Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗ್ರಾಮೀಣ ನೀರು ಪೂರೈಕೆ ಯೋಜನೆ:...

ಗ್ರಾಮೀಣ ನೀರು ಪೂರೈಕೆ ಯೋಜನೆ: ಕರ್ನಾಟಕಕ್ಕೆ 363 ಮಿ.ಡಾ.ಸಾಲಕ್ಕೆ ವಿಶ್ವಬ್ಯಾಂಕ್ ಅನುಮೋದನೆ

29 March 2023 10:43 PM IST
share
ಗ್ರಾಮೀಣ ನೀರು ಪೂರೈಕೆ ಯೋಜನೆ: ಕರ್ನಾಟಕಕ್ಕೆ 363 ಮಿ.ಡಾ.ಸಾಲಕ್ಕೆ ವಿಶ್ವಬ್ಯಾಂಕ್ ಅನುಮೋದನೆ

ಹೊಸದಿಲ್ಲಿ,ಮಾ.29: ರಾಜ್ಯದಲ್ಲಿಯ 20 ಲಕ್ಷ ಕುಟುಂಬಗಳಿಗೆ ಅವರ ಮನೆಗಳಲ್ಲಿಯ ಪೈಪ್‌ಲೈನ್ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರನ್ನು ಒದಗಿಸಲು ಕರ್ನಾಟಕಕ್ಕೆ 363 ಮಿ.ಡಾ.(ಸುಮಾರು 2985 ಕೋ.ರೂ.)ಗಳ ಸಾಲಕ್ಕೆ ವಿಶ್ವಬ್ಯಾಂಕ್ ಅನುಮೋದನೆಯನ್ನು ನೀಡಿದೆ.

ವಿಶ್ವಬ್ಯಾಂಕ್ ಹೇಳಿಕೆಯಂತೆ ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಪೂರೈಕೆ ಕಾರ್ಯಕ್ರಮವು ರಾಜ್ಯದಲ್ಲಿಯ ಪ್ರತಿಯೊಂದೂ ಗ್ರಾಮೀಣ ಕುಟುಂಬಕ್ಕೆ ನಳ್ಳಿ ನೀರನ್ನು ಒದಗಿಸುವ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯನ್ನು ಬೆಂಬಲಿಸಲಿದೆ.

ಇದು ಕುಡಿಯುವ ನೀರಿನ ವಿತರಣೆ ಜಾಲದ ನಿರ್ಮಾಣ ಮತ್ತು ಗ್ರಾಮೀಣ ಕುಟುಂಬಗಳ ಮನೆಗಳಲ್ಲಿ ನೀರಿನ ಮೀಟರ್‌ಗಳ ಸ್ಥಾಪನೆಯನ್ನು ಒಳಗೊಂಡಿದೆ ಮತ್ತು ರಾಜ್ಯದ 31 ಜಿಲ್ಲೆಗಳ ಸುಮಾರು ಒಂದು ಕೋ.ಜನರಿಗೆ ಪ್ರಯೋಜನವಾಗಲಿದೆ ಎಂದು ವಿಶ್ವಬ್ಯಾಂಕ್ ಹೇಳಿದೆ.

ಕರ್ನಾಟಕಕ್ಕೆ ಸಾಲವನ್ನು ಪ್ರಕಟಿಸಿರುವ ವಿಶ್ವಬ್ಯಾಂಕ್,ರಾಜ್ಯದ ಸುಮಾರು ಶೇ.77ರಷ್ಟು ಪ್ರದೇಶವು ಶುಷ್ಕ ಅಥವಾ ಅರೆ ಶುಷ್ಕವಾಗಿದ್ದು,ಹವಾಮಾನ ಬದಲಾವಣೆ ಸಂಬಂಧಿತ ಮಳೆ ವ್ಯತ್ಯಯಗಳಿಂದಾಗಿ ಬರ ಮತ್ತು ಪ್ರವಾಹಗಳಿಗೆ ತುತ್ತಾಗುತ್ತದೆ. ಇದು ಅಂತರ್ಜಲ ಕುಸಿತಕ್ಕೆ ಕಾರಣವಾಗುತ್ತಿದೆ ಮತ್ತು ನೀರಿನ ಗುಣಮಟ್ಟವು ಹದಗೆಡುತ್ತಿದೆ ಎಂದು ತಿಳಿಸಿದೆ.

ಈ ಕಾರ್ಯಕ್ರಮದ ಮೂಲಕ ವಿಶ್ವಬ್ಯಾಂಕ್ ಮತ್ತು ಕರ್ನಾಟಕ ಕನಿಷ್ಠ 500 ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ 24/7 ನೀರು ಪೂರೈಕೆಯನ್ನು ಬಯಸಿವೆ ಎಂದು ಕಾರ್ಯಕ್ರಮದ ಟಾಸ್ಕ್ ಟೀಮ್ ನಾಯಕರಾದ ಕ್ರಿಸ್ಟೋಫರ್ ವೆಲ್ಸಿಯೆನ್ ಮತ್ತು ಮರಿಯಪ್ಪ ಕುಳ್ಳಪ್ಪ ತಿಳಿಸಿದರು. ಸಾಲವನ್ನು ಎರಡು ವರ್ಷಗಳ ಗ್ರೇಸ್ ಅವಧಿ ಸೇರಿದಂತೆ 13.5 ವರ್ಷಗಳಲ್ಲಿ ತೀರಿಸಬೇಕಿದೆ.

share
Next Story
X