Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋರ್ಟ್‌ ಆದೇಶವಿದೆ ಎಂದು ಬುಲ್ಡೋಝರ್‌...

ಕೋರ್ಟ್‌ ಆದೇಶವಿದೆ ಎಂದು ಬುಲ್ಡೋಝರ್‌ ಎದುರು ವ್ಯಕ್ತಿಯೊಬ್ಬರು ಪ್ರತಿಭಟಿಸುವ ವಿಡಿಯೋ ವೈರಲ್: ಸ್ಪಷ್ಟೀಕರಣ ನೀಡಿದ BMC

ಬಿಎಂಸಿ ಅಧಿಕಾರಿಯ ವರ್ತನೆಗೆ ನೆಟ್ಟಿಗರ ಆಕ್ರೋಶ

29 March 2023 5:58 PM IST
share
ಕೋರ್ಟ್‌ ಆದೇಶವಿದೆ ಎಂದು ಬುಲ್ಡೋಝರ್‌ ಎದುರು ವ್ಯಕ್ತಿಯೊಬ್ಬರು ಪ್ರತಿಭಟಿಸುವ ವಿಡಿಯೋ ವೈರಲ್: ಸ್ಪಷ್ಟೀಕರಣ ನೀಡಿದ BMC
ಬಿಎಂಸಿ ಅಧಿಕಾರಿಯ ವರ್ತನೆಗೆ ನೆಟ್ಟಿಗರ ಆಕ್ರೋಶ

ಮುಂಬೈ: ಇಲ್ಲಿನ ಸಾಂತಾಕ್ರುಝ್‌ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಬುಲ್ಡೋಝರ್‌ ಮೂಲಕ ಅಂಗಡಿಗಳನ್ನು ನೆಲಸಮಗೊಳಿಸುವ ವಿಡಿಯೋ ವೈರಲ್‌ ಆಗಿದೆ. ತನ್ನಲ್ಲಿ  ಕೋರ್ಟ್‌ ಆದೇಶ ಪ್ರತಿ ಇದೆ, ಕೆಡವಬೇಡಿ ಎಂದು ಹಿರಿಯ ನಾಗರಿಕರೊಬ್ಬರು ಅಧಿಕಾರಿಗಳಲ್ಲಿ ಹೇಳಿ, ಬುಲ್ಡೋಝರ್‌ ತಡೆಯಲು ಪ್ರಯತ್ನಿಸಿದ್ದರಾದರೂ, ಅಧಿಕಾರಿಗಳು ವ್ಯಕ್ತಿಯ ಮಾತನ್ನು ಕೇಳಿಸಿಕೊಳ್ಳುವ ವ್ಯವಧಾನ ತೋರಲಿಲ್ಲ ಎಂದು ಆರೋಪಿಸಲಾಗಿದೆ. 

ಘಟನೆಯ ವಿಡಿಯೋವನ್ನು ಟ್ವಿಟರಿನಲ್ಲಿ ಬಳಕೆದಾರರೊಬ್ಬರು ಹಂಚಿಕೊಂಡಿದ್ದು, “ಹಿರಿಯ ನಾಗರಿಕ ತನ್ನಲ್ಲಿ ಕೋರ್ಟ್‌ ಆದೇಶ ಇದೆ ಎಂದು ಹೇಳುತ್ತಿದ್ದಾರೆ, ಆದರೆ, ನಾನು ಕೋರ್ಟ್‌ ಆದೇಶ ಒಪ್ಪುವುದಿಲ್ಲ ಎಂದು ಅಧಿಕಾರಿ ಹೇಳುತ್ತಿದ್ದಾರೆ” ಎಂದು ಬರೆದಿದ್ದಾರೆ. 

“ಇದು ಮುಂಬೈಯ ಸಂತಾಕ್ರೂಝ್‌ನಲ್ಲಿ ನಡೆದಿದೆ, ಆ ಹಿರಿಯ ವ್ಯಕ್ತಿ ಹಾಜಿ ರಫತ್‌ ಹುಸೈನ್‌, ಹಾಗೂ ಆ ಮಹಿಳೆ ಬಿಎಂಸಿಯ ಅಧಿಕಾರಿ” ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ತಿಳಿಸಿದ್ದಾರೆ. 

ಈ ಘಟನೆಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಬಿಎಂಸಿ ಸ್ಪಷ್ಟನೆ ನೀಡಿದ್ದು, “ಅಕ್ರಮವಾಗಿ ತಗಡು ಶೀಟಿನಲ್ಲಿ ನಿರ್ಮಿಸಿದ್ದ 6 ಅಂಗಡಿಗಳನ್ನು ಸಾಂತಕ್ರಾಝ್‌ ನಿಲ್ದಾಣದ ಬಳಿ ನಿರ್ಮಿಸಲಾಗಿದೆ, ಪೊಲೀಸ್‌ ಬಂದೋಬಸ್ತಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಅಕ್ರಮ ಅಂಗಡಿಗಳಿಗೆ ಘನ ನ್ಯಾಯಾಲಯ ಯಾವುದೇ ತಡೆ ಆಜ್ಞೆ ನೀಡಿಲ್ಲ” ಎಂದು ಹೇಳಿದೆ.

The video is from Mumbai's Santacruz!

The senior citizen is Haji Rafat Hussain and that lady is a BMC officer

— Shuja (@shuja_2006) March 29, 2023

The action of demolition on those illegally kept 6 stalls was taken through H/West Ward authority with police protection on dtd.21.03.2023. No restraining legal orders from Hon'ble Court on those 6 illegal stalls.

— Ward HW BMC (@mybmcWardHW) March 29, 2023

The desperation for destruction of minority properties is clear from the arrogance of lady officer

— Raza Khan (@Raza_AKhan) March 29, 2023

She should be arrested for going against a court order....

— Nadeem Shah (@dadiyo64) March 29, 2023
share
Next Story
X