ತರೀಕೆರೆ | ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು
![ತರೀಕೆರೆ | ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು ತರೀಕೆರೆ | ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು](https://www.varthabharati.in/sites/default/files/images/articles/2023/03/29/372181-1680100481.jpg)
ಚಿಕ್ಕಮಗಳೂರು : ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ತರೀಕೆರೆ ತಾಲೂಕಿನ ಸಂದೀಪಿನಿ ಶಾಲೆ ಬಳಿ ವರದಿಯಾಗಿದೆ.
ಮೃತ ಯುವಕರನ್ನು ತರೀಕೆರೆ ಪಟ್ಟಣದ ನಿವಾಸಿಗಳಾದ ಬಿಲಾಲ್(28) ಹಾಗೂ ಅಜೀಂ(28) ಎಂದು ಗುರುತಿಸಲಾಗಿದ್ದು, ಇಬ್ಬರು ಯುವಕರು ಬುಧವಾರ ಬೆಳಗ್ಗೆ ಪಟ್ಟಣದಿಂದ ಸಂದೀಪಿನಿ ಶಾಲೆಯತ್ತ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.