Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೈಸಾಕಿಯಂದು ಸಿಕ್ಖ್ ಸಮಾವೇಶಕ್ಕೆ ಕರೆ...

ಬೈಸಾಕಿಯಂದು ಸಿಕ್ಖ್ ಸಮಾವೇಶಕ್ಕೆ ಕರೆ ನೀಡಿದ ಅಮೃತ್‌ಪಾಲ್!

30 March 2023 7:41 AM IST
share
ಬೈಸಾಕಿಯಂದು ಸಿಕ್ಖ್ ಸಮಾವೇಶಕ್ಕೆ ಕರೆ ನೀಡಿದ ಅಮೃತ್‌ಪಾಲ್!

ಹೊಸದಿಲ್ಲಿ: ಖಲಿಸ್ತಾನ್ ಪ್ರತಿಪಾದಕ ಅಮೃತ್‌ಪಾಲ್, ಈ ತಿಂಗಳ 14ರಂದು ಬೈಸಾಕಿ ಹಬ್ಬದ ಸಂದರ್ಭ ಪಂಜಾಬ್‌ನ ತಲವಂಡಿ ಸಾಬೋದಲ್ಲಿರುವ ದಮ್‌ದಮಾ ಸಾಹಿಬ್‌ನಲ್ಲಿ ಸರ್ಬತ್ ಖಾಲ್ಸಾ (ಸಿಕ್ಖ್ ಸಮಾವೇಶ) ಆಯೋಜಿಸುವಂತೆ ಅಕಾಲ್ ತಖ್ತ್ ಜಾತೇದಾರ್‌ಗೆ ಕರೆ ನೀಡಿರುವ ವಿಡಿಯೊ ಬುಧವಾರದಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಜಾತೇದಾರ್ ಜ್ಞಾನಿ ಹರ್‌ಪ್ರೀತ್ ಸಿಂಗ್ ಅವರು "ಅತ್ಯಂತ ಕಠಿಣ ನಿಲುವು" ತೆಗೆದುಕೊಳ್ಳಬೇಕು ಮತ್ತು ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಿಕ್ಖರು ದೊಡ್ಡ ಸಂಖ್ಯೆಯಲ್ಲಿ ಸರ್ಬತ್ ಖಾಲ್ಸಾದಲ್ಲಿ ಭಾಗವಹಿಸಬೇಕು ಎಂದು ವಿಡಿಯೊದಲ್ಲಿ ಮನವಿ ಮಾಡಿದ್ದಾರೆ. ಮಾರ್ಚ್ 18ರಿಂದ ಪೊಲೀಸರು ಅಮೃತ್‌ಪಾಲ್ ಹಾಗೂ ಅವರ ನಾಯಕತ್ವದ ಪಂಜಾಬ್ ಡೇ ಗ್ರೂಪ್ ವಿರುದ್ಧ ಕೈಗೊಂಡಿರುವ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಇಡೀ ಸಮುದಾಯದ ಭಾವನೆಗಳನ್ನು ಒಗ್ಗೂಡಿಸುವ ಪ್ರಯತ್ನ ಇದು ಎಂದು ವಿಶ್ಲೇಷಿಸಲಾಗುತ್ತಿದೆ.

ಅಮೃತ್‌ಸರ ಸಮೀಪ 2015ರಲ್ಲಿ ಸರ್ಬತ್ ಖಾಲ್ಸಾ ಆಯೋಜಿಸಿದ್ದ ಜರ್ನೈಲ್ ಸಿಂಗ್ ಸಖೀರಾ ಈ ಈ ಬಗ್ಗೆ ಪ್ರತಿಕ್ರಿಯಿಸಿ, "ಏಕ ವ್ಯಕ್ತಿ ಸರ್ಬತ್ ಖಾಲ್ಸಾಗೆ ಕರೆ ನೀಡುವಂತಿಲ್ಲ. ಇದು ನಡೆದು ಬಂದಿರುವ ಸಂಪ್ರದಾಯಕ್ಕೆ ವಿರೋಧ" ಎಂದು ಹೇಳಿದ್ದಾರೆ. ಅಮೃತ್‌ಪಾಲ್ ಜತೆ ಗುರುತಿಸಿಕೊಂಡ 360 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಆದರೆ ಅಮೃತ್‌ಪಾಲ್ ತಪ್ಪಿಸಿಕೊಂಡಿದ್ದಾರೆ.

ಈಗಾಗಲೇ ಬಂಧಿಸಿರುವ ಎಲ್ಲ ಅಮೃತ್‌ಪಾಲ್ ಬೆಂಬಲಿಗರನ್ನು ಬಿಡುಗಡೆ ಮಾಡಲು 24 ಗಂಟೆಗಳ ಗಡುವು ವಿಧಿಸಿ ವಿಶ್ವ ಸಿಕ್ಖ್ ಸಂಘಟನೆಯಾದ ಅಕಾಲ್ ತಖ್ತ್ ಜಾತೇದಾರ್ ಪಂಜಾಬ್ ಸರ್ಕಾರವನ್ನು ಆಗ್ರಹಿಸಿದೆ. ಪೊಲೀಸರು ಬಂಧಿಸಿರುವ 360 ಮಂದಿಯ ಪೈಕಿ 348 ಮಂದಿಯನ್ನು ಬಿಡುಗಡೆ ಮಾಡಲಾಗಿದ್ದು, ಉಳಿದವರನ್ನು ಶೀಘ್ರವೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

#BREAKING: Khalistani Radical Amritpal Singh releases a new video from hiding in Punjab. Requests Jathedar of Akal Takht to call Sarbad Khalsa (congregation of Sikhs) to discuss issues to save Punjab. Dares Punjab CM Bhagwant Mann and Punjab Police.

pic.twitter.com/vhcDN1lBaE

— Aditya Raj Kaul (@AdityaRajKaul) March 29, 2023
share
Next Story
X