Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದೊಂದಿಗಿನ ಸಂಬಂಧದಲ್ಲಿ ಎಚ್ಚರಿಕೆ...

ಚೀನಾದೊಂದಿಗಿನ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ ಇಯು ಕಮಿಷನರ್

30 March 2023 11:00 PM IST
share
ಚೀನಾದೊಂದಿಗಿನ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ ಇಯು ಕಮಿಷನರ್

ಬ್ರಸೆಲ್ಸ್, ಮಾ.30: ಚೀನಾದೊಂದಿಗಿನ ತಂತ್ರಜ್ಞಾನ ಕ್ಷೇತ್ರದ ವ್ಯವಹಾರದಲ್ಲಿ ಅತ್ಯಂತ ಎಚ್ಚರಿಕೆ ವಹಿಸುವ ಅಗತ್ಯವಿದೆ. ಚೀನಾದೊಂದಿಗಿನ ಸಂಬಂಧದಲ್ಲಿನ ಅಪಾಯವನ್ನು ಕನಿಷ್ಟಗೊಳಿಸಲು ಯುರೋಪಿಯನ್ ಯೂನಿಯನ್(ಇಯು) ಗಮನ ನೀಡಬೇಕಾಗಿದೆ ಎಂದು ಇಯು ಕಮಿಷನ್‍ನ  ಅಧ್ಯಕ್ಷೆ ಉರ್ಸುಲಾ ವಾನ್‍ಡರ್ ಲಿಯೆನ್ ಗುರುವಾರ ಹೇಳಿದ್ದಾರೆ.

ಕಾರ್ಯತಂತ್ರದ ವಿಷಯದಲ್ಲಿ ಚೀನಾ ಕಠಿಣ ನಿಲುವು ತಳೆಯುತ್ತಿದೆ, ಆದರೂ ಸಂಬಂಧಗಳಲ್ಲಿನ ಅಪಾಯಗಳನ್ನು ಕಡಿಮೆ ಮಾಡಿಕೊಂಡು ಆ ದೇಶದೊಂದಿಗಿನ ಸಂವಹನವನ್ನು ಕಾಪಾಡಿಕೊಳ್ಳಬೇಕಿದೆ ಎಂದ ಅವರು, ಕಳೆದ ಕೆಲ ವರ್ಷಗಳಲ್ಲಿ ಚೀನಾದೊಂದಿಗಿನ ಸಂಬಂಧ ಕಷ್ಟಕರವಾಗಿದೆ ಎಂದರು.

ಚೀನಾದ ವಿಷಯದಲ್ಲಿ ಕಠಿಣ ಕಾರ್ಯನೀತಿ ಅನುಸರಿಸುವಂತೆ ಅಮೆರಿಕದ ತೀವ್ರ ಒತ್ತಡದ ಹೊರತಾಗಿಯೂ, ಚೀನಾದೊಂದಿಗಿನ ರಾಜತಾಂತ್ರಿಕ ಸ್ಥಿರತೆ ಮತ್ತು ಮುಕ್ತ ಸಂವಹನ ಮಾರ್ಗಗಳನ್ನು ಖಾತರಿ ಪಡಿಸುವಂತೆ ಉರ್ಸುಲಾ ವಾನ್‍ಡರ್ ಆಗ್ರಹಿಸಿದ್ದಾರೆ. ರಶ್ಯದೊಂದಿಗೆ ಚೀನಾ ನಿಕಟ ಬಾಂಧವ್ಯ ಮುಂದುವರಿಸಲಿದೆ ಎಂದು ಕಳೆದ ವಾರ ಚೀನಾ ಅಧ್ಯಕ್ಷ ಕ್ಸಿಜಿಂಪಿಂಗ್ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿದ ವಾನ್‍ಡರ್ ` ಉಕ್ರೇನ್‍ನಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಆ ದೇಶದಿಂದ ರಶ್ಯದ ಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳುವಂತೆ ಮಾಡುವುದು ಜಿಂಪಿಂಗ್ ಹೊಣೆಯಾಗಿದೆ' ಎಂದರು.

ಬಲಿಷ್ಟ ಆರ್ಥಿಕ ಶಕ್ತಿಯಾಗಿರುವ ಚೀನಾದೊಂದಿಗಿನ ಸಂಬಂಧದಿಂದ ಬೇರ್ಪಡುವುದು ಕಾರ್ಯಸಾಧ್ಯವಲ್ಲ. ಆದರೆ ಈ ಸಂಬಂಧದಲ್ಲಿನ ಅಪಾಯವನ್ನು ಕಡಿಮೆಗೊಳಿಸುವತ್ತ ಗಮನ ಹರಿಸಬೇಕಿದೆ. ಆರ್ಥಿಕವಾಗಿ, ಚೀನಾದೊಂದಿಗಿನ ಸಂಬಂಧವನ್ನು  `ಮರುಸಮತೋಲನ' ಮಾಡಬೇಕಿದೆ ಮತ್ತು ಚೀನಾದ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸಬೇಕಿದೆ. ಯುರೋಪಿಯನ್ ಯೂನಿಯನ್ ಆರ್ಥಿಕ ವಿರೂಪಗಳನ್ನು ಎದುರಿಸಲು ಮತ್ತು ತನ್ನ ಭದ್ರತಾ ಹಿತಾಸಕ್ತಿಗಳನ್ನು ರಕ್ಷಿಸಲು ಈಗಾಗಲೇ ಹಲವು ಕ್ರಮಗಳನ್ನು ಹೊಂದಿದೆ. ಆದರೆ ಬದಲಾಗುತ್ತಿರುವ ಚೀನಾದೊಂದಿಗೆ ಹಂಚಿಕೊಂಡಿರುವ ಹೈ-ಟೆಕ್ ಕ್ಷೇತ್ರದ ಬಗ್ಗೆಯೂ ಗಮನಹರಿಸಬೇಕಿದೆ .

ವ್ಯವಸ್ಥಿತ ಪ್ರತಿಸ್ಪರ್ಧಿಯ ಮಿಲಿಟರಿ ಅಥವಾ ಗುಪ್ತಚರ ಸಾಮಥ್ರ್ಯಗಳನ್ನು ಹೆಚ್ಚಿಸುವುದಿಲ್ಲ ಎಂದು ಖಾತರಿಪಡಿಸಲು ಕೆಲವು ಸೂಕ್ಷ್ಮತಂತ್ರಜ್ಞಾನಗಳಲ್ಲಿ ಹೂಡಿಕೆಯ ಹೊರಹರಿವನ್ನು ನಿಯಂತ್ರಿಸುವ ಕ್ರಮಗಳ ಕುರಿತ ತನ್ನ ಯೋಜನೆಗಳನ್ನು ಯುರೋಪಿಯನ್ ಯೂನಿಯನ್  ಈ ವರ್ಷಾಂತ್ಯ ಪ್ರಸ್ತುತಪಡಿಸಲಿದೆ  ಎಂದು  ಉರ್ಸುಲಾ ವಾನ್‍ಡರ್ ಲಿಯೆನ್ ಹೇಳಿದ್ದಾರೆ.  

share
Next Story
X