಲಕ್ಷಮಂದಿ ಮೆಕ್ಸಿಕೊ ದೇಶದ ಗಡಿಯನ್ನು ದಾಟಿ ಅಮೆರಿಕವನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಾರೆ. ಅವರಲ್ಲಿ ಹೆಚ್ಚಿನವರು ಮದ್ಯ ಹಾಗೂ ದಕ್ಷಿಣ ಅಮೆರಿಕದ ರಾಷ್ಟ್ರಗಳಿಗೆ ಸೇರಿದವರಾಗಿದ್ದಾರೆ.ತಮ್ಮ ದೇಶಗಳಲ್ಲಿ ವ್ಯಾಪಕವಾಗಿರುವ ಬಡತನ ಹಾಗೂ ಹಿಂಸಾಚಾರದಿಂದ ಪಾರಾಗಲು ತಾವು ಅಮೆರಿಕದಲ್ಲಿ  ಅಶ್ರಯ ಪಡೆಯಲು ಇಚ್ಛಿಸುವುದಕ್ಕೆ ಕಾರಣವೆಂದು ಅವರು ಹೇಳಿಕೊಳ್ಳುತ್ತಾರೆ

2014ನೇ ಇಸವಿಯಿಂದೀಚೆಗೆ ಮೆಕ್ಸಿಕೊ ಗಡಿಮಾರ್ಗವಾಗಿ ಅಮೆರಿಕವನ್ನು ಅಕ್ರಮವಾಗಿ ಪ್ರವೇಶಿಸುವ ಯತ್ನದಲ್ಲಿ  ಸುಮಾರು 7661 ಮಂದಿ ವಲಸಿಗರು ಪ್ರಾಣಕಳೆದುಕೊಂಡಿದ್ದಾರೆ ಅಥವಾ ನಾಪತ್ತೆಯಾಗಿದ್ದಾರೆ.  ಇವರಲ್ಲಿ 988 ಮಂದಿ  ಅವಘಡಗಳಲ್ಲಿ ಅಥವಾ  ಶೋಚನೀಯವಾದ ಪರಿಸ್ಥಿತಿಗಳಿಂದಾಗಿ ಸಾವನ್ನಪ್ಪಿದ್ದಾರೆಂದು ಅಂತಾರಾಷ್ಟ್ರೀಯ ವಲಸೆ ಸಂಸ್ಥೆ (ಐಓಎಂ)ಯ ವರದಿ ತಿಳಿಸಿದೆ.

share
Next Story
X